<p><strong>ಅಸ್ಸಾಂ:</strong> ಕಾಂಗ್ರೆಸ್ ಅತ್ಯಂತ ಭ್ರಷ್ಟಪಕ್ಷ ಎಂದು ಟೀಕೆ ಮಾಡಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಯೋಜನ ಪಡೆಯುವುದನ್ನು ಮುಂದುವರಿಸಲುಬಿಜೆಪಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು.</p>.<p>ಅಸ್ಸಾಂನಲ್ಲಿ ಚುನಾವಣೆ ರ್ಯಾಲಿ ಉದ್ದೇಶಿಸಿ ಮಾತನಾಡಿದ ಸ್ಮತಿ ಇರಾನಿ, ರಾಜ್ಯದ ಬಡ ಜನರಿಗೆ ಅನುಕೂಲಕರವಾದ ಅನೇಕ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್ ರೂಪಿಸಿದ್ದಾರೆ ಎಂದು ಹೇಳಿದರು.</p>.<p>ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಅನೇಕ ಜನಪರ ಯೋಜನೆಗಳನ್ನು ಪಟ್ಟಿ ಮಾಡಿರುವ ಸ್ಮೃತಿ, ಕಾಂಗ್ರೆಸ್ ಎಂದಿಗೂ ಬಡ ಜನರಿಗಾಗಿ ಕೆಲಸ ಮಾಡಿಲ್ಲ ಎಂದು ದೂರಿದರು. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡಿದರು.</p>.<p>ಅಸ್ಸಾಂನಿಂದ ಕಾಂಗ್ರೆಸ್ನ ಕೆಲವು ದೊಡ್ಡ ವ್ಯಕ್ತಿಗಳು ಪ್ರಧಾನಿಯಾಗಿದ್ದಾರೆ ಎಂದು ಅಸ್ಸಾಂನಿಂದ ರಾಜ್ಯಸಭಾ ಸಂಸದರಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರನ್ನು ಉಲ್ಲೇಖ ಮಾಡದೇ ಟೀಕೆ ಮಾಡಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/kerala-assam-tami-nadu-puducherry-west-bengal-assembly-elections-model-corporate-social-812047.html" itemprop="url">Assembly Elections: ಚುನಾವಣಾ ರಂಗಕ್ಕಿಳಿದ ಸಿಎಸ್ಆರ್ ವೇದಿಕೆ </a></p>.<p>ಬಡವರಿಗಾಗಿ ಕೆಲಸ ಮಾಡುವ ಏಕೈಕ ಪಕ್ಷ ಬಿಜೆಪಿ ಮಾತ್ರವಾಗಿದೆ. ನರೇಂದ್ರ ಮೋದಿ ಆಡಳಿತದಲ್ಲಿ ಅಸ್ಸಾಂನಲ್ಲಿ ಏಮ್ಸ್ ಸ್ಥಾಪನೆಯಾಗಿದೆ. ರಾಜದಾದ್ಯಂತ ಚಹಾ ತೋಟಗಳಲ್ಲಿ ಕೆಲಸ ಮಾಡುವವರಿಗಾಗಿ ನೆರವಾಗಿದೆ. ಕೋವಿಡ್ ಪಿಡುಗಿನ ಕಠಿಣ ಸಂದರ್ಭದಲ್ಲೂ ಕೇಂದ್ರ ಸರ್ಕಾರ ನೆರವಾಗಿದೆ ಎಂದು ಹೇಳಿದರು.</p>.<p>2019ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ ಅಮೇಠಿಯಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಭರ್ಜರಿ ಗೆಲುವು ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಸ್ಸಾಂ:</strong> ಕಾಂಗ್ರೆಸ್ ಅತ್ಯಂತ ಭ್ರಷ್ಟಪಕ್ಷ ಎಂದು ಟೀಕೆ ಮಾಡಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಯೋಜನ ಪಡೆಯುವುದನ್ನು ಮುಂದುವರಿಸಲುಬಿಜೆಪಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು.</p>.<p>ಅಸ್ಸಾಂನಲ್ಲಿ ಚುನಾವಣೆ ರ್ಯಾಲಿ ಉದ್ದೇಶಿಸಿ ಮಾತನಾಡಿದ ಸ್ಮತಿ ಇರಾನಿ, ರಾಜ್ಯದ ಬಡ ಜನರಿಗೆ ಅನುಕೂಲಕರವಾದ ಅನೇಕ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್ ರೂಪಿಸಿದ್ದಾರೆ ಎಂದು ಹೇಳಿದರು.</p>.<p>ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಅನೇಕ ಜನಪರ ಯೋಜನೆಗಳನ್ನು ಪಟ್ಟಿ ಮಾಡಿರುವ ಸ್ಮೃತಿ, ಕಾಂಗ್ರೆಸ್ ಎಂದಿಗೂ ಬಡ ಜನರಿಗಾಗಿ ಕೆಲಸ ಮಾಡಿಲ್ಲ ಎಂದು ದೂರಿದರು. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡಿದರು.</p>.<p>ಅಸ್ಸಾಂನಿಂದ ಕಾಂಗ್ರೆಸ್ನ ಕೆಲವು ದೊಡ್ಡ ವ್ಯಕ್ತಿಗಳು ಪ್ರಧಾನಿಯಾಗಿದ್ದಾರೆ ಎಂದು ಅಸ್ಸಾಂನಿಂದ ರಾಜ್ಯಸಭಾ ಸಂಸದರಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರನ್ನು ಉಲ್ಲೇಖ ಮಾಡದೇ ಟೀಕೆ ಮಾಡಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/kerala-assam-tami-nadu-puducherry-west-bengal-assembly-elections-model-corporate-social-812047.html" itemprop="url">Assembly Elections: ಚುನಾವಣಾ ರಂಗಕ್ಕಿಳಿದ ಸಿಎಸ್ಆರ್ ವೇದಿಕೆ </a></p>.<p>ಬಡವರಿಗಾಗಿ ಕೆಲಸ ಮಾಡುವ ಏಕೈಕ ಪಕ್ಷ ಬಿಜೆಪಿ ಮಾತ್ರವಾಗಿದೆ. ನರೇಂದ್ರ ಮೋದಿ ಆಡಳಿತದಲ್ಲಿ ಅಸ್ಸಾಂನಲ್ಲಿ ಏಮ್ಸ್ ಸ್ಥಾಪನೆಯಾಗಿದೆ. ರಾಜದಾದ್ಯಂತ ಚಹಾ ತೋಟಗಳಲ್ಲಿ ಕೆಲಸ ಮಾಡುವವರಿಗಾಗಿ ನೆರವಾಗಿದೆ. ಕೋವಿಡ್ ಪಿಡುಗಿನ ಕಠಿಣ ಸಂದರ್ಭದಲ್ಲೂ ಕೇಂದ್ರ ಸರ್ಕಾರ ನೆರವಾಗಿದೆ ಎಂದು ಹೇಳಿದರು.</p>.<p>2019ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ ಅಮೇಠಿಯಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಭರ್ಜರಿ ಗೆಲುವು ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>