<p class="title"><strong>ಮುಂಬೈ</strong>: ಬಾಬರಿ ಮಸೀದಿ ಧ್ವಂಸದ ವೇಳೆ ಶಿವಸೇನಾ ನಾಯಕರೂ ಯಾರೂ ಇರಲಿಲ್ಲ ಎಂಬ ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಹೇಳಿಕೆಗೆ ಶಿವಸೇನಾ ಸಂಸದ ಸಂಜಯ್ ರಾವುತ್ ಸೋಮವಾರ ತಿರುಗೇಟು ನೀಡಿದ್ದಾರೆ.</p>.<p class="title">ರಾಮ ಜನ್ಮಭೂಮಿ ಚಳವಳಿಯಲ್ಲಿ ಶಿವಸೇನಾ ವಹಿಸಿರುವ ಪಾತ್ರದ ಬಗ್ಗೆ ಬಿಜೆಪಿ ತನ್ನ ನಾಯಕರನ್ನೇ ಕೇಳಬೇಕು ಎಂದು ರಾವುತ್ ಕುಟುಕಿದ್ದಾರೆ.</p>.<p class="title">ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೇಶದಲ್ಲಿನ ನಿರುದ್ಯೋಗ, ಹಣದುಬ್ಬರ ಮತ್ತು ಚೀನಾ ಆಕ್ರಮಣದಂತಹ ಗಂಭೀರ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನಾ ಹನುಮಾನ್ ಚಾಲೀಸಾ ಪಠಣ ಮತ್ತು ಅಯೋಧ್ಯೆ ವಿವಾದಗಳನ್ನು ಕೆದಕಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.</p>.<p class="title">‘ಬಾಬರಿ ಮಸೀದಿ ಧ್ವಂಸಗೊಂಡಾಗ ಶಿವಸೇನಾ ಸದಸ್ಯರು ಎಲ್ಲಿದ್ದರು ಎಂದು ಕೇಳುವ ಬಿಜೆಪಿಯು ತಮ್ಮ ದಿವಂಗತ ನಾಯಕ ಸುಂದರ್ ಸಿಂಗ್ ಭಂಡಾರಿ ಅವರನ್ನು ಕೇಳಿದ್ದರೆ ತಿಳಿಯುತ್ತಿತ್ತು. ಆ ಸಮಯದ ಸಿಬಿಐ ಮತ್ತು ಕೇಂದ್ರ ವಾರ್ತಾ ಶಾಖೆಯ ವರದಿಯನ್ನೂ ಪರಿಶೀಲಿಸಲಿ’ ಎಂದು ರಾವುತ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.</p>.<p>‘ಪರಿಸ್ಥಿತಿ ಬದಲಾಗಿದ್ದು ಸಮಸ್ಯೆಗಳೂ ಬದಲಾಗಿವೆ. ಜನರು ಈಗ ಅವುಗಳ ಬಗ್ಗೆ ಗಮನ ಕೊಡುವುದಿಲ್ಲ. ಆದರೆ ಸಮಸ್ಯೆಗಳನ್ನು ಕೆದಕಲಾಗುತ್ತಿದೆ’ ಎಂದು ಹೇಳಿದರು.</p>.<p>ಫಡಣವೀಸ್ ಭಾನುವಾರ ಶಿವಸೇನಾದ ಹಿಂದುತ್ವದ ವಿಚಾರವಾಗಿ ಟೀಕಿಸುತ್ತಾ, ಬಾಬರಿ ಮಸೀದಿ ಧ್ವಂಸದ ವೇಳೆ ಶಿವಸೇನಾದ ಯಾವ ನಾಯಕರೂ ಅಲ್ಲಿರಲಿಲ್ಲ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ</strong>: ಬಾಬರಿ ಮಸೀದಿ ಧ್ವಂಸದ ವೇಳೆ ಶಿವಸೇನಾ ನಾಯಕರೂ ಯಾರೂ ಇರಲಿಲ್ಲ ಎಂಬ ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಹೇಳಿಕೆಗೆ ಶಿವಸೇನಾ ಸಂಸದ ಸಂಜಯ್ ರಾವುತ್ ಸೋಮವಾರ ತಿರುಗೇಟು ನೀಡಿದ್ದಾರೆ.</p>.<p class="title">ರಾಮ ಜನ್ಮಭೂಮಿ ಚಳವಳಿಯಲ್ಲಿ ಶಿವಸೇನಾ ವಹಿಸಿರುವ ಪಾತ್ರದ ಬಗ್ಗೆ ಬಿಜೆಪಿ ತನ್ನ ನಾಯಕರನ್ನೇ ಕೇಳಬೇಕು ಎಂದು ರಾವುತ್ ಕುಟುಕಿದ್ದಾರೆ.</p>.<p class="title">ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೇಶದಲ್ಲಿನ ನಿರುದ್ಯೋಗ, ಹಣದುಬ್ಬರ ಮತ್ತು ಚೀನಾ ಆಕ್ರಮಣದಂತಹ ಗಂಭೀರ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನಾ ಹನುಮಾನ್ ಚಾಲೀಸಾ ಪಠಣ ಮತ್ತು ಅಯೋಧ್ಯೆ ವಿವಾದಗಳನ್ನು ಕೆದಕಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.</p>.<p class="title">‘ಬಾಬರಿ ಮಸೀದಿ ಧ್ವಂಸಗೊಂಡಾಗ ಶಿವಸೇನಾ ಸದಸ್ಯರು ಎಲ್ಲಿದ್ದರು ಎಂದು ಕೇಳುವ ಬಿಜೆಪಿಯು ತಮ್ಮ ದಿವಂಗತ ನಾಯಕ ಸುಂದರ್ ಸಿಂಗ್ ಭಂಡಾರಿ ಅವರನ್ನು ಕೇಳಿದ್ದರೆ ತಿಳಿಯುತ್ತಿತ್ತು. ಆ ಸಮಯದ ಸಿಬಿಐ ಮತ್ತು ಕೇಂದ್ರ ವಾರ್ತಾ ಶಾಖೆಯ ವರದಿಯನ್ನೂ ಪರಿಶೀಲಿಸಲಿ’ ಎಂದು ರಾವುತ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.</p>.<p>‘ಪರಿಸ್ಥಿತಿ ಬದಲಾಗಿದ್ದು ಸಮಸ್ಯೆಗಳೂ ಬದಲಾಗಿವೆ. ಜನರು ಈಗ ಅವುಗಳ ಬಗ್ಗೆ ಗಮನ ಕೊಡುವುದಿಲ್ಲ. ಆದರೆ ಸಮಸ್ಯೆಗಳನ್ನು ಕೆದಕಲಾಗುತ್ತಿದೆ’ ಎಂದು ಹೇಳಿದರು.</p>.<p>ಫಡಣವೀಸ್ ಭಾನುವಾರ ಶಿವಸೇನಾದ ಹಿಂದುತ್ವದ ವಿಚಾರವಾಗಿ ಟೀಕಿಸುತ್ತಾ, ಬಾಬರಿ ಮಸೀದಿ ಧ್ವಂಸದ ವೇಳೆ ಶಿವಸೇನಾದ ಯಾವ ನಾಯಕರೂ ಅಲ್ಲಿರಲಿಲ್ಲ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>