<p class="title"><strong>ಗುವಾಹಟಿ:</strong> ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಆಯಿಲ್ ಇಂಡಿಯಾ ಲಿಮಿಟೆಡ್ಗೆ ಸೇರಿದ ಅನಿಲ ಬಾವಿಯಲ್ಲಿ ಸ್ಫೋಟ ಸಂಭವಿಸಲು ಕಾರಣವಾದ ಅಂಶಗಳನ್ನು ಪತ್ತೆಹಚ್ಚಲು ಉನ್ನತಮಟ್ಟದ ತನಿಖೆಗೆ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್ ಆದೇಶಿಸಿದ್ದಾರೆ.</p>.<p class="bodytext">ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಣಿಂದರ್ ಸಿಂಗ್ ಅವರು ತನಿಖೆ ಕೈಗೊಳ್ಳಲಿದ್ದು, 15 ದಿನದೊಳಗೆ ವರದಿ ಸಲ್ಲಿಕೆಯಾಗಲಿದೆ.</p>.<p class="bodytext">ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆಯೂ ತನಿಖೆ ಬೆಳಕು ಚೆಲ್ಲಲಿದೆ. ದುರಂತಕ್ಕೆ ಕಾರಣರಾದ ತಪ್ಪಿತಸ್ಥರನ್ನು ತನಿಖಾ ತಂಡ ಪತ್ತೆ ಮಾಡಲಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತಂಡ ಶಿಫಾರಸು ಮಾಡಲಿದೆ.</p>.<p class="bodytext">ಬಾಗ್ಜನ್ ಎಂಬಲ್ಲಿರುವ ಅನಿಲ ಬಾವಿಯಲ್ಲಿ 16 ದಿನಗಳಿಂದ ಅನಿಲ ಸೋರಿಕೆಯಾಗಿ, ಮಂಗಳವಾರ ಅದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಗುವಾಹಟಿ:</strong> ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಆಯಿಲ್ ಇಂಡಿಯಾ ಲಿಮಿಟೆಡ್ಗೆ ಸೇರಿದ ಅನಿಲ ಬಾವಿಯಲ್ಲಿ ಸ್ಫೋಟ ಸಂಭವಿಸಲು ಕಾರಣವಾದ ಅಂಶಗಳನ್ನು ಪತ್ತೆಹಚ್ಚಲು ಉನ್ನತಮಟ್ಟದ ತನಿಖೆಗೆ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್ ಆದೇಶಿಸಿದ್ದಾರೆ.</p>.<p class="bodytext">ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಣಿಂದರ್ ಸಿಂಗ್ ಅವರು ತನಿಖೆ ಕೈಗೊಳ್ಳಲಿದ್ದು, 15 ದಿನದೊಳಗೆ ವರದಿ ಸಲ್ಲಿಕೆಯಾಗಲಿದೆ.</p>.<p class="bodytext">ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆಯೂ ತನಿಖೆ ಬೆಳಕು ಚೆಲ್ಲಲಿದೆ. ದುರಂತಕ್ಕೆ ಕಾರಣರಾದ ತಪ್ಪಿತಸ್ಥರನ್ನು ತನಿಖಾ ತಂಡ ಪತ್ತೆ ಮಾಡಲಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತಂಡ ಶಿಫಾರಸು ಮಾಡಲಿದೆ.</p>.<p class="bodytext">ಬಾಗ್ಜನ್ ಎಂಬಲ್ಲಿರುವ ಅನಿಲ ಬಾವಿಯಲ್ಲಿ 16 ದಿನಗಳಿಂದ ಅನಿಲ ಸೋರಿಕೆಯಾಗಿ, ಮಂಗಳವಾರ ಅದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>