<p class="title"><strong>ಜೊರ್ರಾಟ್(ಅಸ್ಸಾಂ):</strong> ಅಸ್ಸಾಂನ ಜೊರ್ರಾಟ್ ಜಿಲ್ಲೆಯ ಟೀ ಎಸ್ಟೇಟ್ ಬಳಿ 2019ರ ಆಗಸ್ಟ್ 31ರಂದು 73 ವರ್ಷದ ವೈದ್ಯಾಧಿಕಾರಿ ಮೇಲೆ ನಡೆದಿದ್ದ ಗುಂಪು ಹಲ್ಲೆ, ಹತ್ಯೆ ಪ್ರಕರಣದ ಸಂಬಂಧ ಜಿಲ್ಲಾ ನ್ಯಾಯಾಲಯ 25 ಜನರನ್ನು ಅಪರಾಧಿ ಎಂದು ಘೋಷಿಸಿದೆ.</p>.<p class="title">ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಬಿನ್ ಫುಕನ್ ಅವರು, ಐಪಿಸಿ ಮತ್ತು ಅಸ್ಸಾಂ ವೈದ್ಯಕೀಯ ಸೇವೆ ಸಿಬ್ಬಂದಿ, ಸಂಸ್ಥೆಗಳ (ಹಿಂಸೆ, ಹಾನಿ ವಿರುದ್ಧ ರಕ್ಷಣೆ) ಕಾಯ್ದೆಗಳ ವಿವಿಧ ಸೆಕ್ಷನ್ಗಳ ಅಡಿ ಶಿಕ್ಷೆ ವಿಧಿಸಲಾಗಿದೆ ಎಂದು ಪ್ರಕಟಿಸಿದರು.</p>.<p class="title">ಶಿಕ್ಷೆಯ ಸ್ವರೂಪ ಮತ್ತು ಪ್ರಮಾಣ ಕುರಿತ ವಿವರಗಳನ್ನು ಅಕ್ಟೋಬರ್ 19ರಂದು ಪ್ರಕಟಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆರೋಪಿಗಳಲ್ಲಿ ಒಬ್ಬಾತ ವಿಚಾರಣೆ ಅವಧಿಯಲ್ಲಿ ಮೃತಪಟ್ಟಿದ್ದು, ಆತನ ವಿರುದ್ಧದ ಆದೇಶ ಕಾಯ್ದಿರಿಸಲಾಗಿದೆ.</p>.<p>ಆ. 31ರಂದು ಹಿರಿಯ ವೈದ್ಯಾಧಿಕಾರಿ ಡೆಬೆನ್ ದತ್ತಾ ಅವರ ಮೇಲೆ ಗುಂಪು ದಾಳಿ ನಡೆಸಿದ್ದು, ತೀವ್ರವಾಗಿ ಹಲ್ಲೆ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವೈದ್ಯಾಧಿಕಾರಿ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಗುಂಪು ಆಸ್ಪತ್ರೆಯಲ್ಲೂ ದಾಂದಲೆ ನಡೆಸಿತ್ತು.</p>.<p>ಆದೇಶ ಕುರಿತು ಪ್ರತಿಕ್ರಿಯಿಸಿರುವ ದತ್ತಾ ಅವರ ಪುತ್ರಿ, ‘ನನ್ನ ತಂದೆಯನ್ನು ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬಯಸುತ್ತೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜೊರ್ರಾಟ್(ಅಸ್ಸಾಂ):</strong> ಅಸ್ಸಾಂನ ಜೊರ್ರಾಟ್ ಜಿಲ್ಲೆಯ ಟೀ ಎಸ್ಟೇಟ್ ಬಳಿ 2019ರ ಆಗಸ್ಟ್ 31ರಂದು 73 ವರ್ಷದ ವೈದ್ಯಾಧಿಕಾರಿ ಮೇಲೆ ನಡೆದಿದ್ದ ಗುಂಪು ಹಲ್ಲೆ, ಹತ್ಯೆ ಪ್ರಕರಣದ ಸಂಬಂಧ ಜಿಲ್ಲಾ ನ್ಯಾಯಾಲಯ 25 ಜನರನ್ನು ಅಪರಾಧಿ ಎಂದು ಘೋಷಿಸಿದೆ.</p>.<p class="title">ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಬಿನ್ ಫುಕನ್ ಅವರು, ಐಪಿಸಿ ಮತ್ತು ಅಸ್ಸಾಂ ವೈದ್ಯಕೀಯ ಸೇವೆ ಸಿಬ್ಬಂದಿ, ಸಂಸ್ಥೆಗಳ (ಹಿಂಸೆ, ಹಾನಿ ವಿರುದ್ಧ ರಕ್ಷಣೆ) ಕಾಯ್ದೆಗಳ ವಿವಿಧ ಸೆಕ್ಷನ್ಗಳ ಅಡಿ ಶಿಕ್ಷೆ ವಿಧಿಸಲಾಗಿದೆ ಎಂದು ಪ್ರಕಟಿಸಿದರು.</p>.<p class="title">ಶಿಕ್ಷೆಯ ಸ್ವರೂಪ ಮತ್ತು ಪ್ರಮಾಣ ಕುರಿತ ವಿವರಗಳನ್ನು ಅಕ್ಟೋಬರ್ 19ರಂದು ಪ್ರಕಟಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆರೋಪಿಗಳಲ್ಲಿ ಒಬ್ಬಾತ ವಿಚಾರಣೆ ಅವಧಿಯಲ್ಲಿ ಮೃತಪಟ್ಟಿದ್ದು, ಆತನ ವಿರುದ್ಧದ ಆದೇಶ ಕಾಯ್ದಿರಿಸಲಾಗಿದೆ.</p>.<p>ಆ. 31ರಂದು ಹಿರಿಯ ವೈದ್ಯಾಧಿಕಾರಿ ಡೆಬೆನ್ ದತ್ತಾ ಅವರ ಮೇಲೆ ಗುಂಪು ದಾಳಿ ನಡೆಸಿದ್ದು, ತೀವ್ರವಾಗಿ ಹಲ್ಲೆ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವೈದ್ಯಾಧಿಕಾರಿ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಗುಂಪು ಆಸ್ಪತ್ರೆಯಲ್ಲೂ ದಾಂದಲೆ ನಡೆಸಿತ್ತು.</p>.<p>ಆದೇಶ ಕುರಿತು ಪ್ರತಿಕ್ರಿಯಿಸಿರುವ ದತ್ತಾ ಅವರ ಪುತ್ರಿ, ‘ನನ್ನ ತಂದೆಯನ್ನು ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬಯಸುತ್ತೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>