<p><strong>ನಾಗ್ಪುರ:</strong> ‘ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ, ಸ್ವಯಂ ಘೋಷಿತ ದೇವಮಾನವ ಅಶೋಕ್ ಖರಾತ್ ಅವರ ಪ್ರಕರಣವನ್ನು ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಭಾನುವಾರ ಹೇಳಿದ್ದಾರೆ.</p>.<p>‘ಮರ್ಚೆಂಟ್ ನೌಕಾಪಡೆಯ ನಿವೃತ್ತ ಅಧಿಕಾರಿ’ ಎಂದು ಹೇಳಿಕೊಳ್ಳುವ ಅವರು, ‘ಕ್ಯಾಪ್ಟನ್’ ಎಂದೇ ಗುರುತಿಸಿಕೊಂಡಿದ್ದಾರೆ. ಅವರ ಆಧ್ಯಾತ್ಮಿಕ ಸಲಹೆ ಪಡೆಯಲು ಅನೇಕ ರಾಜಕೀಯ ನಾಯಕರು ಭೇಟಿ ಮಾಡುತ್ತಿದ್ದರು.</p>.<p>‘ಮೂರು ವರ್ಷಗಳಲ್ಲಿ ಖರಾತ್ ಅವರು ನನ್ನ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ’ ಎಂದು 35 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ನಾಸಿಕ್ ಪೊಲೀಸರು ಖರಾತ್ ಅವರನ್ನು ಬಂಧಿಸಿದ್ದಾರೆ.</p>.<p>‘ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದಾರೆ. ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಯಾವುದೇ ಕಾರಣವಿಲ್ಲದೆ ಈ ಪ್ರಕರಣವನ್ನು ರಾಜಕೀಯಗೊಳಿಸುವುದು ಸರಿಯಲ್ಲ. ಈ ಆರೋಪಗಳನ್ನು ಸಾಬೀತುಪಡಿಸುವಂತಹ ಸಾಕ್ಷ್ಯಗಳಿದ್ದರೆ ಪೊಲೀಸರಿಗೆ ನೀಡುವ ಮೂಲಕ ತನಿಖೆಗೆ ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ‘ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ, ಸ್ವಯಂ ಘೋಷಿತ ದೇವಮಾನವ ಅಶೋಕ್ ಖರಾತ್ ಅವರ ಪ್ರಕರಣವನ್ನು ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಭಾನುವಾರ ಹೇಳಿದ್ದಾರೆ.</p>.<p>‘ಮರ್ಚೆಂಟ್ ನೌಕಾಪಡೆಯ ನಿವೃತ್ತ ಅಧಿಕಾರಿ’ ಎಂದು ಹೇಳಿಕೊಳ್ಳುವ ಅವರು, ‘ಕ್ಯಾಪ್ಟನ್’ ಎಂದೇ ಗುರುತಿಸಿಕೊಂಡಿದ್ದಾರೆ. ಅವರ ಆಧ್ಯಾತ್ಮಿಕ ಸಲಹೆ ಪಡೆಯಲು ಅನೇಕ ರಾಜಕೀಯ ನಾಯಕರು ಭೇಟಿ ಮಾಡುತ್ತಿದ್ದರು.</p>.<p>‘ಮೂರು ವರ್ಷಗಳಲ್ಲಿ ಖರಾತ್ ಅವರು ನನ್ನ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ’ ಎಂದು 35 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ನಾಸಿಕ್ ಪೊಲೀಸರು ಖರಾತ್ ಅವರನ್ನು ಬಂಧಿಸಿದ್ದಾರೆ.</p>.<p>‘ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದಾರೆ. ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಯಾವುದೇ ಕಾರಣವಿಲ್ಲದೆ ಈ ಪ್ರಕರಣವನ್ನು ರಾಜಕೀಯಗೊಳಿಸುವುದು ಸರಿಯಲ್ಲ. ಈ ಆರೋಪಗಳನ್ನು ಸಾಬೀತುಪಡಿಸುವಂತಹ ಸಾಕ್ಷ್ಯಗಳಿದ್ದರೆ ಪೊಲೀಸರಿಗೆ ನೀಡುವ ಮೂಲಕ ತನಿಖೆಗೆ ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>