ಬ್ರಿಟಿಷ್ ಆಳ್ವಿಕೆ ವೇಳೆ, 1920ರಲ್ಲಿ ಹೊರಡಿಸಿದ್ದ ಗೆಜೆಟ್ ಅಧಿಸೂಚನೆಯನ್ನು ಎಎಎಸ್ಐ ತಾನು ನೀಡಿದ ಉತ್ತರದಲ್ಲಿ ಉಲ್ಲೇಖಿಸಿದೆ. ‘ಮಸೀದಿಯೊಂದನ್ನು ನಿರ್ಮಿಸುವುದಕ್ಕಾಗಿ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನ ಸಂಕೀರ್ಣದ ಭಾಗವಾಗಿತ್ತು ಎನ್ನಲಾದ ಕೇಶವದೇವ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿತ್ತು’ ಎಂದು ತಿಳಿಸಿದೆ.