<p><strong>ಗುವಾಹಟಿ</strong>: ಅಸ್ಸಾಂನ ಬರಾಕ್ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಕರೆ ನೀಡಲಾಗಿದ್ದ ಬಂದ್ನಿಂದ ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.</p>.<p>ಅಂತರ ರಾಜ್ಯ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಮಿಜೋರಾಂ ಜತೆ ನಡೆದ ಸಂಘರ್ಷದ ಸಂದರ್ಭದಲ್ಲಿ ಆರು ಪೊಲೀಸರು ಸೇರಿದಂತೆ ಏಳು ಮಂದಿ ಸಾವಿಗೀಡಾಗಿರುವುದನ್ನು ಪ್ರತಿಭಟಿಸಿ 12 ಗಂಟೆಗಳ ಬಂದ್ಗೆ ಕರೆ ನೀಡಲಾಗಿದೆ.</p>.<p>ಬರಾಕ್ ಡೆಮಾಕ್ರಟಿಕ್ ಫ್ರಂಟ್ ಈ ಬಂದ್ಗೆ ಕರೆ ನೀಡಿದ್ದು, ವಿರೋಧ ಪಕ್ಷ ಎಐಯುಡಿಎಫ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.</p>.<p>ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಿಜೋರಾಂ ಗಡಿ ಪ್ರದೇಶದಲ್ಲಿರುವ ಕಚಾರ್, ಹೈಲಾಕಾಂಡಿ ಮತ್ತು ಕರಿಮಗಂಜ್ ಜಿಲ್ಲೆಗಳಲ್ಲಿ ಸಾರಿಗೆ ಸಂಚಾರ ಬಹುತೇಕ ಸ್ಥಗಿತಗೊಂಡಿದೆ. ರೈಲು ಸಂಚಾರದ ಮೇಲೆ ಬಂದ್ ಯಾವುದೇ ರೀತಿ ಪರಿಣಾಮ ಬೀರಿಲ್ಲ. ಎಲ್ಲೆಡೆ ಅಂಗಡಿಗಳನ್ನು ಸಹ ಮುಚ್ಚಲಾಗಿದೆ.</p>.<p>ಹೈಲಾಕಾಂಡಿಯಲ್ಲಿ ಮಿಜೋರಾಂಗೆ ತೆರಳುವ ರಸ್ತೆ ಮಾರ್ಗಗಳನ್ನು ಕೆಲವು ಸಂಘಟನೆಗಳು ಬಂದ್ ಮಾಡಿವೆ. ಅನಿರ್ದಿಷ್ಟ ಅವಧಿಗೆ ಆರ್ಥಿಕ ನಿರ್ಬಂಧ ಹೇರುವ ನಿಟ್ಟಿನಲ್ಲಿ ಮಿಜೋರಾಂಗೆ ತೆರಳುವ ಲಾರಿಗಳನ್ನು ತಡೆಯಲಾಗುತ್ತಿದೆ.</p>.<p>‘ಬಂದ್ಗೆ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಮ್ಮ ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದರಿಂದ ಅನಿವಾರ್ಯವಾಗಿ ಬಂದ್ಗೆ ಕರೆ ನೀಡಲಾಗಿದೆ. ಈ ವಿವಾದಕ್ಕೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವುದು ಅಗತ್ಯವಿದೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿ ರಕ್ತಪಾತ ನಡೆಯುವುದು ನಮಗೆ ಬೇಕಾಗಿಲ್ಲ’ ಎಂದು ಬಿಡಿಎಫ್ ಮುಖ್ಯ ಸಂಚಾಲಕ ಪ್ರದೀಪ್ ದತ್ತ ರಾಯ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಅಸ್ಸಾಂನ ಬರಾಕ್ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಕರೆ ನೀಡಲಾಗಿದ್ದ ಬಂದ್ನಿಂದ ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.</p>.<p>ಅಂತರ ರಾಜ್ಯ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಮಿಜೋರಾಂ ಜತೆ ನಡೆದ ಸಂಘರ್ಷದ ಸಂದರ್ಭದಲ್ಲಿ ಆರು ಪೊಲೀಸರು ಸೇರಿದಂತೆ ಏಳು ಮಂದಿ ಸಾವಿಗೀಡಾಗಿರುವುದನ್ನು ಪ್ರತಿಭಟಿಸಿ 12 ಗಂಟೆಗಳ ಬಂದ್ಗೆ ಕರೆ ನೀಡಲಾಗಿದೆ.</p>.<p>ಬರಾಕ್ ಡೆಮಾಕ್ರಟಿಕ್ ಫ್ರಂಟ್ ಈ ಬಂದ್ಗೆ ಕರೆ ನೀಡಿದ್ದು, ವಿರೋಧ ಪಕ್ಷ ಎಐಯುಡಿಎಫ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.</p>.<p>ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಿಜೋರಾಂ ಗಡಿ ಪ್ರದೇಶದಲ್ಲಿರುವ ಕಚಾರ್, ಹೈಲಾಕಾಂಡಿ ಮತ್ತು ಕರಿಮಗಂಜ್ ಜಿಲ್ಲೆಗಳಲ್ಲಿ ಸಾರಿಗೆ ಸಂಚಾರ ಬಹುತೇಕ ಸ್ಥಗಿತಗೊಂಡಿದೆ. ರೈಲು ಸಂಚಾರದ ಮೇಲೆ ಬಂದ್ ಯಾವುದೇ ರೀತಿ ಪರಿಣಾಮ ಬೀರಿಲ್ಲ. ಎಲ್ಲೆಡೆ ಅಂಗಡಿಗಳನ್ನು ಸಹ ಮುಚ್ಚಲಾಗಿದೆ.</p>.<p>ಹೈಲಾಕಾಂಡಿಯಲ್ಲಿ ಮಿಜೋರಾಂಗೆ ತೆರಳುವ ರಸ್ತೆ ಮಾರ್ಗಗಳನ್ನು ಕೆಲವು ಸಂಘಟನೆಗಳು ಬಂದ್ ಮಾಡಿವೆ. ಅನಿರ್ದಿಷ್ಟ ಅವಧಿಗೆ ಆರ್ಥಿಕ ನಿರ್ಬಂಧ ಹೇರುವ ನಿಟ್ಟಿನಲ್ಲಿ ಮಿಜೋರಾಂಗೆ ತೆರಳುವ ಲಾರಿಗಳನ್ನು ತಡೆಯಲಾಗುತ್ತಿದೆ.</p>.<p>‘ಬಂದ್ಗೆ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಮ್ಮ ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದರಿಂದ ಅನಿವಾರ್ಯವಾಗಿ ಬಂದ್ಗೆ ಕರೆ ನೀಡಲಾಗಿದೆ. ಈ ವಿವಾದಕ್ಕೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವುದು ಅಗತ್ಯವಿದೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿ ರಕ್ತಪಾತ ನಡೆಯುವುದು ನಮಗೆ ಬೇಕಾಗಿಲ್ಲ’ ಎಂದು ಬಿಡಿಎಫ್ ಮುಖ್ಯ ಸಂಚಾಲಕ ಪ್ರದೀಪ್ ದತ್ತ ರಾಯ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>