ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ರನ್ನು ಶುಕ್ರವಾರ ಮಾದಕ ವಸ್ತುಗಳ ನಿಯಂತ್ರಣ ಘಟಕ(ಎನ್ಸಿಬಿ) ಆರೋಪ ಮುಕ್ತಗೊಳಿಸಿದೆ. ಇಷ್ಟು ದಿನ ಅವರು ಜೈಲಿನಲ್ಲಿ ಅನುಭವಿಸಿದ ಮಾನಸಿಕ ಯಾತನೆಗೆ ಯಾರು ಹೊಣೆ?, ಈ ಬಗ್ಗೆ ದೇಶದ ಜನತೆಗೆ ಎನ್ಸಿಬಿಯ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಉತ್ತರಿಸಬೇಕು. ತಪ್ಪು ಮಾಡದ ಯುವಕನ ಮೇಲೆ ಅಪವಾದ ಹೊರಿಸಿದ್ದು ಏಕೆ?, ಇದರ ಹಿಂದಿನ ಷಡ್ಯಂತ್ರವೇನು ಎಂದು ಎನ್ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ ಪ್ರಶ್ನಿಸಿದ್ದಾರೆ.