<p><strong>ಗುವಾಹಟಿ</strong>: ಹಿಂಸಾಚಾರ ಪೀಡಿತ ಅಸ್ಸಾಂನ ಕೊಕ್ರಝಾರ್ ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ ಸೇನೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p><p>ಕೊಕ್ರಾಝಾರ್ ಜಿಲ್ಲೆಯ ಕರಿಗಾಂವ್ ಹೊರಠಾಣೆ ವ್ಯಾಪ್ತಿಯ ಮಾನ್ಸಿಂಗ್ ರಸ್ತೆಯಲ್ಲಿ ಮೂವರು ಬೊಡೊ ಸಮುದಾಯದವರನ್ನು ಕರೆದೊಯ್ಯುತ್ತಿದ್ದ ವಾಹನವು ಇಬ್ಬರು ಆದಿವಾಸಿ ವ್ಯಕ್ತಿಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕೆರಳಿದ ಆದಿವಾಸಿಗಳು ಮೂವರು ಬೊಡೊಗಳನ್ನು ಥಳಿಸಿ, ವಾಹನಕ್ಕೆ ಬೆಂಕಿ ಹಚ್ಚಿದ್ದರು. </p>.ಸಂತರ ಶಾಂತಿ ನಡಿಗೆಗೆ ನಾಯಿಯೇ ನಾಯಕ: ಬೀದಿಯಿಂದ ಸೀದಾ ಹೃದಯಕ್ಕೆ ಕಾಲಿಟ್ಟ 'ಅಲೋಕ'.ಆಹಾರ, ಆರೋಗ್ಯಕರ ಪಾನೀಯಗಳ ಸೇವನೆ: ಚಳಿಗಾಲದಲ್ಲಿ ಹೀಗಿರಲಿ ದಿನಚರಿ. <p>ನಿನ್ನೆ (ಮಂಗಳವಾರ) ನಡೆದ ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಂಗಳವಾರ ತಡರಾತ್ರಿ ಕರಿಗಾಂವ್ ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ಸೇನಾ ಸಿಬ್ಬಂದಿ ಜಿಲ್ಲಾಡಳಿತದೊಂದಿಗೆ ಗಸ್ತು ತಿರುಗಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಧನ್ವೀರ್ ನಟನೆಯ ‘ಹಯಗ್ರೀವ‘ ಸಿನಿಮಾದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿ.ಭದ್ರಾವತಿ | ಹಣದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ: ಆರೋಪಿ ಬಂಧನ. <p>ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು ನಾಲ್ಕು ಸೇನಾ ತುಕಡಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕೊಕ್ರಾಝಾರ್ ಮತ್ತು ನೆರೆಯ ಚಿರಾಂಗ್ ಜಿಲ್ಲೆಯಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.</p>.ಕಲಬುರಗಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ: ಹೆಲಿಕಾಪ್ಟರ್ನಿಂದ ಪುಷ್ಪವೃಷ್ಟಿ.ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ: ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಹಿಂಸಾಚಾರ ಪೀಡಿತ ಅಸ್ಸಾಂನ ಕೊಕ್ರಝಾರ್ ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ ಸೇನೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p><p>ಕೊಕ್ರಾಝಾರ್ ಜಿಲ್ಲೆಯ ಕರಿಗಾಂವ್ ಹೊರಠಾಣೆ ವ್ಯಾಪ್ತಿಯ ಮಾನ್ಸಿಂಗ್ ರಸ್ತೆಯಲ್ಲಿ ಮೂವರು ಬೊಡೊ ಸಮುದಾಯದವರನ್ನು ಕರೆದೊಯ್ಯುತ್ತಿದ್ದ ವಾಹನವು ಇಬ್ಬರು ಆದಿವಾಸಿ ವ್ಯಕ್ತಿಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕೆರಳಿದ ಆದಿವಾಸಿಗಳು ಮೂವರು ಬೊಡೊಗಳನ್ನು ಥಳಿಸಿ, ವಾಹನಕ್ಕೆ ಬೆಂಕಿ ಹಚ್ಚಿದ್ದರು. </p>.ಸಂತರ ಶಾಂತಿ ನಡಿಗೆಗೆ ನಾಯಿಯೇ ನಾಯಕ: ಬೀದಿಯಿಂದ ಸೀದಾ ಹೃದಯಕ್ಕೆ ಕಾಲಿಟ್ಟ 'ಅಲೋಕ'.ಆಹಾರ, ಆರೋಗ್ಯಕರ ಪಾನೀಯಗಳ ಸೇವನೆ: ಚಳಿಗಾಲದಲ್ಲಿ ಹೀಗಿರಲಿ ದಿನಚರಿ. <p>ನಿನ್ನೆ (ಮಂಗಳವಾರ) ನಡೆದ ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಂಗಳವಾರ ತಡರಾತ್ರಿ ಕರಿಗಾಂವ್ ಮತ್ತು ಸೂಕ್ಷ್ಮ ಸ್ಥಳಗಳಲ್ಲಿ ಸೇನಾ ಸಿಬ್ಬಂದಿ ಜಿಲ್ಲಾಡಳಿತದೊಂದಿಗೆ ಗಸ್ತು ತಿರುಗಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಧನ್ವೀರ್ ನಟನೆಯ ‘ಹಯಗ್ರೀವ‘ ಸಿನಿಮಾದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿ.ಭದ್ರಾವತಿ | ಹಣದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ: ಆರೋಪಿ ಬಂಧನ. <p>ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು ನಾಲ್ಕು ಸೇನಾ ತುಕಡಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕೊಕ್ರಾಝಾರ್ ಮತ್ತು ನೆರೆಯ ಚಿರಾಂಗ್ ಜಿಲ್ಲೆಯಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.</p>.ಕಲಬುರಗಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ: ಹೆಲಿಕಾಪ್ಟರ್ನಿಂದ ಪುಷ್ಪವೃಷ್ಟಿ.ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ: ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>