ಕೃಷಿಕ ಮುಕ್ತಿ ಸಂಗ್ರಾಮ ನೇತೃತ್ವದಲ್ಲಿ 70ಕ್ಕೂ ಹೆಚ್ಚು ಸಂಘಟನೆಗಳು ಮಸೂದೆ ವಿರುದ್ಧ ಗುವಾಹಟಿಯಲ್ಲಿ ಬೃಹತ್ ರ್ಯಾಲಿ ನಡೆಸಿವೆ. ಬಿಜೆಪಿ ಜತೆ ಮೈತ್ರಿಯನ್ನು ಕಡಿದುಕೊಳ್ಳುವಂತೆ ಒತ್ತಾಯಿಸಿ ಅಸ್ಸಾಂ ಗಣ ಪರಿಷತ್ (ಎಜಿಪಿ) ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಕಾರರು ಮುಂದಾಗಿದ್ದರು. ಆದರೆ, ಪೊಲೀಸರು ಇದಕ್ಕೆ ಅವಕಾಶ ಕೊಡಲಿಲ್ಲ.