<p><strong>ಇಂದೋರ್:</strong> ‘ಇಬ್ಬರೂ ಕಾಂಗ್ರೆಸ್ನ ಆಸ್ತಿಗಳು‘– ಇದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹಾಗೂ ಶಾಸಕ ಸಚಿನ್ ಪೈಲಟ್ ನಡುವಿನ ಮುಸುಕಿನ ಗುದ್ದಾಟ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ ಪರಿ.</p>.<p>‘ಸಚಿನ್ ಪೈಲಟ್ ಒಬ್ಬ ದ್ರೋಹಿ, ಅವರನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಿಲ್ಲ‘ ಎಂದು ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅಶೋಕ್ ಗೆಹಲೋತ್ ಹೇಳಿದ್ದರು. ‘ಹಿರಿಯ ನಾಯರಾದವರು ಈ ರೀತಿ ಹೇಳಿಕೆ ನೀಡಬಾರದು‘ ಎಂದು ಸಚಿನ್ ಪೈಲಟ್ ತಿರುಗೇಟು ನೀಡಿದ್ದರು. ಎರಡು ಬಣಗಳ ನಡುವಿನ ಗುದ್ದಾಟ ರಾಜಸ್ಥಾನ ಕಾಂಗ್ರೆಸ್ನಲ್ಲಿ ಸಂಚಲನ ಉಂಟು ಮಾಡಿತ್ತು.</p>.<p>ಈ ಸಂಬಂಧ ಸೋಮವಾರ ಪತ್ರಕರ್ತರು ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ ಈ ರೀತಿ ಉತ್ತರಿಸಿದ್ದಾರೆ.</p>.<p>ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆ ಸದ್ಯ ಮಧ್ಯಪ್ರದೇಶದ ಇಂದೋರ್ನಲ್ಲಿ ಇದ್ದು, ಈ ವೇಳೆ ಪತ್ರಕರ್ತರು ಅವರನ್ನು ಪ್ರಶ್ನೆ ಮಾಡಿದ್ದಾರೆ.</p>.<p>‘ನಾನು ಪ್ರತೀ ಬಾರಿ ಒಂದೊಂದು ರಾಜ್ಯ ಪ್ರವೇಶ ಮಾಡುವಾಗಲೂ ಅಲ್ಲಿ ಸಮಸ್ಯೆ ಇದೆ ಎಂದು ನೀವು ಹೇಳುತ್ತೀರಿ. ಈಗ ರಾಜಸ್ಥಾನದಲ್ಲಿ ಸಮಸ್ಯೆ ಇದೆ ಎಂದು ನೀವು ಹೇಳುತ್ತೀದ್ದೀರಿ. ಅವರಿಬ್ಬರೂ ಕಾಂಗ್ರೆಸ್ನ ಆಸ್ತಿಗಳು‘ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಈ ಹಿಂದೆ ಇವರಿಬ್ಬರ ನಡುವಣ ಗುದ್ದಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಹಿರಿಯ ನಾಯಕ ಜೈರಾಮ್ ರಮೇಶ್ ‘ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ‘ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ‘ಇಬ್ಬರೂ ಕಾಂಗ್ರೆಸ್ನ ಆಸ್ತಿಗಳು‘– ಇದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹಾಗೂ ಶಾಸಕ ಸಚಿನ್ ಪೈಲಟ್ ನಡುವಿನ ಮುಸುಕಿನ ಗುದ್ದಾಟ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ ಪರಿ.</p>.<p>‘ಸಚಿನ್ ಪೈಲಟ್ ಒಬ್ಬ ದ್ರೋಹಿ, ಅವರನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಿಲ್ಲ‘ ಎಂದು ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅಶೋಕ್ ಗೆಹಲೋತ್ ಹೇಳಿದ್ದರು. ‘ಹಿರಿಯ ನಾಯರಾದವರು ಈ ರೀತಿ ಹೇಳಿಕೆ ನೀಡಬಾರದು‘ ಎಂದು ಸಚಿನ್ ಪೈಲಟ್ ತಿರುಗೇಟು ನೀಡಿದ್ದರು. ಎರಡು ಬಣಗಳ ನಡುವಿನ ಗುದ್ದಾಟ ರಾಜಸ್ಥಾನ ಕಾಂಗ್ರೆಸ್ನಲ್ಲಿ ಸಂಚಲನ ಉಂಟು ಮಾಡಿತ್ತು.</p>.<p>ಈ ಸಂಬಂಧ ಸೋಮವಾರ ಪತ್ರಕರ್ತರು ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ ಈ ರೀತಿ ಉತ್ತರಿಸಿದ್ದಾರೆ.</p>.<p>ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆ ಸದ್ಯ ಮಧ್ಯಪ್ರದೇಶದ ಇಂದೋರ್ನಲ್ಲಿ ಇದ್ದು, ಈ ವೇಳೆ ಪತ್ರಕರ್ತರು ಅವರನ್ನು ಪ್ರಶ್ನೆ ಮಾಡಿದ್ದಾರೆ.</p>.<p>‘ನಾನು ಪ್ರತೀ ಬಾರಿ ಒಂದೊಂದು ರಾಜ್ಯ ಪ್ರವೇಶ ಮಾಡುವಾಗಲೂ ಅಲ್ಲಿ ಸಮಸ್ಯೆ ಇದೆ ಎಂದು ನೀವು ಹೇಳುತ್ತೀರಿ. ಈಗ ರಾಜಸ್ಥಾನದಲ್ಲಿ ಸಮಸ್ಯೆ ಇದೆ ಎಂದು ನೀವು ಹೇಳುತ್ತೀದ್ದೀರಿ. ಅವರಿಬ್ಬರೂ ಕಾಂಗ್ರೆಸ್ನ ಆಸ್ತಿಗಳು‘ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಈ ಹಿಂದೆ ಇವರಿಬ್ಬರ ನಡುವಣ ಗುದ್ದಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಹಿರಿಯ ನಾಯಕ ಜೈರಾಮ್ ರಮೇಶ್ ‘ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ‘ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>