<p><strong>ಗುವಾಹಟಿ:</strong> ‘ಅಸ್ಸಾಂ ವಿಧಾನಸಭೆಯ ಅಧಿವೇಶನದ ಅವಧಿಯಲ್ಲಿ ಶುಕ್ರವಾರದ ದಿನ ಮುಸ್ಲಿಂ ಶಾಸಕರಿಗೆ ‘ನಮಾಜ್’ ಸಲ್ಲಿಸಲು ನೀಡಲಾಗುತ್ತಿದ್ದ ಎರಡು ಗಂಟೆಗಳ ವಿರಾಮದ ಅವಧಿಯನ್ನು ರದ್ದುಗೊಳಿಸಲಾಗಿದೆ’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.</p><p>‘ಮುಂದಿನ ಅಧಿವೇಶನದಿಂದಲೇ ಈ ನಿಯಮ ಅನ್ವಯವಾಗಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p><p>’ಎರಡು ಗಂಟೆ ಕಾಲ ನೀಡುತ್ತಿದ್ದ ‘ಜುಮ್ಮಾ’ ವಿರಾಮವನ್ನು ರದ್ದುಗೊಳಿಸಿ, ಅಧಿವೇಶನದಲ್ಲಿ ಹೆಚ್ಚಿನ ಉತ್ತಮ ವಿಷಯಗಳ ಚರ್ಚೆಗೆ ಆದ್ಯತೆ ನೀಡುವ ಮೂಲಕ ವಸಹಾತುಶಾಹಿ ಕಾಲದಲ್ಲಿ ಜಾರಿಯಲ್ಲಿದ್ದ ನಿರ್ಧಾರವನ್ನು ಕೊನೆಗೊಳಿಸಲಾಗಿದೆ. 1937ರಲ್ಲಿ ಮುಸ್ಲಿಂ ಲೀಗ್ನ ಸೈಯದ್ ಸಾದುಲ್ಲಾ ಅವಧಿಯಲ್ಲಿ ಈ ಪದ್ಧತಿಯನ್ನು ಜಾರಿಗೆ ತರಲಾಗಿತ್ತು’ ಎಂದು ಶರ್ಮಾ ಅವರು ‘ಎಕ್ಸ್’ ಮೂಲಕ ತಿಳಿಸಿದ್ದಾರೆ.</p><p>‘ಗೌರವಾನ್ವಿತ ಸ್ವೀಕರ್ ಬಿಸ್ವಜಿತ್ ದೈಮಾರಿ ಹಾಗೂ ಶಾಸಕರು ಸೇರಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ಶರ್ಮಾ ಹೇಳಿದ್ದಾರೆ.</p><p>ಹಿಂದಿನ ಬೇಸಿಗೆ ಅಧಿವೇಶನದಲ್ಲಿ ಶುಕ್ರವಾರ ಎರಡು ತಾಸುಗಳ ಕಾಲ ವಿರಾಮ ನೀಡಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p><p>‘ವಿರಾಮದ ನಿರ್ಧಾರ ಕೈಬಿಡಲು ವಿಧಾನಸಭೆಯ ನೀತಿ ಸಮಿತಿಯು ಅವಿರೋಧವಾಗಿ ಒಪ್ಪಿಕೊಂಡಿದೆ’ ಎಂದು ಈಗಾಗಲೇ ಅಧಿಕೃತ ನಿರ್ಧಾರದ ಪ್ರಕಟಣೆಯನ್ನು ಎಲ್ಲರಿಗೂ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p><p>1937ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ ಈ ಪದ್ಧತಿ ಜಾರಿಗೆ ಬಂದಿತ್ತು. ಶುಕ್ರವಾರ 11 ಗಂಟೆಗೆ ಅಧಿವೇಶನ ಸ್ಥಗಿತಗೊಳಿಸಿ, ಮುಸ್ಲಿಂ ಶಾಸಕರಿಗೆ ನಮಾಜ್ ಮಾಡಲು ಅವಕಾಶ ನೀಡಲಾಗುತ್ತಿತ್ತು. ಮಧ್ಯಾಹ್ನ ಊಟದ ನಂತರ ಮತ್ತೆ ಅಧಿವೇಶನ ನಡೆಯುತ್ತಿತ್ತು.</p><p>ಮುಸ್ಲಿಂ ವಿರೋಧಿ ನಡೆ: ರಾಜಕೀಯ ಲಾಭಕ್ಕಾಗಿ ಬಿಜೆಪಿ ನೇತೃತ್ವದ ಸರ್ಕಾರವು ಈ ನಿರ್ಧಾರ ತೆಗೆದುಕೊಂಡಿದೆ ಎಂದು ಪ್ರಮುಖ ಪ್ರತಿಪಕ್ಷ ಎಐಯುಡಿಎಫ್ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ‘ಅಸ್ಸಾಂ ವಿಧಾನಸಭೆಯ ಅಧಿವೇಶನದ ಅವಧಿಯಲ್ಲಿ ಶುಕ್ರವಾರದ ದಿನ ಮುಸ್ಲಿಂ ಶಾಸಕರಿಗೆ ‘ನಮಾಜ್’ ಸಲ್ಲಿಸಲು ನೀಡಲಾಗುತ್ತಿದ್ದ ಎರಡು ಗಂಟೆಗಳ ವಿರಾಮದ ಅವಧಿಯನ್ನು ರದ್ದುಗೊಳಿಸಲಾಗಿದೆ’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.</p><p>‘ಮುಂದಿನ ಅಧಿವೇಶನದಿಂದಲೇ ಈ ನಿಯಮ ಅನ್ವಯವಾಗಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p><p>’ಎರಡು ಗಂಟೆ ಕಾಲ ನೀಡುತ್ತಿದ್ದ ‘ಜುಮ್ಮಾ’ ವಿರಾಮವನ್ನು ರದ್ದುಗೊಳಿಸಿ, ಅಧಿವೇಶನದಲ್ಲಿ ಹೆಚ್ಚಿನ ಉತ್ತಮ ವಿಷಯಗಳ ಚರ್ಚೆಗೆ ಆದ್ಯತೆ ನೀಡುವ ಮೂಲಕ ವಸಹಾತುಶಾಹಿ ಕಾಲದಲ್ಲಿ ಜಾರಿಯಲ್ಲಿದ್ದ ನಿರ್ಧಾರವನ್ನು ಕೊನೆಗೊಳಿಸಲಾಗಿದೆ. 1937ರಲ್ಲಿ ಮುಸ್ಲಿಂ ಲೀಗ್ನ ಸೈಯದ್ ಸಾದುಲ್ಲಾ ಅವಧಿಯಲ್ಲಿ ಈ ಪದ್ಧತಿಯನ್ನು ಜಾರಿಗೆ ತರಲಾಗಿತ್ತು’ ಎಂದು ಶರ್ಮಾ ಅವರು ‘ಎಕ್ಸ್’ ಮೂಲಕ ತಿಳಿಸಿದ್ದಾರೆ.</p><p>‘ಗೌರವಾನ್ವಿತ ಸ್ವೀಕರ್ ಬಿಸ್ವಜಿತ್ ದೈಮಾರಿ ಹಾಗೂ ಶಾಸಕರು ಸೇರಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ಶರ್ಮಾ ಹೇಳಿದ್ದಾರೆ.</p><p>ಹಿಂದಿನ ಬೇಸಿಗೆ ಅಧಿವೇಶನದಲ್ಲಿ ಶುಕ್ರವಾರ ಎರಡು ತಾಸುಗಳ ಕಾಲ ವಿರಾಮ ನೀಡಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p><p>‘ವಿರಾಮದ ನಿರ್ಧಾರ ಕೈಬಿಡಲು ವಿಧಾನಸಭೆಯ ನೀತಿ ಸಮಿತಿಯು ಅವಿರೋಧವಾಗಿ ಒಪ್ಪಿಕೊಂಡಿದೆ’ ಎಂದು ಈಗಾಗಲೇ ಅಧಿಕೃತ ನಿರ್ಧಾರದ ಪ್ರಕಟಣೆಯನ್ನು ಎಲ್ಲರಿಗೂ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p><p>1937ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ ಈ ಪದ್ಧತಿ ಜಾರಿಗೆ ಬಂದಿತ್ತು. ಶುಕ್ರವಾರ 11 ಗಂಟೆಗೆ ಅಧಿವೇಶನ ಸ್ಥಗಿತಗೊಳಿಸಿ, ಮುಸ್ಲಿಂ ಶಾಸಕರಿಗೆ ನಮಾಜ್ ಮಾಡಲು ಅವಕಾಶ ನೀಡಲಾಗುತ್ತಿತ್ತು. ಮಧ್ಯಾಹ್ನ ಊಟದ ನಂತರ ಮತ್ತೆ ಅಧಿವೇಶನ ನಡೆಯುತ್ತಿತ್ತು.</p><p>ಮುಸ್ಲಿಂ ವಿರೋಧಿ ನಡೆ: ರಾಜಕೀಯ ಲಾಭಕ್ಕಾಗಿ ಬಿಜೆಪಿ ನೇತೃತ್ವದ ಸರ್ಕಾರವು ಈ ನಿರ್ಧಾರ ತೆಗೆದುಕೊಂಡಿದೆ ಎಂದು ಪ್ರಮುಖ ಪ್ರತಿಪಕ್ಷ ಎಐಯುಡಿಎಫ್ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>