<p><strong>ಗುವಾಹಟಿ</strong>: ದೆಹಲಿ ಸ್ಫೋಟವನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು ಹಾಕಿದ್ದಕ್ಕಾಗಿ ಅಸ್ಸಾಂನಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಈ ಸಂಬಂಧ ಒಟ್ಟು ಬಂಧಿತರ ಸಂಖ್ಯೆ 21ಕ್ಕೆ ತಲುಪಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.</p><p>ಭಯೋತ್ಪಾದಕರಿಗೆ ಆನ್ಲೈನ್ನಲ್ಲಿ ಬೆಂಬಲ ನೀಡುವ ಯಾವುದೇ ವ್ಯಕ್ತಿಯನ್ನು ಬಿಡಲಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.</p><p>ಶನಿವಾರ ಸಂಜೆ ತಡವಾಗಿ ಎಕ್ಸ್ ಪೋಸ್ಟ್ನಲ್ಲಿ ಪೋಸ್ಟ್ ಹಂಚಿಕೊಂಡ ಶರ್ಮಾ, "ಮತ್ತೊಬ್ಬ ರಾಷ್ಟ್ರವಿರೋಧಿಯನ್ನು ಅಸ್ಸಾಂ ಪೊಲಿಸರು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 21ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.</p><p>‘ದೆಹಲಿ ಸ್ಫೋಟದ ಹಿಂದಿನ ಭಯೋತ್ಪಾದಕರಿಗೆ ಆನ್ಲೈನ್ನಲ್ಲಿ ಬೆಂಬಲ ವ್ಯಕ್ತಪಡಿಸುವ ಯಾರನ್ನೂ ನಾವು ಸಹಿಸುವುದಿಲ್ಲ’ಎಂದು ಅವರು ಹೇಳಿದ್ದಾರೆ.</p><p>ಬಂಧಿತರಲ್ಲಿ ಕಾಮರೂಪ ಮತ್ತು ಬೊಂಗೈಗಾಂವ್ನ ತಲಾ ಮೂವರು, ಚಿರಾಂಗ್, ಲಖಿಂಪುರ ಮತ್ತು ಬಾರ್ಪೇಟಾದಿಂದ ತಲಾ ಇಬ್ಬರು ಹಾಗೂ ದರ್ರಾಂಗ್, ಗೋಲ್ಪಾರ, ನಲ್ಬಾರಿ, ಹೈಲಕಂಡಿ, ಹೊಜೈ, ದಕ್ಷಿಣ ಸಲ್ಮಾರಾ, ಕೊಕ್ರಝಾರ್, ಬಜಾಲಿ ಮತ್ತು ಧುಬ್ರಿಯಿಂದ ತಲಾ ಒಬ್ಬರು ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದು ಸ್ಫೋಟಗೊಂಡು 13 ಜನರು ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು.</p><p>ದಾಳಿಗೆ ಬೆಂಬಲ ನೀಡುವ ಯಾರ ವಿರುದ್ಧವೂ ರಾಜ್ಯ ಸರ್ಕಾರ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ದೆಹಲಿ ಸ್ಫೋಟವನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು ಹಾಕಿದ್ದಕ್ಕಾಗಿ ಅಸ್ಸಾಂನಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಈ ಸಂಬಂಧ ಒಟ್ಟು ಬಂಧಿತರ ಸಂಖ್ಯೆ 21ಕ್ಕೆ ತಲುಪಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.</p><p>ಭಯೋತ್ಪಾದಕರಿಗೆ ಆನ್ಲೈನ್ನಲ್ಲಿ ಬೆಂಬಲ ನೀಡುವ ಯಾವುದೇ ವ್ಯಕ್ತಿಯನ್ನು ಬಿಡಲಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.</p><p>ಶನಿವಾರ ಸಂಜೆ ತಡವಾಗಿ ಎಕ್ಸ್ ಪೋಸ್ಟ್ನಲ್ಲಿ ಪೋಸ್ಟ್ ಹಂಚಿಕೊಂಡ ಶರ್ಮಾ, "ಮತ್ತೊಬ್ಬ ರಾಷ್ಟ್ರವಿರೋಧಿಯನ್ನು ಅಸ್ಸಾಂ ಪೊಲಿಸರು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 21ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.</p><p>‘ದೆಹಲಿ ಸ್ಫೋಟದ ಹಿಂದಿನ ಭಯೋತ್ಪಾದಕರಿಗೆ ಆನ್ಲೈನ್ನಲ್ಲಿ ಬೆಂಬಲ ವ್ಯಕ್ತಪಡಿಸುವ ಯಾರನ್ನೂ ನಾವು ಸಹಿಸುವುದಿಲ್ಲ’ಎಂದು ಅವರು ಹೇಳಿದ್ದಾರೆ.</p><p>ಬಂಧಿತರಲ್ಲಿ ಕಾಮರೂಪ ಮತ್ತು ಬೊಂಗೈಗಾಂವ್ನ ತಲಾ ಮೂವರು, ಚಿರಾಂಗ್, ಲಖಿಂಪುರ ಮತ್ತು ಬಾರ್ಪೇಟಾದಿಂದ ತಲಾ ಇಬ್ಬರು ಹಾಗೂ ದರ್ರಾಂಗ್, ಗೋಲ್ಪಾರ, ನಲ್ಬಾರಿ, ಹೈಲಕಂಡಿ, ಹೊಜೈ, ದಕ್ಷಿಣ ಸಲ್ಮಾರಾ, ಕೊಕ್ರಝಾರ್, ಬಜಾಲಿ ಮತ್ತು ಧುಬ್ರಿಯಿಂದ ತಲಾ ಒಬ್ಬರು ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದು ಸ್ಫೋಟಗೊಂಡು 13 ಜನರು ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು.</p><p>ದಾಳಿಗೆ ಬೆಂಬಲ ನೀಡುವ ಯಾರ ವಿರುದ್ಧವೂ ರಾಜ್ಯ ಸರ್ಕಾರ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>