<p><strong>ಕೊಕ್ರಝಾರ್(ಅಸ್ಸಾಂ):</strong> ಅಸ್ಸಾಂನ ಕೊಕ್ರಝಾರ್ ಜಿಲ್ಲೆಯ ರೈಲ್ವೆ ಹಳಿಯಲ್ಲಿ ದುಷ್ಕರ್ಮಿಗಳು ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಿಸಿದ್ದು, ಗುರುವಾರ ಮುಂಜಾನೆ ಅಸ್ಸಾಂ ಮತ್ತು ಉತ್ತರ ಬಂಗಾಳದ ಕೆಲವು ಭಾಗಗಳಲ್ಲಿ ರೈಲ್ವೆ ಸೇವೆ ಅಸ್ತವ್ಯಸ್ತಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಧ್ಯರಾತ್ರಿಯ ನಂತರ ಸಲಕಟಿ ಕಡೆಗೆ ಹೋಗುವ ಮಾರ್ಗದಲ್ಲಿ ಕೊಕ್ರಝಾರ್ ರೈಲು ನಿಲ್ದಾಣದಿಂದ ಸುಮಾರು ಐದು ಕಿ.ಮೀ ದೂರದಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಸ್ಫೋಟದಿಂದ ಸುಮಾರು ಮೂರು ಅಡಿಯಷ್ಟು ರೈಲು ಹಳಿ ಕಿತ್ತುಹೋಗಿತ್ತು. ಹಾನಿಗೊಳಗಾದ ಹಳಿಯ ತುಂಡುಗಳು ಹಲವಾರು ಮೀಟರ್ ದೂರಕ್ಕೆ ಚಿಮ್ಮಿವೆ’ಎಂದು ಅವರು ಹೇಳಿದ್ದಾರೆ.</p><p>ಘಟನೆಯಲ್ಲಿ ಯಾವುದೇ ಸಾವುನೋವು ಅಥವಾ ಹಳಿತಪ್ಪಿದ ಬಗ್ಗೆ ವರದಿಗಳಿಲ್ಲ ಎಂದು ಕೊಕ್ರಝಾರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪುಷ್ಪರಾಜ್ ಸಿಂಗ್ ತಿಳಿಸಿದ್ದಾರೆ.</p><p>‘ಹಾನಿಗೊಳಗಾಗಿದ್ದ ಹಳಿಯನ್ನು ದುರಸ್ತಿ ಮಾಡಲಾಗಿದ್ದು, ಈಗ ರೈಲು ಸಂಚಾರ ಪುನರಾರಂಭಿಸಲಾಗಿದೆ’ಎಂದು ಅವರು ಹೇಳಿದ್ದಾರೆ.</p><p>ರಾತ್ರಿಯಿಡೀ ರೈಲು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಕೆಳಬದಿಯ ಅಸ್ಸಾಂ ಮತ್ತು ಉತ್ತರ ಪಶ್ಚಿಮ ಬಂಗಾಳದಲ್ಲಿ ಬೆಳಿಗ್ಗೆ 8 ಗಂಟೆಯವರೆಗೆ ಹಲವು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.</p><p>ರೈಲು ಸೇವೆಗಳನ್ನು ಪುನಃಸ್ಥಾಪಿಸುವ ಮೊದಲು ರೈಲ್ವೆ ಮತ್ತು ಭದ್ರತಾ ಸಿಬ್ಬಂದಿ ಈ ಹಳಿಯಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ.</p><p>ಅಧಿಕಾರಿಗಳು ಮಾರ್ಗದುದ್ದಕ್ಕೂ ಭದ್ರತೆಯನ್ನು ತೀವ್ರಗೊಳಿಸಿದ್ದಾರೆ. ಸ್ಫೋಟದಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಬಂಧಿಸಲು ತನಿಖೆಯನ್ನು ಪ್ರಾರಂಭಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಕ್ರಝಾರ್(ಅಸ್ಸಾಂ):</strong> ಅಸ್ಸಾಂನ ಕೊಕ್ರಝಾರ್ ಜಿಲ್ಲೆಯ ರೈಲ್ವೆ ಹಳಿಯಲ್ಲಿ ದುಷ್ಕರ್ಮಿಗಳು ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಿಸಿದ್ದು, ಗುರುವಾರ ಮುಂಜಾನೆ ಅಸ್ಸಾಂ ಮತ್ತು ಉತ್ತರ ಬಂಗಾಳದ ಕೆಲವು ಭಾಗಗಳಲ್ಲಿ ರೈಲ್ವೆ ಸೇವೆ ಅಸ್ತವ್ಯಸ್ತಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಧ್ಯರಾತ್ರಿಯ ನಂತರ ಸಲಕಟಿ ಕಡೆಗೆ ಹೋಗುವ ಮಾರ್ಗದಲ್ಲಿ ಕೊಕ್ರಝಾರ್ ರೈಲು ನಿಲ್ದಾಣದಿಂದ ಸುಮಾರು ಐದು ಕಿ.ಮೀ ದೂರದಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಸ್ಫೋಟದಿಂದ ಸುಮಾರು ಮೂರು ಅಡಿಯಷ್ಟು ರೈಲು ಹಳಿ ಕಿತ್ತುಹೋಗಿತ್ತು. ಹಾನಿಗೊಳಗಾದ ಹಳಿಯ ತುಂಡುಗಳು ಹಲವಾರು ಮೀಟರ್ ದೂರಕ್ಕೆ ಚಿಮ್ಮಿವೆ’ಎಂದು ಅವರು ಹೇಳಿದ್ದಾರೆ.</p><p>ಘಟನೆಯಲ್ಲಿ ಯಾವುದೇ ಸಾವುನೋವು ಅಥವಾ ಹಳಿತಪ್ಪಿದ ಬಗ್ಗೆ ವರದಿಗಳಿಲ್ಲ ಎಂದು ಕೊಕ್ರಝಾರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪುಷ್ಪರಾಜ್ ಸಿಂಗ್ ತಿಳಿಸಿದ್ದಾರೆ.</p><p>‘ಹಾನಿಗೊಳಗಾಗಿದ್ದ ಹಳಿಯನ್ನು ದುರಸ್ತಿ ಮಾಡಲಾಗಿದ್ದು, ಈಗ ರೈಲು ಸಂಚಾರ ಪುನರಾರಂಭಿಸಲಾಗಿದೆ’ಎಂದು ಅವರು ಹೇಳಿದ್ದಾರೆ.</p><p>ರಾತ್ರಿಯಿಡೀ ರೈಲು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಕೆಳಬದಿಯ ಅಸ್ಸಾಂ ಮತ್ತು ಉತ್ತರ ಪಶ್ಚಿಮ ಬಂಗಾಳದಲ್ಲಿ ಬೆಳಿಗ್ಗೆ 8 ಗಂಟೆಯವರೆಗೆ ಹಲವು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.</p><p>ರೈಲು ಸೇವೆಗಳನ್ನು ಪುನಃಸ್ಥಾಪಿಸುವ ಮೊದಲು ರೈಲ್ವೆ ಮತ್ತು ಭದ್ರತಾ ಸಿಬ್ಬಂದಿ ಈ ಹಳಿಯಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ.</p><p>ಅಧಿಕಾರಿಗಳು ಮಾರ್ಗದುದ್ದಕ್ಕೂ ಭದ್ರತೆಯನ್ನು ತೀವ್ರಗೊಳಿಸಿದ್ದಾರೆ. ಸ್ಫೋಟದಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಬಂಧಿಸಲು ತನಿಖೆಯನ್ನು ಪ್ರಾರಂಭಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>