<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ಶೀಶ್ ಮಹಲ್' ನವೀಕರಣಕ್ಕೆ ಮಾಡಲಾಗಿರುವ ವೆಚ್ಚದ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಜಾಗೃತ ಆಯೋಗವು (ಸಿವಿಸಿ) ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದೆ ಎಂದು ಬಿಜೆಪಿ ನಾಯಕ ವಿಜೇಂದರ್ ಗುಪ್ತಾ ಶನಿವಾರ ಹೇಳಿದ್ದಾರೆ.</p><p>ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶೀಶ್ ಮಹಲ್ನಲ್ಲಿ 2015ರಿಂದ 2024ರ ಅಕ್ಟೋಬರ್ವರೆಗೆ ವಾಸವಿದ್ದರು.</p><p>ವಿಜೇಂದರ್ ಗುಪ್ತಾ ಹೇಳಿಕೆ ಸಂಬಂಧ ಆಮ್ ಆದ್ಮಿ ಪಕ್ಷ (ಎಎಪಿ) ಅಥವಾ ಕೇಜ್ರಿವಾಲ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p><p>ರಾಷ್ಟ್ರ ರಾಜಧಾನಿ ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಚುನಾವಣೆ ಸಂದರ್ಭದಲ್ಲಿ, ಸಿಎಂ ನಿವಾಸ ನವೀಕರಣ ವಿಚಾರ ಚರ್ಚೆಯಾಗಿತ್ತು. ನವೀಕರಣದ ವೇಳೆ ಭಾರಿ ಅಕ್ರಮ ನಡೆದಿದೆ ಎಂದು ಪ್ರಚಾರದುದ್ದಕ್ಕೂ ವಾಗ್ದಾಳಿ ನಡೆಸಿದ್ದ ಬಿಜೆಪಿ, ಎಎಪಿ ನಾಯಕ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿತ್ತು.</p>.Delhi Assembly Elections: ಭಾರಿ ಬಹುಮತ ಸಾಧಿಸಿದ ಬಿಜೆಪಿ ಕೈ ಹಿಡಿದ ಅಂಶಗಳೇನು?.Delhi Elections: ತೀವ್ರ ಮುಖಭಂಗದ ನಡುವೆ ಕಾಂಗ್ರೆಸ್ಗೆ ಎಎಪಿ ಸೋಲಿನ ಸಮಾಧಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ಶೀಶ್ ಮಹಲ್' ನವೀಕರಣಕ್ಕೆ ಮಾಡಲಾಗಿರುವ ವೆಚ್ಚದ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಜಾಗೃತ ಆಯೋಗವು (ಸಿವಿಸಿ) ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದೆ ಎಂದು ಬಿಜೆಪಿ ನಾಯಕ ವಿಜೇಂದರ್ ಗುಪ್ತಾ ಶನಿವಾರ ಹೇಳಿದ್ದಾರೆ.</p><p>ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶೀಶ್ ಮಹಲ್ನಲ್ಲಿ 2015ರಿಂದ 2024ರ ಅಕ್ಟೋಬರ್ವರೆಗೆ ವಾಸವಿದ್ದರು.</p><p>ವಿಜೇಂದರ್ ಗುಪ್ತಾ ಹೇಳಿಕೆ ಸಂಬಂಧ ಆಮ್ ಆದ್ಮಿ ಪಕ್ಷ (ಎಎಪಿ) ಅಥವಾ ಕೇಜ್ರಿವಾಲ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p><p>ರಾಷ್ಟ್ರ ರಾಜಧಾನಿ ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಚುನಾವಣೆ ಸಂದರ್ಭದಲ್ಲಿ, ಸಿಎಂ ನಿವಾಸ ನವೀಕರಣ ವಿಚಾರ ಚರ್ಚೆಯಾಗಿತ್ತು. ನವೀಕರಣದ ವೇಳೆ ಭಾರಿ ಅಕ್ರಮ ನಡೆದಿದೆ ಎಂದು ಪ್ರಚಾರದುದ್ದಕ್ಕೂ ವಾಗ್ದಾಳಿ ನಡೆಸಿದ್ದ ಬಿಜೆಪಿ, ಎಎಪಿ ನಾಯಕ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿತ್ತು.</p>.Delhi Assembly Elections: ಭಾರಿ ಬಹುಮತ ಸಾಧಿಸಿದ ಬಿಜೆಪಿ ಕೈ ಹಿಡಿದ ಅಂಶಗಳೇನು?.Delhi Elections: ತೀವ್ರ ಮುಖಭಂಗದ ನಡುವೆ ಕಾಂಗ್ರೆಸ್ಗೆ ಎಎಪಿ ಸೋಲಿನ ಸಮಾಧಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>