<p><strong>ಗುವಾಹಟಿ</strong>: ಹೊಸ ಆಧಾರ್ ಕಾರ್ಡ್ ಪಡೆದುಕೊಳ್ಳಲು ಅಕ್ಟೋಬರ್ 1ರಿಂದ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಅಸ್ಸಾಂನಿಂದ ಹೊರಗಟ್ಟುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಕಾರ್ಯಯೋಜನೆಯ ಭಾಗವಾಗಿ ಸಚಿವ ಸಂಪುಟವು ಗುರುವಾರ ಈ ನಿರ್ಧಾರ ಕೈಗೊಂಡಿದೆ.</p>.<p>ನೆರೆಯ ಬಾಂಗ್ಲಾದೇಶದ ‘ಅಕ್ರಮ ವಲಸಿಗರು’ ಅಸ್ಸಾಂನಲ್ಲಿ ಆಧಾರ್ ಕಾರ್ಡ್ ಪಡೆದುಕೊಂಡು ಭಾರತದ ಪೌರತ್ವ ಪಡೆದುಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ. ಈ ಬಗ್ಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ.</p>.<p>‘ಬಾಂಗ್ಲಾದೇಶದ ಅಕ್ರಮ ವಲಸಿಗರು ಭಾರತ ಪ್ರವೇಶಿಸುವುದನ್ನು ಪ್ರತಿ ನಿತ್ಯವೂ ತಡೆಯುತ್ತಿದ್ದೇವೆ. ನಿನ್ನೆಯಷ್ಟೇ ಏಳು ಬಾಂಗ್ಲಾದೇಶಿಗರನ್ನು ತಡೆದಿದ್ದೇವೆ. ಆದರೂ ಕೆಲವರು ಭಾರತ ಪ್ರವೇಶಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ಯತ್ನಿಸುತ್ತಾರೆ. ಬಳಿಕ ಇದನ್ನೇ ಬಳಸಿಕೊಂಡು ಭಾರತದ ಪೌರತ್ವ ಪಡೆದುಕೊಳ್ಳುತ್ತಾರೆ. ಅವರ ಈ ಯೋಜನೆಯನ್ನು ನಾವು ಹಾಳು ಮಾಡಬೇಕು’ ಎಂದು ಮುಖ್ಯಮಂತ್ರಿ ಹೇಳಿದರು.</p>.<p>‘ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಮತ್ತು ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಿಕೊಡುವ ಕಾರ್ಯವು ಮುಂದುವರಿಯಲಿದೆ’ ಎಂದರು.</p>.<p>‘ಮುಂಬರುವ ಅಸ್ಸಾಂ ಚುನಾವಣೆಯ ಸಲುವಾಗಿ ಮುಖ್ಯಮಂತ್ರಿ ಶರ್ಮಾ ಅವರು ಈ ರೀತಿ ಮಾಡುತ್ತಿದ್ದಾರೆ. ಪದೇ ಪದೇ ಬಂಗಾಲಿ ಭಾಷೆ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸಿ ಮತವಿಭಜನೆಗೆ ಯತ್ನಿಸುತ್ತಿದ್ದಾರೆ’ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಹೊಸ ಆಧಾರ್ ಕಾರ್ಡ್ ಪಡೆದುಕೊಳ್ಳಲು ಅಕ್ಟೋಬರ್ 1ರಿಂದ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಅಸ್ಸಾಂನಿಂದ ಹೊರಗಟ್ಟುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಕಾರ್ಯಯೋಜನೆಯ ಭಾಗವಾಗಿ ಸಚಿವ ಸಂಪುಟವು ಗುರುವಾರ ಈ ನಿರ್ಧಾರ ಕೈಗೊಂಡಿದೆ.</p>.<p>ನೆರೆಯ ಬಾಂಗ್ಲಾದೇಶದ ‘ಅಕ್ರಮ ವಲಸಿಗರು’ ಅಸ್ಸಾಂನಲ್ಲಿ ಆಧಾರ್ ಕಾರ್ಡ್ ಪಡೆದುಕೊಂಡು ಭಾರತದ ಪೌರತ್ವ ಪಡೆದುಕೊಳ್ಳುತ್ತಾರೆ ಎಂದು ಸರ್ಕಾರ ಹೇಳಿದೆ. ಈ ಬಗ್ಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ.</p>.<p>‘ಬಾಂಗ್ಲಾದೇಶದ ಅಕ್ರಮ ವಲಸಿಗರು ಭಾರತ ಪ್ರವೇಶಿಸುವುದನ್ನು ಪ್ರತಿ ನಿತ್ಯವೂ ತಡೆಯುತ್ತಿದ್ದೇವೆ. ನಿನ್ನೆಯಷ್ಟೇ ಏಳು ಬಾಂಗ್ಲಾದೇಶಿಗರನ್ನು ತಡೆದಿದ್ದೇವೆ. ಆದರೂ ಕೆಲವರು ಭಾರತ ಪ್ರವೇಶಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ಯತ್ನಿಸುತ್ತಾರೆ. ಬಳಿಕ ಇದನ್ನೇ ಬಳಸಿಕೊಂಡು ಭಾರತದ ಪೌರತ್ವ ಪಡೆದುಕೊಳ್ಳುತ್ತಾರೆ. ಅವರ ಈ ಯೋಜನೆಯನ್ನು ನಾವು ಹಾಳು ಮಾಡಬೇಕು’ ಎಂದು ಮುಖ್ಯಮಂತ್ರಿ ಹೇಳಿದರು.</p>.<p>‘ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಮತ್ತು ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಿಕೊಡುವ ಕಾರ್ಯವು ಮುಂದುವರಿಯಲಿದೆ’ ಎಂದರು.</p>.<p>‘ಮುಂಬರುವ ಅಸ್ಸಾಂ ಚುನಾವಣೆಯ ಸಲುವಾಗಿ ಮುಖ್ಯಮಂತ್ರಿ ಶರ್ಮಾ ಅವರು ಈ ರೀತಿ ಮಾಡುತ್ತಿದ್ದಾರೆ. ಪದೇ ಪದೇ ಬಂಗಾಲಿ ಭಾಷೆ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸಿ ಮತವಿಭಜನೆಗೆ ಯತ್ನಿಸುತ್ತಿದ್ದಾರೆ’ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>