<p><strong>ಮುಂಬೈ:</strong> ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ, ಸ್ವಯಂಘೋಷಿತ ದೇವಮಾನವ ಅಶೋಕ್ ಖರಾತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಕಳೆದ ಐದು ದಿನಗಳಲ್ಲಿ 50ಕ್ಕೂ ಹೆಚ್ಚಿನ ದೂರವಾಣಿ ಕರೆಗಳನ್ನು ಸ್ವೀಕರಿಸಿದೆ.</p>.<p>ಖರಾತ್ ಹಾಗೂ ಅವರ ಅಪರಾಧ ಕೃತ್ಯಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡುವಂತೆ ಎರಡು ಮೊಬೈಲ್ ಫೋನ್ ಸಂಖ್ಯೆಗಳನ್ನು ಎಸ್ಐಟಿ ಪ್ರಕಟಿಸಿತ್ತು. </p>.<p>ಖರಾತ್ ವಿರುದ್ಧ ಲೈಂಗಿಕ ದೌರ್ಜನ್ಯ, ಸುಲಿಗೆ ಹಾಗೂ ಆಕ್ಷೇಪಾರ್ಹ ವಿಷಯಗಳ ಹಂಚಿಕೆ ಆರೋಪದಡಿ ಅನೇಕ ದೂರುಗಳು ಬಂದಿದ್ದವು. ಹೀಗಾಗಿ, ಅವರ ವಿರುದ್ಧ ಎಂಟು ಪ್ರಕರಣಗಳು ದಾಖಲಾಗಿವೆ.</p>.<p>‘ಪ್ರತಿದಿನ 15ರಿಂದ 20 ದೂರವಾಣಿ ಕರೆಗಳು ಬಂದಿವೆ. ಕಳೆದ ಐದು ದಿನಗಳಲ್ಲಿ 50 ಕರೆಗಳನ್ನು ಸ್ವೀಕರಿಸಲಾಗಿದೆ. ಈ ದೂರುಗಳನ್ನು ತಂಡ ಪರಿಶೀಲಿಸುತ್ತಿದೆ. ದೂರು ನೀಡುವವರ ಮಾಹಿತಿಯನ್ನು ಗೋಪ್ಯವಾಗಿ ಇಡಲಾಗುತ್ತಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p><strong>ದಾಖಲೆ ವಶ:</strong> ನಾಸಿಕ್ನ ಖರಾತ್ ಅವರ ಕಚೇರಿಗೆ ಎಸ್ಐಟಿ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆಲ ದಾಖಲೆಗಳು, ಕಡತಗಳು, ಡೈರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಶಸ್ತ್ರಾಸ್ತ್ರ ಪರವಾನಗಿ ಅಮಾನತು: ಖರಾತ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುವುದರಿಂದ ಶಸ್ತ್ರಾಸ್ತ್ರ ಪರವಾನಗಿಯನ್ನು ಅಮಾನತು ಮಾಡಿ ನಾಸಿಕ್ನ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ನಾಸಿಕ್ ಜಿಲ್ಲೆಯ ಸಿನ್ನಾರ್ನಲ್ಲಿರುವ ಶ್ರೀ ಈಶಾನ್ಯೇಶ್ವರ ದೇವಸ್ಥಾನ ಟ್ರಸ್ಟ್ ಮುಖ್ಯಸ್ಥರಾದ ಖರಾತ್ ಅವರನ್ನು ಕಳೆದ ಒಂದು ವರ್ಷದಿಂದ ಅನೇಕ ರಾಜಕೀಯ ನಾಯಕರು ಭೇಟಿ ಮಾಡಿದ್ದರು.</p>.<p>‘ಮೂರು ವರ್ಷಗಳ ಅವಧಿಯಲ್ಲಿ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ’ ಎಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿದ ನಂತರ ಮಾರ್ಚ್ 18ರಂದು ಖರಾತ್ ಅವರನ್ನು ಬಂಧಿಸಲಾಗಿತ್ತು.</p>.<p><strong>‘ಸಂತ್ರಸ್ತೆಯರ ವಿಡಿಯೊ ಹಂಚಿದರೆ ಕ್ರಿಮಿನಲ್ ಪ್ರಕರಣ’</strong> </p><p>ಮುಂಬೈ: ‘ಅಶೋಕ್ ಖರಾತ್ ಅವರಿಂದ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತಿಳಿಸಿದ್ದಾರೆ. ‘ಖರಾತ್ ವಿರುದ್ಧ ದೂರು ನೀಡಲು ಅನೇಕ ಸಂತ್ರಸ್ತೆಯರು ಮುಂದೆ ಬರುತ್ತಿದ್ದು ಮತ್ತಷ್ಟು ಪ್ರಕರಣಗಳು ದಾಖಲಾಗಿವೆ. ಸಂತ್ರಸ್ತೆಯರ ವಿವರಗಳನ್ನು ಗೋಪ್ಯವಾಗಿ ಇಡುವುದಲ್ಲದೆ ಅವರಿಗೆ ಅಗತ್ಯ ರಕ್ಷಣೆ ನೀಡಲಾಗುವುದು’ ಎಂದು ಹೇಳಿದ್ದಾರೆ.</p>.<p><strong>‘ಶಿವನ ಅವತಾರ ಎಂದು ನಂಬಿಸಿ ಅತ್ಯಾಚಾರ’</strong> </p><p>ಪಾಲ್ಘರ್/ಪುಣೆ: ಮಹಿಳೆಯರ ಮೇಲೆ ಅತ್ಯಾಚಾರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಯಂಘೋಷಿತ ದೇವಮಾನವ ಅಶೋಕ್ ಖರಾತ್ ಅವರನ್ನು ಬಂಧಿಸಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಮೊತ್ತೊಬ್ಬ ‘ದೇವಮಾನವ’ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.</p><p> ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಹೃಷಿಕೇಶ್ ವೈದ್ಯ (40) ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‘ಭಗವಾನ್ ಶಿವನ ಅವತಾರ ಎಂದು ನಂಬಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದು ಪುಣೆಯ 35 ವರ್ಷದ ಮಹಿಳೆಯೊಬ್ಬರು ಹೃಷಿಕೇಶ್ ಅವರ ವಿರುದ್ಧ ದೂರು ನೀಡಿದ್ದಾರೆ’ ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. </p><p>ಈ ಆರೋಪವನ್ನು ನಿರಾಕರಿಸಿರುವ ಹೃಷಿಕೇಶ್ ‘ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ’ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮಹಿಳೆಯು 2023ರಲ್ಲಿ ಫೇಸ್ಬುಕ್ ಮೂಲಕ ಆರೋಪಿಗೆ ಪರಿಚಯವಾಗಿದ್ದರು. ‘ಆರೋಪಿಯು ಕಳೆದ ಡಿಸೆಂಬರ್ನಲ್ಲಿ ನನ್ನನ್ನು ನೋಡಲೆಂದು ಪುಣೆಗೆ ಬಂದಿದ್ದರು. ಮಂಜರಿ ಪ್ರದೇಶದ ಲಾಡ್ಜ್ವೊಂದಕ್ಕೆ ಕರೆದೊಯ್ದು ‘ನಾನು ಮಹಾದೇವನ (ಶಿವ) ಅವತಾರ. ನೀನು ನನ್ನ ಪಾರ್ವತಿ’ ಎಂದು ನನ್ನನ್ನು ನಂಬಿಸಿದ್ದಲ್ಲದೆ ನನಗೆ ಮತ್ತು ಬರುವ ಪದಾರ್ಥ ನೀಡಿ ಅತ್ಯಾಚಾರ ಎಸಗಿದ್ದಾರೆ. </p><p>ಆ ಸಮಯದಲ್ಲಿ ನನ್ನ ಗಮನಕ್ಕೆ ಬಾರದಂತೆ ಫೋಟೊಗಳನ್ನು ತೆಗೆದುಕೊಂಡಿದ್ದಾರೆ ಎಂದು ಮಹಿಳೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಪಾಲ್ಘರ್ ಜಿಲ್ಲೆಯಲ್ಲಿ ಸಾಮಾಜಿಕ ಸಂಸ್ಥೆಯೊಂದನ್ನು ನಡೆಸುತ್ತಿರುವ ಆರೋಪಿ ಆ ಫೋಟೊಗಳನ್ನು ಬಳಸಿ ನನಗೆ ಬ್ಲ್ಯಾಕ್ಮೇಲ್ ಮಾಡಿದ್ದಾರೆ. ಪಾಲ್ಘರ್ನ ವಸಾಯಿಯಲ್ಲಿರುವ ಹೋಟೆಲ್ವೊಂದಕ್ಕೆ ಕರೆಸಿ ಮತ್ತೆ ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ, ಸ್ವಯಂಘೋಷಿತ ದೇವಮಾನವ ಅಶೋಕ್ ಖರಾತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಕಳೆದ ಐದು ದಿನಗಳಲ್ಲಿ 50ಕ್ಕೂ ಹೆಚ್ಚಿನ ದೂರವಾಣಿ ಕರೆಗಳನ್ನು ಸ್ವೀಕರಿಸಿದೆ.</p>.<p>ಖರಾತ್ ಹಾಗೂ ಅವರ ಅಪರಾಧ ಕೃತ್ಯಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡುವಂತೆ ಎರಡು ಮೊಬೈಲ್ ಫೋನ್ ಸಂಖ್ಯೆಗಳನ್ನು ಎಸ್ಐಟಿ ಪ್ರಕಟಿಸಿತ್ತು. </p>.<p>ಖರಾತ್ ವಿರುದ್ಧ ಲೈಂಗಿಕ ದೌರ್ಜನ್ಯ, ಸುಲಿಗೆ ಹಾಗೂ ಆಕ್ಷೇಪಾರ್ಹ ವಿಷಯಗಳ ಹಂಚಿಕೆ ಆರೋಪದಡಿ ಅನೇಕ ದೂರುಗಳು ಬಂದಿದ್ದವು. ಹೀಗಾಗಿ, ಅವರ ವಿರುದ್ಧ ಎಂಟು ಪ್ರಕರಣಗಳು ದಾಖಲಾಗಿವೆ.</p>.<p>‘ಪ್ರತಿದಿನ 15ರಿಂದ 20 ದೂರವಾಣಿ ಕರೆಗಳು ಬಂದಿವೆ. ಕಳೆದ ಐದು ದಿನಗಳಲ್ಲಿ 50 ಕರೆಗಳನ್ನು ಸ್ವೀಕರಿಸಲಾಗಿದೆ. ಈ ದೂರುಗಳನ್ನು ತಂಡ ಪರಿಶೀಲಿಸುತ್ತಿದೆ. ದೂರು ನೀಡುವವರ ಮಾಹಿತಿಯನ್ನು ಗೋಪ್ಯವಾಗಿ ಇಡಲಾಗುತ್ತಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p><strong>ದಾಖಲೆ ವಶ:</strong> ನಾಸಿಕ್ನ ಖರಾತ್ ಅವರ ಕಚೇರಿಗೆ ಎಸ್ಐಟಿ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆಲ ದಾಖಲೆಗಳು, ಕಡತಗಳು, ಡೈರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಶಸ್ತ್ರಾಸ್ತ್ರ ಪರವಾನಗಿ ಅಮಾನತು: ಖರಾತ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುವುದರಿಂದ ಶಸ್ತ್ರಾಸ್ತ್ರ ಪರವಾನಗಿಯನ್ನು ಅಮಾನತು ಮಾಡಿ ನಾಸಿಕ್ನ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ನಾಸಿಕ್ ಜಿಲ್ಲೆಯ ಸಿನ್ನಾರ್ನಲ್ಲಿರುವ ಶ್ರೀ ಈಶಾನ್ಯೇಶ್ವರ ದೇವಸ್ಥಾನ ಟ್ರಸ್ಟ್ ಮುಖ್ಯಸ್ಥರಾದ ಖರಾತ್ ಅವರನ್ನು ಕಳೆದ ಒಂದು ವರ್ಷದಿಂದ ಅನೇಕ ರಾಜಕೀಯ ನಾಯಕರು ಭೇಟಿ ಮಾಡಿದ್ದರು.</p>.<p>‘ಮೂರು ವರ್ಷಗಳ ಅವಧಿಯಲ್ಲಿ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ’ ಎಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿದ ನಂತರ ಮಾರ್ಚ್ 18ರಂದು ಖರಾತ್ ಅವರನ್ನು ಬಂಧಿಸಲಾಗಿತ್ತು.</p>.<p><strong>‘ಸಂತ್ರಸ್ತೆಯರ ವಿಡಿಯೊ ಹಂಚಿದರೆ ಕ್ರಿಮಿನಲ್ ಪ್ರಕರಣ’</strong> </p><p>ಮುಂಬೈ: ‘ಅಶೋಕ್ ಖರಾತ್ ಅವರಿಂದ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಅಶ್ಲೀಲ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತಿಳಿಸಿದ್ದಾರೆ. ‘ಖರಾತ್ ವಿರುದ್ಧ ದೂರು ನೀಡಲು ಅನೇಕ ಸಂತ್ರಸ್ತೆಯರು ಮುಂದೆ ಬರುತ್ತಿದ್ದು ಮತ್ತಷ್ಟು ಪ್ರಕರಣಗಳು ದಾಖಲಾಗಿವೆ. ಸಂತ್ರಸ್ತೆಯರ ವಿವರಗಳನ್ನು ಗೋಪ್ಯವಾಗಿ ಇಡುವುದಲ್ಲದೆ ಅವರಿಗೆ ಅಗತ್ಯ ರಕ್ಷಣೆ ನೀಡಲಾಗುವುದು’ ಎಂದು ಹೇಳಿದ್ದಾರೆ.</p>.<p><strong>‘ಶಿವನ ಅವತಾರ ಎಂದು ನಂಬಿಸಿ ಅತ್ಯಾಚಾರ’</strong> </p><p>ಪಾಲ್ಘರ್/ಪುಣೆ: ಮಹಿಳೆಯರ ಮೇಲೆ ಅತ್ಯಾಚಾರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಯಂಘೋಷಿತ ದೇವಮಾನವ ಅಶೋಕ್ ಖರಾತ್ ಅವರನ್ನು ಬಂಧಿಸಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಮೊತ್ತೊಬ್ಬ ‘ದೇವಮಾನವ’ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.</p><p> ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಹೃಷಿಕೇಶ್ ವೈದ್ಯ (40) ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‘ಭಗವಾನ್ ಶಿವನ ಅವತಾರ ಎಂದು ನಂಬಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದು ಪುಣೆಯ 35 ವರ್ಷದ ಮಹಿಳೆಯೊಬ್ಬರು ಹೃಷಿಕೇಶ್ ಅವರ ವಿರುದ್ಧ ದೂರು ನೀಡಿದ್ದಾರೆ’ ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. </p><p>ಈ ಆರೋಪವನ್ನು ನಿರಾಕರಿಸಿರುವ ಹೃಷಿಕೇಶ್ ‘ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ’ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮಹಿಳೆಯು 2023ರಲ್ಲಿ ಫೇಸ್ಬುಕ್ ಮೂಲಕ ಆರೋಪಿಗೆ ಪರಿಚಯವಾಗಿದ್ದರು. ‘ಆರೋಪಿಯು ಕಳೆದ ಡಿಸೆಂಬರ್ನಲ್ಲಿ ನನ್ನನ್ನು ನೋಡಲೆಂದು ಪುಣೆಗೆ ಬಂದಿದ್ದರು. ಮಂಜರಿ ಪ್ರದೇಶದ ಲಾಡ್ಜ್ವೊಂದಕ್ಕೆ ಕರೆದೊಯ್ದು ‘ನಾನು ಮಹಾದೇವನ (ಶಿವ) ಅವತಾರ. ನೀನು ನನ್ನ ಪಾರ್ವತಿ’ ಎಂದು ನನ್ನನ್ನು ನಂಬಿಸಿದ್ದಲ್ಲದೆ ನನಗೆ ಮತ್ತು ಬರುವ ಪದಾರ್ಥ ನೀಡಿ ಅತ್ಯಾಚಾರ ಎಸಗಿದ್ದಾರೆ. </p><p>ಆ ಸಮಯದಲ್ಲಿ ನನ್ನ ಗಮನಕ್ಕೆ ಬಾರದಂತೆ ಫೋಟೊಗಳನ್ನು ತೆಗೆದುಕೊಂಡಿದ್ದಾರೆ ಎಂದು ಮಹಿಳೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಪಾಲ್ಘರ್ ಜಿಲ್ಲೆಯಲ್ಲಿ ಸಾಮಾಜಿಕ ಸಂಸ್ಥೆಯೊಂದನ್ನು ನಡೆಸುತ್ತಿರುವ ಆರೋಪಿ ಆ ಫೋಟೊಗಳನ್ನು ಬಳಸಿ ನನಗೆ ಬ್ಲ್ಯಾಕ್ಮೇಲ್ ಮಾಡಿದ್ದಾರೆ. ಪಾಲ್ಘರ್ನ ವಸಾಯಿಯಲ್ಲಿರುವ ಹೋಟೆಲ್ವೊಂದಕ್ಕೆ ಕರೆಸಿ ಮತ್ತೆ ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>