ಉದಯ್ ದುಬೆ ಮೃತ ವ್ಯಕ್ತಿ.ಮಾರ್ಚ್ 30ರಂದು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಯನ್ನು ಬೆಂಬಲಿಸಿ ನಡೆದ ಚುನಾವಣಾ ಪ್ರಚಾರದಲ್ಲಿ ಹಿರಿಯ ನಟ ಮಿಥುನ್ ಚಕ್ರವರ್ತಿ ರೋಡ್ ಶೋ ನಡೆಸಿದ್ದರು. ಅದರಲ್ಲಿ ದುಬೆ ಅವರು ಭಾಗವಹಿಸಿದ್ದರಿಂದ ಕುಪಿತಗೊಂಡಿದ್ದ ಟಿಎಂಸಿ ನಾಯಕರು ಅವರನ್ನು ಬೆದರಿಸಿದ್ದರು. ಹೀಗಾಗಿ ದುಬೆ ಒತ್ತಡದಲ್ಲಿದ್ದರು ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.