<p><strong>ತೆಲಂಗಾಣ:</strong> ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣದಲ್ಲಿ ಮುಸ್ಲಿಂ ಮೀಸಲಾತಿಯನ್ನು ರದ್ದುಪಡಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದು, ‘ತೆಲಂಗಾಣದಲ್ಲಿ ಮುಸ್ಲಿಮರಲ್ಲಿ ಹಿಂದುಳಿದವರಿಗೆ ಮೀಸಲಾತಿ ನೀಡಲಾಗುತ್ತಿದೆಯೇ ಹೊರತು ಧರ್ಮದ ಆಧಾರದಲ್ಲಿ ಅಲ್ಲ‘ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅಸಾದುದ್ದೀನ್ ಓವೈಸಿ, ‘ಹಿಂದುಳಿದ ಮುಸ್ಲಿಮರನ್ನು ತಲುಪುವಂತೆ ತಮ್ಮ ಕಾರ್ಯಕರ್ತರಿಗೆ ಪ್ರಧಾನಿ ಅವರು ಹೇಳುತ್ತಾರೆ. ಅಮಿತ್ ಶಾ ಮುಸ್ಲಿಮರ ಮೀಸಲಾತಿ ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ಬಿಜೆಪಿ ಮತ್ತು ಮೋದಿ ಹೇಳಿಕೆಯಲ್ಲಿ ಯಾವುದೇ ನಂಬಿಕೆಯಿಲ್ಲ‘ ಎಂದು ಹೇಳಿದರು.</p>.<p>‘ತೆಲಂಗಾಣದಲ್ಲಿರುವ ಬಿಸಿ(ಇ) ಹಿಂದುಳಿದ ಮುಸ್ಲಿಮರಿಗೆ ಮೀಸಲಾಗಿದೆ. ತಜ್ಞರ ವರದಿಗಳು ಮತ್ತು ಅಂದಿನ ಅವಿಭಜಿತ ಆಂಧ್ರಪ್ರದೇಶ ಸರ್ಕಾರದ ಒಬಿಸಿ ಆಯೋಗದ ವರದಿಗಳ ಆಧಾರದ ಮೇಲೆಯೇ ಮುಸ್ಲಿಮರಲ್ಲಿ ಹಿಂದುಳಿದವರಿಗೆ ಮೀಸಲಾತಿ ನೀಡಲಾಗಿದೆ. ಇಷ್ಟೆಲ್ಲ ತಿಳಿದು ಯಾಕೆ ಬಿಜೆಪಿ ಪಕ್ಷ ಹಿಂದುಳಿದ ಮುಸ್ಲಿಮರ ವಿರುದ್ಧವಿದೆ?‘ ಎಂದು ಕೇಳಿದರು.</p><p>‘ಇಷ್ಟೆಲ್ಲ ಮಾತನಾಡುವ ಕೇಂದ್ರ ನಾಯಕರು ತೆಲಂಗಾಣ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡ 6ರಿಂದ 9ಕ್ಕೆ ಹೆಚ್ಚಿಸುವ ಮತ್ತು ಮುಸ್ಲಿಮರಲ್ಲಿ ಹಿಂದುಳಿದ ಜಾತಿಗಳಿಗೆ ಶೇಕಡ 12ರಷ್ಟು ಕೋಟಾವನ್ನು ನೀಡುವ ಕಾಯ್ದೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ?‘ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಲಂಗಾಣ:</strong> ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣದಲ್ಲಿ ಮುಸ್ಲಿಂ ಮೀಸಲಾತಿಯನ್ನು ರದ್ದುಪಡಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದು, ‘ತೆಲಂಗಾಣದಲ್ಲಿ ಮುಸ್ಲಿಮರಲ್ಲಿ ಹಿಂದುಳಿದವರಿಗೆ ಮೀಸಲಾತಿ ನೀಡಲಾಗುತ್ತಿದೆಯೇ ಹೊರತು ಧರ್ಮದ ಆಧಾರದಲ್ಲಿ ಅಲ್ಲ‘ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅಸಾದುದ್ದೀನ್ ಓವೈಸಿ, ‘ಹಿಂದುಳಿದ ಮುಸ್ಲಿಮರನ್ನು ತಲುಪುವಂತೆ ತಮ್ಮ ಕಾರ್ಯಕರ್ತರಿಗೆ ಪ್ರಧಾನಿ ಅವರು ಹೇಳುತ್ತಾರೆ. ಅಮಿತ್ ಶಾ ಮುಸ್ಲಿಮರ ಮೀಸಲಾತಿ ರದ್ದುಪಡಿಸುತ್ತೇವೆ ಎಂದು ಹೇಳುತ್ತಾರೆ. ಬಿಜೆಪಿ ಮತ್ತು ಮೋದಿ ಹೇಳಿಕೆಯಲ್ಲಿ ಯಾವುದೇ ನಂಬಿಕೆಯಿಲ್ಲ‘ ಎಂದು ಹೇಳಿದರು.</p>.<p>‘ತೆಲಂಗಾಣದಲ್ಲಿರುವ ಬಿಸಿ(ಇ) ಹಿಂದುಳಿದ ಮುಸ್ಲಿಮರಿಗೆ ಮೀಸಲಾಗಿದೆ. ತಜ್ಞರ ವರದಿಗಳು ಮತ್ತು ಅಂದಿನ ಅವಿಭಜಿತ ಆಂಧ್ರಪ್ರದೇಶ ಸರ್ಕಾರದ ಒಬಿಸಿ ಆಯೋಗದ ವರದಿಗಳ ಆಧಾರದ ಮೇಲೆಯೇ ಮುಸ್ಲಿಮರಲ್ಲಿ ಹಿಂದುಳಿದವರಿಗೆ ಮೀಸಲಾತಿ ನೀಡಲಾಗಿದೆ. ಇಷ್ಟೆಲ್ಲ ತಿಳಿದು ಯಾಕೆ ಬಿಜೆಪಿ ಪಕ್ಷ ಹಿಂದುಳಿದ ಮುಸ್ಲಿಮರ ವಿರುದ್ಧವಿದೆ?‘ ಎಂದು ಕೇಳಿದರು.</p><p>‘ಇಷ್ಟೆಲ್ಲ ಮಾತನಾಡುವ ಕೇಂದ್ರ ನಾಯಕರು ತೆಲಂಗಾಣ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡ 6ರಿಂದ 9ಕ್ಕೆ ಹೆಚ್ಚಿಸುವ ಮತ್ತು ಮುಸ್ಲಿಮರಲ್ಲಿ ಹಿಂದುಳಿದ ಜಾತಿಗಳಿಗೆ ಶೇಕಡ 12ರಷ್ಟು ಕೋಟಾವನ್ನು ನೀಡುವ ಕಾಯ್ದೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ?‘ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>