ಮಹಾರಾಷ್ಟ್ರದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತರ ಬಗ್ಗೆ ನಿಗಾವಹಿಸುವ ಕಾರ್ಯವನ್ನು ಆಶಾ ಕಾರ್ಯಕರ್ತರಿಗೆ ನೀಡಲಾಗಿದೆ. ಇವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಧನ ರೂಪದಲ್ಲಿ₹2000 ಹೆಚ್ಚಳ ಮಾಡಲುಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ತೊಪೆ ಅವರು ಪ್ರಸ್ತಾವ ಸಿದ್ಧಪಡಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.