<p><strong>ಲಖನೌ: </strong>ಉತ್ತರ ಪ್ರದೇಶದ ಮಾಜಿ ಸಚಿವ ಹಾಗೂ ಸಮಾಜವಾದಿ ಪಕ್ಷದ ನಾಯಕ ಮದನ್ ಚೌಹಾಣ್ ಅವರ ಹತ್ಯೆಗೆ ಯತ್ನ ನಡೆದಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p><p>ಕಾರಿನಲ್ಲಿ ಬಂದ ಯುವಕರ ಗುಂಪು ಗುಂಡು ಹಾರಿಸಲು ಪ್ರಯತ್ನಿಸಿದೆ. ಆದರೆ ಅವರ ಬಂದೂಕಿನಿಂದ ಗುಂಡು ಹಾರದಿರುವುದರಿಂದ ಯತ್ನ ವಿಫಲವಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.</p><p>ಚೌಹಾಣ್ ಅವರು ಸಂಬಂಧಿಕರ ನಿಶ್ಚಿತಾರ್ಥ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳುತ್ತಿದ್ದಾಗ, ಸೋಮವಾರ ರಾತ್ರಿ ಗರ್ಮುಕ್ತೇಶ್ವರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.</p><p>ಈ ಕುರಿತು ಮಾಹಿತಿ ಹಂಚಿಕೊಂಡಿರುವ ಚೌಹಾಣ್, ಮುಖ್ಯ ರಸ್ತೆಯಿಂದ ಗ್ರಾಮದ ರಸ್ತೆಗೆ ಪ್ರವೇಶಿಸುತ್ತಿದ್ದಂತೆ, ಕಾರಿನಲ್ಲಿ ಬಂದ ಕೆಲವು ಯುವಕರು ತಮ್ಮ ವಾಹನವನ್ನು ಅಡ್ಡಹಾಕಿದರು. ಅದರಲ್ಲಿ ಓರ್ವ ಪಿಸ್ತೂಲ್ ತೆಗೆದು ಗುಂಡು ಹಾರಿಸಲು ಯತ್ನಿಸಿದನು. ಆದರೆ, ಗುಂಡು ಹಾರಲಿಲ್ಲ ಎಂದು ತಿಳಿಸಿದ್ದಾರೆ.</p><p>ಕೂಡಲೇ ಅವರ ಭದ್ರತಾ ಸಿಬ್ಬಂದಿ ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ, ಹಂತಕರ ಗುಂಪು ಸ್ಥಳದಿಂದ ಪರಾರಿಯಾಯಿತು ಎಂದು ತಿಳಿಸಿದ್ದಾರೆ.</p><p>ಚೌಹಾಣ್ ನೀಡಿದ ದೂರಿನ ಆಧಾರದ ಮೇಲೆ, ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಭಟ್ನಾಗರ್ ಹೇಳಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶದ ಮಾಜಿ ಸಚಿವ ಹಾಗೂ ಸಮಾಜವಾದಿ ಪಕ್ಷದ ನಾಯಕ ಮದನ್ ಚೌಹಾಣ್ ಅವರ ಹತ್ಯೆಗೆ ಯತ್ನ ನಡೆದಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p><p>ಕಾರಿನಲ್ಲಿ ಬಂದ ಯುವಕರ ಗುಂಪು ಗುಂಡು ಹಾರಿಸಲು ಪ್ರಯತ್ನಿಸಿದೆ. ಆದರೆ ಅವರ ಬಂದೂಕಿನಿಂದ ಗುಂಡು ಹಾರದಿರುವುದರಿಂದ ಯತ್ನ ವಿಫಲವಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.</p><p>ಚೌಹಾಣ್ ಅವರು ಸಂಬಂಧಿಕರ ನಿಶ್ಚಿತಾರ್ಥ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳುತ್ತಿದ್ದಾಗ, ಸೋಮವಾರ ರಾತ್ರಿ ಗರ್ಮುಕ್ತೇಶ್ವರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.</p><p>ಈ ಕುರಿತು ಮಾಹಿತಿ ಹಂಚಿಕೊಂಡಿರುವ ಚೌಹಾಣ್, ಮುಖ್ಯ ರಸ್ತೆಯಿಂದ ಗ್ರಾಮದ ರಸ್ತೆಗೆ ಪ್ರವೇಶಿಸುತ್ತಿದ್ದಂತೆ, ಕಾರಿನಲ್ಲಿ ಬಂದ ಕೆಲವು ಯುವಕರು ತಮ್ಮ ವಾಹನವನ್ನು ಅಡ್ಡಹಾಕಿದರು. ಅದರಲ್ಲಿ ಓರ್ವ ಪಿಸ್ತೂಲ್ ತೆಗೆದು ಗುಂಡು ಹಾರಿಸಲು ಯತ್ನಿಸಿದನು. ಆದರೆ, ಗುಂಡು ಹಾರಲಿಲ್ಲ ಎಂದು ತಿಳಿಸಿದ್ದಾರೆ.</p><p>ಕೂಡಲೇ ಅವರ ಭದ್ರತಾ ಸಿಬ್ಬಂದಿ ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ, ಹಂತಕರ ಗುಂಪು ಸ್ಥಳದಿಂದ ಪರಾರಿಯಾಯಿತು ಎಂದು ತಿಳಿಸಿದ್ದಾರೆ.</p><p>ಚೌಹಾಣ್ ನೀಡಿದ ದೂರಿನ ಆಧಾರದ ಮೇಲೆ, ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಭಟ್ನಾಗರ್ ಹೇಳಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>