<p><strong>ಮುಂಬೈ</strong>: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಶೋಕ್ ಖರಾತ್ನನ್ನು ಬಂಧಿಸಲು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಇಲ್ಲಿನ ವಿಶೇಷ ನ್ಯಾಯಾಲಯ ಮಂಗಳವಾರ ಅನುಮತಿ ನೀಡಿದೆ. </p><p>ಈಗಾಗಲೇ ಅತ್ಯಾಚಾರ ಮತ್ತು ವಂಚನೆ ಪ್ರಕರಣಗಳಲ್ಲಿ ಸಿಲುಕಿ ನಾಸಿಕ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅಶೋಕ್ ಖರಾತ್ನನ್ನು ಇ.ಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಇ.ಡಿ ಅಧಿಕಾರಿಗಳು ಅಶೋಕ್ ಖರಾತ್ನನ್ನು ಬಂಧಿಸಲು ಕೋರಿದ ಅನುಮತಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ನಡೆಸಿದ ನಂತರ ಇ.ಡಿ ಅಧಿಕಾರಿಗಳು ಆತನನ್ನು ಬಂಧಿಸಲಿದೆ. ನಂತರ ₹ 70 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಹಣ ಸುಲಿಗೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವುದು, ಅತ್ಯಾಚಾರ ಹಾಗೂ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಅಶೋಕ್ ಖರಾತ್ ಜೈಲಿನಲ್ಲಿದ್ದಾರೆ.</p><p>ನೂರಾರು ಕೋಟಿ ರೂಪಾಯಿ ಸುಲಿಗೆ, 'ಬೇನಾಮಿ' ಬ್ಯಾಂಕ್ ಖಾತೆಗಳ ಮೂಲಕ ₹ 70 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಆರೋಪ ಖರಾತ್ ಮೇಲಿದೆ. ಹಾಗೂ ಒಂದೇ ದಿನದಲ್ಲಿ 60 ಬ್ಯಾಂಕ್ಗಳ ಮೂಲಕ ಹಣ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಶೋಕ್ ಖರಾತ್ನನ್ನು ಬಂಧಿಸಲು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಇಲ್ಲಿನ ವಿಶೇಷ ನ್ಯಾಯಾಲಯ ಮಂಗಳವಾರ ಅನುಮತಿ ನೀಡಿದೆ. </p><p>ಈಗಾಗಲೇ ಅತ್ಯಾಚಾರ ಮತ್ತು ವಂಚನೆ ಪ್ರಕರಣಗಳಲ್ಲಿ ಸಿಲುಕಿ ನಾಸಿಕ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅಶೋಕ್ ಖರಾತ್ನನ್ನು ಇ.ಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಇ.ಡಿ ಅಧಿಕಾರಿಗಳು ಅಶೋಕ್ ಖರಾತ್ನನ್ನು ಬಂಧಿಸಲು ಕೋರಿದ ಅನುಮತಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ನಡೆಸಿದ ನಂತರ ಇ.ಡಿ ಅಧಿಕಾರಿಗಳು ಆತನನ್ನು ಬಂಧಿಸಲಿದೆ. ನಂತರ ₹ 70 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಹಣ ಸುಲಿಗೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವುದು, ಅತ್ಯಾಚಾರ ಹಾಗೂ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಅಶೋಕ್ ಖರಾತ್ ಜೈಲಿನಲ್ಲಿದ್ದಾರೆ.</p><p>ನೂರಾರು ಕೋಟಿ ರೂಪಾಯಿ ಸುಲಿಗೆ, 'ಬೇನಾಮಿ' ಬ್ಯಾಂಕ್ ಖಾತೆಗಳ ಮೂಲಕ ₹ 70 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಆರೋಪ ಖರಾತ್ ಮೇಲಿದೆ. ಹಾಗೂ ಒಂದೇ ದಿನದಲ್ಲಿ 60 ಬ್ಯಾಂಕ್ಗಳ ಮೂಲಕ ಹಣ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>