<p><strong>ಜಮ್ಮು:</strong> ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ, ನ್ಯಾಷನಲ್ ಕಾನ್ಫರೆನ್ಸ್(ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹಾಗೂ ಜಮ್ಮು–ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.</p>.<p>ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆರೋಪಿಯು ಮದ್ಯದ ನಶೆಯಲ್ಲಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿ ಆರೋಪಿ,70 ವರ್ಷದ ಕಮಲ್ ಸಿಂಗ್ ಜಮ್ವಾಲ್ ಅವರನ್ನು ಬಂಧಿಸಲಾಗಿದೆ. ಆರೋಪಿಯು ಪುರಾನಿ ಮಂಡಿ ನಿವಾಸಿ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಜಮ್ಮುವಿನ ಹೊರವಲಯದಲ್ಲಿರುವ ಐಷಾರಾಮಿ ಪ್ರದೇಶ ಗ್ರೇಟರ್ ಕೈಲಾಶ್ನಲ್ಲಿ ಈ ಘಟನೆ ನಡೆದಿದೆ. ಪಕ್ಷದ ಮುಖಂಡ ಬಿ.ಎಸ್.ಚೌಹಾಣ್ ಅವರ ಪುತ್ರನ ಮದುವೆಯಾಗಿದ್ದು, ಶುಭ ಕೋರುವುದಕ್ಕಾಗಿ ಅಬ್ದುಲ್ಲಾ ಹಾಗೂ ಡಿಸಿಎಂ ಚೌಧರಿ ಬಂದಿದ್ದರು. ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ, ಫಾರೂಕ್ ಅಬ್ದುಲ್ಲಾ ಹಾಗೂ ಡಿಸಿಎಂ ಚೌಧರಿ ಹೊರಬರುತ್ತಿದ್ದರು.</p>.<p>‘ಮದುವೆ ಮಂಟಪದ ಹೊರಭಾಗದಲ್ಲಿ ಆರೋಪಿಯು ಕಾಯುತ್ತಿದ್ದ. ಅಬ್ದುಲ್ಲಾ ಹಾಗೂ ಚೌಧರಿ ಅವರು ಹೊರಗೆ ಬರುತ್ತಿದ್ದಂತೆಯೇ ಅವರ ಮೇಲೆ ಗುಂಡು ಹಾರಿಸಲು ಆರೋಪಿ ಯತ್ನಿಸಿದ್ದಾನೆ. ಆಗ, ಸ್ಥಳದಲ್ಲಿಯೇ ಇದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಆತನನ್ನು ತಕ್ಷಣವೇ ತಡೆದಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>‘ಪೊಲೀಸ್ ಅಧಿಕಾರಿಗಳಿಂದ ಕೊಸರಿಕೊಂಡು, ಗುಂಡು ಹಾರಿಸಲು ಆರೋಪಿ ಯತ್ನಿಸಿದ್ದಾನೆ. ಬಂದೂಕು ಕಿತ್ತುಕೊಂಡ ಪೊಲೀಸ್ ಅಧಿಕಾರಿಗಳು, ಆತನನ್ನು ವಶಕ್ಕೆ ಪಡೆದರು’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಮದುವೆ ಸಮಾರಂಭಕ್ಕೆ ತೆರಳಿದ್ದ ವೇಳೆ, ನ್ಯಾಷನಲ್ ಕಾನ್ಫರೆನ್ಸ್(ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹಾಗೂ ಜಮ್ಮು–ಕಾಶ್ಮೀರದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.</p>.<p>ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆರೋಪಿಯು ಮದ್ಯದ ನಶೆಯಲ್ಲಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿ ಆರೋಪಿ,70 ವರ್ಷದ ಕಮಲ್ ಸಿಂಗ್ ಜಮ್ವಾಲ್ ಅವರನ್ನು ಬಂಧಿಸಲಾಗಿದೆ. ಆರೋಪಿಯು ಪುರಾನಿ ಮಂಡಿ ನಿವಾಸಿ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಜಮ್ಮುವಿನ ಹೊರವಲಯದಲ್ಲಿರುವ ಐಷಾರಾಮಿ ಪ್ರದೇಶ ಗ್ರೇಟರ್ ಕೈಲಾಶ್ನಲ್ಲಿ ಈ ಘಟನೆ ನಡೆದಿದೆ. ಪಕ್ಷದ ಮುಖಂಡ ಬಿ.ಎಸ್.ಚೌಹಾಣ್ ಅವರ ಪುತ್ರನ ಮದುವೆಯಾಗಿದ್ದು, ಶುಭ ಕೋರುವುದಕ್ಕಾಗಿ ಅಬ್ದುಲ್ಲಾ ಹಾಗೂ ಡಿಸಿಎಂ ಚೌಧರಿ ಬಂದಿದ್ದರು. ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ, ಫಾರೂಕ್ ಅಬ್ದುಲ್ಲಾ ಹಾಗೂ ಡಿಸಿಎಂ ಚೌಧರಿ ಹೊರಬರುತ್ತಿದ್ದರು.</p>.<p>‘ಮದುವೆ ಮಂಟಪದ ಹೊರಭಾಗದಲ್ಲಿ ಆರೋಪಿಯು ಕಾಯುತ್ತಿದ್ದ. ಅಬ್ದುಲ್ಲಾ ಹಾಗೂ ಚೌಧರಿ ಅವರು ಹೊರಗೆ ಬರುತ್ತಿದ್ದಂತೆಯೇ ಅವರ ಮೇಲೆ ಗುಂಡು ಹಾರಿಸಲು ಆರೋಪಿ ಯತ್ನಿಸಿದ್ದಾನೆ. ಆಗ, ಸ್ಥಳದಲ್ಲಿಯೇ ಇದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಆತನನ್ನು ತಕ್ಷಣವೇ ತಡೆದಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>‘ಪೊಲೀಸ್ ಅಧಿಕಾರಿಗಳಿಂದ ಕೊಸರಿಕೊಂಡು, ಗುಂಡು ಹಾರಿಸಲು ಆರೋಪಿ ಯತ್ನಿಸಿದ್ದಾನೆ. ಬಂದೂಕು ಕಿತ್ತುಕೊಂಡ ಪೊಲೀಸ್ ಅಧಿಕಾರಿಗಳು, ಆತನನ್ನು ವಶಕ್ಕೆ ಪಡೆದರು’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>