<p><strong>ಲಖನೌ</strong>: ‘ಕೃಷ್ಣ ಜನ್ಮಭೂಮಿ ಜಾಗದಲ್ಲಿದ್ದ ಹಿಂದೂ ದೇವಸ್ಥಾನವನ್ನು ಮೊಘಲರ ದೊರೆ ಔರಂಗಜೇಬ ಧ್ವಂಸಗೊಳಿಸಿದ್ದ ಮತ್ತು ಆ ಸ್ಥಳದಲ್ಲಿ ಮಸೀದಿ ನಿರ್ಮಿಸಲಾಗಿದೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ತಿಳಿಸಿದೆ.</p>.<p>ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ ಅಜಯ್ ಕುಮಾರ್ ಎಂಬುವವರು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿ ಸಲ್ಲಿಸಿದ್ದ ಅರ್ಜಿಗೆ ನೀಡಿರುವ ಉತ್ತರದಲ್ಲಿ ಎಎಸ್ಐ, ಈ ಮಾಹಿತಿ ಒದಗಿಸಿದೆ.</p>.<p>ಎಎಸ್ಐ ನೀಡಿರುವ ಈ ಮಾಹಿತಿಯು, ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ಮಸೀದಿ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಬ್ರಿಟಿಷ್ ಆಳ್ವಿಕೆ ವೇಳೆ, 1920ರಲ್ಲಿ ಹೊರಡಿಸಿದ್ದ ಗೆಜೆಟ್ ಅಧಿಸೂಚನೆಯನ್ನು ಎಎಎಸ್ಐ ತಾನು ನೀಡಿದ ಉತ್ತರದಲ್ಲಿ ಉಲ್ಲೇಖಿಸಿದೆ. ‘ಮಸೀದಿಯೊಂದನ್ನು ನಿರ್ಮಿಸುವುದಕ್ಕಾಗಿ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನ ಸಂಕೀರ್ಣದ ಭಾಗವಾಗಿತ್ತು ಎನ್ನಲಾದ ಕೇಶವದೇವ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿತ್ತು’ ಎಂದು ತಿಳಿಸಿದೆ.</p>.<p><strong>ಹೈಕೋರ್ಟ್ಗೆ ಸಲ್ಲಿಕೆ</strong>: ‘ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ಮಸೀದಿ ಪ್ರಕರಣದ ವಿಚಾರಣೆ ಅಲಹಾಬಾದ್ ಹೈಕೋರ್ಟ್ನಲ್ಲಿ ಫೆ.22ರಂದು ನಡೆಯಲಿದೆ. ಅಜಯ್ ಕುಮಾರ್ ಅವರಿಗೆ ಎಎಸ್ಐ ನೀಡಿರುವ ಈ ಉತ್ತರವನ್ನು ಸಾಕ್ಷ್ಯವಾಗಿ ಹೈಕೋರ್ಟ್ಗೆ ಸಲ್ಲಿಸಲಾಗುವುದು’ ಎಂದು ಈ ಪ್ರಕರಣದಲ್ಲಿ ಹಿಂದೂ ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ‘ಕೃಷ್ಣ ಜನ್ಮಭೂಮಿ ಜಾಗದಲ್ಲಿದ್ದ ಹಿಂದೂ ದೇವಸ್ಥಾನವನ್ನು ಮೊಘಲರ ದೊರೆ ಔರಂಗಜೇಬ ಧ್ವಂಸಗೊಳಿಸಿದ್ದ ಮತ್ತು ಆ ಸ್ಥಳದಲ್ಲಿ ಮಸೀದಿ ನಿರ್ಮಿಸಲಾಗಿದೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ತಿಳಿಸಿದೆ.</p>.<p>ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ ಅಜಯ್ ಕುಮಾರ್ ಎಂಬುವವರು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿ ಸಲ್ಲಿಸಿದ್ದ ಅರ್ಜಿಗೆ ನೀಡಿರುವ ಉತ್ತರದಲ್ಲಿ ಎಎಸ್ಐ, ಈ ಮಾಹಿತಿ ಒದಗಿಸಿದೆ.</p>.<p>ಎಎಸ್ಐ ನೀಡಿರುವ ಈ ಮಾಹಿತಿಯು, ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ಮಸೀದಿ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಬ್ರಿಟಿಷ್ ಆಳ್ವಿಕೆ ವೇಳೆ, 1920ರಲ್ಲಿ ಹೊರಡಿಸಿದ್ದ ಗೆಜೆಟ್ ಅಧಿಸೂಚನೆಯನ್ನು ಎಎಎಸ್ಐ ತಾನು ನೀಡಿದ ಉತ್ತರದಲ್ಲಿ ಉಲ್ಲೇಖಿಸಿದೆ. ‘ಮಸೀದಿಯೊಂದನ್ನು ನಿರ್ಮಿಸುವುದಕ್ಕಾಗಿ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನ ಸಂಕೀರ್ಣದ ಭಾಗವಾಗಿತ್ತು ಎನ್ನಲಾದ ಕೇಶವದೇವ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿತ್ತು’ ಎಂದು ತಿಳಿಸಿದೆ.</p>.<p><strong>ಹೈಕೋರ್ಟ್ಗೆ ಸಲ್ಲಿಕೆ</strong>: ‘ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ಮಸೀದಿ ಪ್ರಕರಣದ ವಿಚಾರಣೆ ಅಲಹಾಬಾದ್ ಹೈಕೋರ್ಟ್ನಲ್ಲಿ ಫೆ.22ರಂದು ನಡೆಯಲಿದೆ. ಅಜಯ್ ಕುಮಾರ್ ಅವರಿಗೆ ಎಎಸ್ಐ ನೀಡಿರುವ ಈ ಉತ್ತರವನ್ನು ಸಾಕ್ಷ್ಯವಾಗಿ ಹೈಕೋರ್ಟ್ಗೆ ಸಲ್ಲಿಸಲಾಗುವುದು’ ಎಂದು ಈ ಪ್ರಕರಣದಲ್ಲಿ ಹಿಂದೂ ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>