<p><strong>ಗುವಾಹಟಿ:</strong> ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಬಹುಪತ್ನಿತ್ವವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ತಿಂಗಳು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಹೊಸ ಮಸೂದೆಗಳನ್ನು ರಾಜ್ಯ ಸರ್ಕಾರ ಮಂಡಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಹೇಳಿದ್ದಾರೆ. </p><p>ರಾಜ್ಯ ಸಚಿವ ಸಂಪುಟದಿಂದ ಕರಡು ಮಸೂದೆಗೆ ಅನುಮತಿ ಸಿಕ್ಕ ನಂತರ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. </p><p>ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಲವ್ ಜಿಹಾದ್, ಬಹುಪತ್ನಿತ್ವ ತಡೆ, ಸತ್ರ( ವೈಷ್ಣವ ಮಠ)ಗಳ ಸಂರಕ್ಷಣೆ ಹಾಗೂ ಬುಡಕಟ್ಟು ಜನಾಂಗದ ಭೂ ಹಕ್ಕುಗಳ ಕುರಿತ ಮಸೂದೆಗಳನ್ನು ಮಂಡಿಸಲಾಗುತ್ತಿದೆ. ಇದು ಐತಿಹಾಸಿಕ ಘಟನೆಯಾಗಲಿದೆ ಎಂದು ಹೇಳಿದ್ದಾರೆ. </p><p>ಆದರೆ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬಿಟ್ಟುಕೊಡಲಿಲ್ಲ. </p><p>ಮುಂದಿನ ತಿಂಗಳಲ್ಲಿ ಅಸ್ಸಾಂ ರಾಜ್ಯದಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದ್ದು, ಪ್ರಮುಖ ಮಸೂದೆಗಳು ಮಂಡನೆಯಾಗುವ ನಿರೀಕ್ಷೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಬಹುಪತ್ನಿತ್ವವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ತಿಂಗಳು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಹೊಸ ಮಸೂದೆಗಳನ್ನು ರಾಜ್ಯ ಸರ್ಕಾರ ಮಂಡಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಹೇಳಿದ್ದಾರೆ. </p><p>ರಾಜ್ಯ ಸಚಿವ ಸಂಪುಟದಿಂದ ಕರಡು ಮಸೂದೆಗೆ ಅನುಮತಿ ಸಿಕ್ಕ ನಂತರ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. </p><p>ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಲವ್ ಜಿಹಾದ್, ಬಹುಪತ್ನಿತ್ವ ತಡೆ, ಸತ್ರ( ವೈಷ್ಣವ ಮಠ)ಗಳ ಸಂರಕ್ಷಣೆ ಹಾಗೂ ಬುಡಕಟ್ಟು ಜನಾಂಗದ ಭೂ ಹಕ್ಕುಗಳ ಕುರಿತ ಮಸೂದೆಗಳನ್ನು ಮಂಡಿಸಲಾಗುತ್ತಿದೆ. ಇದು ಐತಿಹಾಸಿಕ ಘಟನೆಯಾಗಲಿದೆ ಎಂದು ಹೇಳಿದ್ದಾರೆ. </p><p>ಆದರೆ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬಿಟ್ಟುಕೊಡಲಿಲ್ಲ. </p><p>ಮುಂದಿನ ತಿಂಗಳಲ್ಲಿ ಅಸ್ಸಾಂ ರಾಜ್ಯದಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದ್ದು, ಪ್ರಮುಖ ಮಸೂದೆಗಳು ಮಂಡನೆಯಾಗುವ ನಿರೀಕ್ಷೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>