<p><strong>ಗುವಾಹಟಿ: </strong>ರಾಜ್ಯದಲ್ಲಿ ಹಿಂದೂ, ಜೈನರು, ಸಿಖ್ಖರು ಮತ್ತು ಗೋಮಾಂಸ ಸೇವಿಸದ ಇತರೆ ಸಮುದಾಯದವರು ಪ್ರಾಬಲ್ಯ ಹೊಂದಿರುವ ಪ್ರದೇಶಗಳಲ್ಲಿ ಗೋಮಾಂಸ ಮಾರಾಟ ನಿಷೇಧಿಸಲು ಅಸ್ಸಾಂನ ಬಿಜೆಪಿ ಸರ್ಕಾರ ಉದ್ದೇಶಿಸಿದೆ.</p>.<p class="bodytext">ಈ ಸಂಬಂಧ ‘ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆ 2021’ಯ ಮಸೂದೆಯನ್ನು ಸರ್ಕಾರ ಮಂಡಿಸಿದೆ. ಅದರ ಪ್ರಕಾರ ದೇಗುಲ ಸೇರಿ ಹಿಂದೂ ಧಾರ್ಮಿಕ ಸಂಸ್ಥೆಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟವನ್ನು ನಿರ್ಬಂಧಿಸಲಾಗುತ್ತದೆ.</p>.<p class="bodytext">ಅಸ್ಸಾಂ ಸರ್ಕಾರದ ಅನುಮತಿಯಿಲ್ಲದೇ ನೆರೆಯ ರಾಜ್ಯಗಳಿಂದ ರಾಜ್ಯಕ್ಕೆ ಗೋಮಾಂಸ ಸಾಗಣೆಯನ್ನೂ ನಿರ್ಬಂಧಿಸಲು ಮಸೂದೆ ಅವಕಾಶ ನೀಡಲಿದೆ. ಇದು ನೆರೆಯ ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯಗಳಿಗೆ ಇರಿಸುಮುರಿಸು ತಂದಿದೆ.</p>.<p class="bodytext">ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮಸೂದೆಯನ್ನು ಮಂಡಿಸಿದರು. ಗೋಹತ್ಯೆ, ಗೋಮಾಂಸ ಸೇವನೆ, ಸಾಗಣೆ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕ್ರಮಗಳಿಗೆ ಅವಕಾಶ ಇರದಿದ್ದ ಹಾಲಿ 1950ರ ಕಾಯ್ದೆ ಬದಲು ಹೊಸ ಕಾಯ್ದೆ ತರುವುದು ಉದ್ದೇಶ.</p>.<p class="bodytext">ಹಾಲಿ ಕಾಯ್ದೆಯಡಿ, 14 ವರ್ಷ ಮೀರಿದ ಜಾನುವಾರುಗಳ ಹತ್ಯೆಗೆ ಅವಕಾಶವಿತ್ತು. ಉದ್ದೇಶಿತ ಮಸೂದೆಯು ಲೈಸೆನ್ಸ್ ಹೊಂದಿರುವ ಕಸಾಯಿಖಾನೆಗಳಲ್ಲಿಯಷ್ಟೇ ಗೋಹತ್ಯೆಗೆ ಅವಕಾಶ ನೀಡಿದೆ. ನಿಯಮಗಳ ಉಲ್ಲಂಘನೆ ಸಾಬೀತಾದಲ್ಲಿ 3 ರಿಂದ 5 ವರ್ಷ ಸಜೆ ಮತ್ತು ₹ 3ಲಕ್ಷದಿಂದ ₹ 5 ಲಕ್ಷವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ: </strong>ರಾಜ್ಯದಲ್ಲಿ ಹಿಂದೂ, ಜೈನರು, ಸಿಖ್ಖರು ಮತ್ತು ಗೋಮಾಂಸ ಸೇವಿಸದ ಇತರೆ ಸಮುದಾಯದವರು ಪ್ರಾಬಲ್ಯ ಹೊಂದಿರುವ ಪ್ರದೇಶಗಳಲ್ಲಿ ಗೋಮಾಂಸ ಮಾರಾಟ ನಿಷೇಧಿಸಲು ಅಸ್ಸಾಂನ ಬಿಜೆಪಿ ಸರ್ಕಾರ ಉದ್ದೇಶಿಸಿದೆ.</p>.<p class="bodytext">ಈ ಸಂಬಂಧ ‘ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆ 2021’ಯ ಮಸೂದೆಯನ್ನು ಸರ್ಕಾರ ಮಂಡಿಸಿದೆ. ಅದರ ಪ್ರಕಾರ ದೇಗುಲ ಸೇರಿ ಹಿಂದೂ ಧಾರ್ಮಿಕ ಸಂಸ್ಥೆಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟವನ್ನು ನಿರ್ಬಂಧಿಸಲಾಗುತ್ತದೆ.</p>.<p class="bodytext">ಅಸ್ಸಾಂ ಸರ್ಕಾರದ ಅನುಮತಿಯಿಲ್ಲದೇ ನೆರೆಯ ರಾಜ್ಯಗಳಿಂದ ರಾಜ್ಯಕ್ಕೆ ಗೋಮಾಂಸ ಸಾಗಣೆಯನ್ನೂ ನಿರ್ಬಂಧಿಸಲು ಮಸೂದೆ ಅವಕಾಶ ನೀಡಲಿದೆ. ಇದು ನೆರೆಯ ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯಗಳಿಗೆ ಇರಿಸುಮುರಿಸು ತಂದಿದೆ.</p>.<p class="bodytext">ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮಸೂದೆಯನ್ನು ಮಂಡಿಸಿದರು. ಗೋಹತ್ಯೆ, ಗೋಮಾಂಸ ಸೇವನೆ, ಸಾಗಣೆ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕ್ರಮಗಳಿಗೆ ಅವಕಾಶ ಇರದಿದ್ದ ಹಾಲಿ 1950ರ ಕಾಯ್ದೆ ಬದಲು ಹೊಸ ಕಾಯ್ದೆ ತರುವುದು ಉದ್ದೇಶ.</p>.<p class="bodytext">ಹಾಲಿ ಕಾಯ್ದೆಯಡಿ, 14 ವರ್ಷ ಮೀರಿದ ಜಾನುವಾರುಗಳ ಹತ್ಯೆಗೆ ಅವಕಾಶವಿತ್ತು. ಉದ್ದೇಶಿತ ಮಸೂದೆಯು ಲೈಸೆನ್ಸ್ ಹೊಂದಿರುವ ಕಸಾಯಿಖಾನೆಗಳಲ್ಲಿಯಷ್ಟೇ ಗೋಹತ್ಯೆಗೆ ಅವಕಾಶ ನೀಡಿದೆ. ನಿಯಮಗಳ ಉಲ್ಲಂಘನೆ ಸಾಬೀತಾದಲ್ಲಿ 3 ರಿಂದ 5 ವರ್ಷ ಸಜೆ ಮತ್ತು ₹ 3ಲಕ್ಷದಿಂದ ₹ 5 ಲಕ್ಷವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>