ಗುವಾಹಟಿ: ಅಸ್ಸಾಂನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಬ್ರಹ್ಮಪುತ್ರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಪ್ರವಾಹದಿಂದಾಗಿ ಮೋರಿಗಾಂವ್ ಜಿಲ್ಲೆಯ ಕನಿಷ್ಠ 105 ಗ್ರಾಮಗಳು ಹಾನಿಗೊಳಗಾಗಿದ್ದು, 3,059 ಹೆಕ್ಟೇರ್ಗಿಂತಲೂ ಹೆಚ್ಚು ಬೆಳೆ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.
‘ಪ್ರವಾಹದಿಂದಾಗಿ ರಾಜ್ಯದಾದ್ಯಂತ ಸುಮಾರು 22,000 ಹೆಕ್ಟೇರ್ ಬೆಳೆ ಹಾನಿಯಾಗಿದೆ. ರೈತರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಹಿಂದೆ ಸಂತ್ರಸ್ತ ರೈತರಿಗೆ ಸರ್ಕಾರದಿಂದ ಏನೂ ಸಿಗಲಿಲ್ಲ. ಆದರೆ, ನಮ್ಮ ಸರ್ಕಾರ ರೈತರಿಗೆ ಪರಿಹಾರ ನೀಡಲಿದೆ. ಬೆಳೆ ಹಾನಿ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಪರಿಹಾರ ವಿತರಿಸಲಾಗುವುದು’ ಎಂದು ಅಸ್ಸಾಂನ ಕೃಷಿ ಸಚಿವ ಅತುಲ್ ಬೋರಾ ತಿಳಿಸಿದ್ದಾರೆ.