ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನ ನಮ್ಮನ್ನು ಆಶೀರ್ವದಿಸಿ ಮತ್ತೆ ಅಧಿಕಾರ ನೀಡಿದ್ದಾರೆ: ಸರ್ಬಾನಂದ್‌ ಸೊನೊವಾಲ್‌

Last Updated 2 ಮೇ 2021, 8:07 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಸರ್ಬಾನಂದ್‌ ಸೊನೊವಾಲ್‌ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಪಕ್ಷವು ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಗೆಲುವು ಬಹುತೇಕ ಖಚಿತವಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದ ಜನ ನಮ್ಮನ್ನು ಆಶೀರ್ವದಿಸಿದ್ದಾರೆ. ಮತ್ತೆ ಅಧಿಕಾರ ನೀಡಿದ್ದಾರೆ’ ಎಂದು ಹೇಳಿದ್ದಾರೆ.

ಮಧ್ಯಾಹ್ನ 1 ಗಂಟೆವರೆಗಿನ ಮತ ಎಣಿಕೆ ಪ್ರಕಾರ, ಅಸ್ಸಾಂನಲ್ಲಿ ಬಿಜೆಪಿ 81 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಕೇವಲ 43 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಳ್ಳುವುದು ಸಾಧ್ಯವಾಗಿದೆ.

‘ಜನ ನಮ್ಮನ್ನು ಆಶೀರ್ವದಿಸಿದ್ದಾರೆ. ಬಿಜೆಪಿ ಸರ್ಕಾರ ರಚಿಸಲಿದೆ ಎಂಬುದನ್ನು ಖಚಿತವಾಗಿ ಹೇಳಬಲ್ಲೆ. ನಮ್ಮ ಮಿತ್ರಪಕ್ಷಗಳಾದ ಎಜಿಪಿ ಮತ್ತು ಯುಪಿಪಿಎಲ್‌ ಜತೆ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ’ ಎಂದು ಸೊನೊವಾಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT