ಎರಡು ತಿಂಗಳ ನಂತರ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ ಅವರು ಬಾಲಕಿಯ ನಿವಾಸಕ್ಕೆ ಭೇಟಿ ನೀಡಿದ್ದರು. ಬಳಿಕ ಅವರ ನಿರ್ದೇಶನದಂತೆ ಮೃತದೇಹವನ್ನು ಹೊರ ತೆಗೆದು, ಎರಡನೇ ಬಾರಿಗೆ ಶವಪರೀಕ್ಷೆ ನಡೆಸಿದಾಗ ಅತ್ಯಾಚಾರ ಮತ್ತು ಕೊಲೆ ನಡೆದಿರುವುದು ಬಹಿರಂಗವಾಗಿತ್ತು. ಈ ಬೆನ್ನಲ್ಲೇ ರಾಯ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.