<p>ಪಂಚರಾಜ್ಯ ಚುನಾವಣಾ ಫಲಿತಾಂಶ ಸೇರಿ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ</p>.<p><strong>ದಾವಣಗೆರೆ </strong>ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5,708 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ 21,866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಜಯ ಸಾಧಿಸಿದ್ದಾರೆ.</p>.ಬಾಗಲಕೋಟೆ: 21,866 ಮತಗಳಿಂದ ಉಮೇಶ ಮೇಟಿ ಜಯಭೇರಿ; ಸಿಎಂ ನಿರಾಳ .ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು.<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿನ ಕಡೆ ಮುಖ ಮಾಡಿದೆ. ಇದರ ನಡುವೆಯೇ ಜಿದ್ದಾಜಿದ್ದಿನಿಂದ ಕೂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ದೀದಿ ಕೂಡ ಹಿನ್ನಡೆ ಅನುಭವಿಸಿದ್ದಾರೆ.</p>.West Bengal: ಭವಾನಿಪುರದಲ್ಲಿ ಮಮತಾಗೆ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಸೋಲು.<p><strong>ಗುವಾಹಟಿ</strong>: ಚಹಾ ತೋಟಗಳ ನಾಡು ಎಂದೇ ಕರೆಸಿಕೊಳ್ಳುವ ಅಸ್ಸಾಂನಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದೆ. ಈ ಮೂಲಕ 10 ವರ್ಷಗಳ ಜಯದ ಬರ ನೀಗಿಸುವ ತವಕದಲ್ಲಿದ್ದ ಕಾಂಗ್ರೆಸ್ಗೆ ನಿರಾಸೆಯಾಗಿದೆ.</p>.Assam Result | ನೆಲಕಚ್ಚಿದ ಕಾಂಗ್ರೆಸ್, ಬಿಜೆಪಿಗೆ ಹ್ಯಾಟ್ರಿಕ್ ಗೆಲುವು.<p>ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಹೀನಾಯ ಸೋಲು ಅನುಭವಿಸಿದೆ. ಈ ಮೂಲಕ ಕಮ್ಯುನಿಸ್ಟ್ ಪಕ್ಷವು ಅಧಿಕಾರದಲ್ಲಿರುವ ಏಕೈಕ ರಾಜ್ಯವನ್ನೂ ಕಳೆದುಕೊಂಡಿದೆ.</p>.Assembly Election Results: ಏಕೈಕ ರಾಜ್ಯವನ್ನೂ ಕಳೆದುಕೊಂಡ ಸಿಪಿಎಂ.<p>ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೆರಿಯಲ್ಲಿ ಸತತ ಎರಡನೇ ಅವಧಿಗೆ ಎನ್ಡಿಎ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಆಗಿರುವ ಎನ್. ರಂಗಸಾಮಿ ಅವರು ತಟ್ಟಂಚವಾಡಿ ವಿಧಾನಸಭಾ ಕ್ಷೇತ್ರದಲ್ಲಿ 4,441 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಆ ಮೂಲಕ ಅವರು 5ನೇ ಬಾರಿ ಸಿಎಂ ಆಗಿ ಆಯ್ಕೆಯಾಗುವ ನಿರೀಕ್ಷೆಯಿದೆ.</p>.Puducherry Results| 5ನೇ ಬಾರಿಗೆ ಸಿಎಂ ಸ್ಥಾನಕ್ಕೆ ರಂಗಸಾಮಿ: ಏನಿವರ ಹಿನ್ನೆಲೆ?.<p><strong>ಚೆನ್ನೈ</strong>: ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಧಿಕಾರದ ಗದ್ದುಗೆಗೆ ಸನಿಹವಾಗಿದೆ. ಇದರೊಂದಿಗೆ, ಚುನಾವಣೆ ಪ್ರಚಾರ ಸಂದರ್ಭದಲ್ಲಿ ವಿಜಯ ಅವರು ನೀಡಿದ್ದ ಭರವಸೆಗಳು ಈಗ ಮತ್ತೆ ಚರ್ಚೆಗೆ ಕಾರಣವಾಗಿವೆ.</p>.8 ಗ್ರಾಂ ಚಿನ್ನ, 6 ಸಿಲಿಂಡರ್: ಟಿವಿಕೆ ಭರವಸೆಗಳತ್ತ ಜನರ ಚಿತ್ತ.<p><strong>ನವದೆಹಲಿ</strong>: ‘ಪಶ್ಚಿಮ ಬಂಗಾಳದ ಜನರು ಬಿಜೆಪಿಗೆ ಅದ್ಭುತವಾದ ಜನಾದೇಶವನ್ನು ನೀಡಿದ್ದು, ಅವರ ಕನಸು ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ನಮ್ಮ ಪಕ್ಷವು ಸಾಧ್ಯವಿರುವ ಎಲ್ಲವನ್ನೂ ಮಾಡಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.</p> .ಈ ಚುನಾವಣೆಯ ನೆನಪು ಶಾಶ್ವತವಾಗಿ ಉಳಿಯಲಿದೆ: ಪ್ರಧಾನಿ ನರೇಂದ್ರ ಮೋದಿ.<p><strong>ಬೆಂಗಳೂರು</strong>: ‘ಗ್ಯಾರಂಟಿ ಯೋಜನೆಗಳು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಿವೆ. ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶವಾಗಿದ್ದು, ಅಲ್ಲಿನ ಜನರ ನಾಡಿಮಿಡಿತ ಗ್ರಹಿಸಲು ಆಗಲಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಫಲಿತಾಂಶದ ಕುರಿತು ವಿಶ್ಲೇಷಿಸಿದರು.</p> .ಎರಡೂ ಕಡೆ ‘ಕೈ’ ಹಿಡಿದ ಗ್ಯಾರಂಟಿ: ಡಿ.ಕೆ. ಶಿವಕುಮಾರ್.<p>2026ರ ಐಪಿಎಲ್ ಟೂರ್ನಿಯಲ್ಲಿ ಆಟಗಾರರು ಗೆಳತಿಯರೊಂದಿಗೆ ಮೈದಾನದಲ್ಲಿ ಸಲುಗೆಯಿಂದ ಕಾಣಿಸಿಕೊಳ್ಳುತ್ತಿರುವುದು, ತಂಡದ ಬಸ್ಗಳನ್ನು ಗೆಳತಿಯರಿಗಾಗಿ ಕಾಯಿಸುವುದು ಕಂಡುಬಂದಿದ್ದು, ಆಟಗಾರರ ಈ ನಡೆಗೆ ಬಿಸಿಸಿಐ ಆಕ್ಷೇಪ ವ್ಯಕ್ತಪಡಿಸಿದೆ.</p> .IPL 2026: ಗೆಳತಿಯರೊಂದಿಗೆ ಸಲುಗೆ, ಸುತ್ತಾಟ; ಆಟಗಾರರ ನಡೆಗೆ ಬಿಸಿಸಿಐ ಆಕ್ಷೇಪ.<p><strong>ನವದೆಹಲಿ</strong>: ನಟ ದರ್ಶನ್ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.</p>.ಜೈಲಿನಲ್ಲಿ ದರ್ಶನ್ ಮೂಲಸೌಕರ್ಯ; ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಂಚರಾಜ್ಯ ಚುನಾವಣಾ ಫಲಿತಾಂಶ ಸೇರಿ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ</p>.<p><strong>ದಾವಣಗೆರೆ </strong>ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5,708 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ 21,866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಜಯ ಸಾಧಿಸಿದ್ದಾರೆ.</p>.ಬಾಗಲಕೋಟೆ: 21,866 ಮತಗಳಿಂದ ಉಮೇಶ ಮೇಟಿ ಜಯಭೇರಿ; ಸಿಎಂ ನಿರಾಳ .ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು.<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿನ ಕಡೆ ಮುಖ ಮಾಡಿದೆ. ಇದರ ನಡುವೆಯೇ ಜಿದ್ದಾಜಿದ್ದಿನಿಂದ ಕೂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ದೀದಿ ಕೂಡ ಹಿನ್ನಡೆ ಅನುಭವಿಸಿದ್ದಾರೆ.</p>.West Bengal: ಭವಾನಿಪುರದಲ್ಲಿ ಮಮತಾಗೆ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಸೋಲು.<p><strong>ಗುವಾಹಟಿ</strong>: ಚಹಾ ತೋಟಗಳ ನಾಡು ಎಂದೇ ಕರೆಸಿಕೊಳ್ಳುವ ಅಸ್ಸಾಂನಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದೆ. ಈ ಮೂಲಕ 10 ವರ್ಷಗಳ ಜಯದ ಬರ ನೀಗಿಸುವ ತವಕದಲ್ಲಿದ್ದ ಕಾಂಗ್ರೆಸ್ಗೆ ನಿರಾಸೆಯಾಗಿದೆ.</p>.Assam Result | ನೆಲಕಚ್ಚಿದ ಕಾಂಗ್ರೆಸ್, ಬಿಜೆಪಿಗೆ ಹ್ಯಾಟ್ರಿಕ್ ಗೆಲುವು.<p>ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಹೀನಾಯ ಸೋಲು ಅನುಭವಿಸಿದೆ. ಈ ಮೂಲಕ ಕಮ್ಯುನಿಸ್ಟ್ ಪಕ್ಷವು ಅಧಿಕಾರದಲ್ಲಿರುವ ಏಕೈಕ ರಾಜ್ಯವನ್ನೂ ಕಳೆದುಕೊಂಡಿದೆ.</p>.Assembly Election Results: ಏಕೈಕ ರಾಜ್ಯವನ್ನೂ ಕಳೆದುಕೊಂಡ ಸಿಪಿಎಂ.<p>ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೆರಿಯಲ್ಲಿ ಸತತ ಎರಡನೇ ಅವಧಿಗೆ ಎನ್ಡಿಎ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಆಗಿರುವ ಎನ್. ರಂಗಸಾಮಿ ಅವರು ತಟ್ಟಂಚವಾಡಿ ವಿಧಾನಸಭಾ ಕ್ಷೇತ್ರದಲ್ಲಿ 4,441 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಆ ಮೂಲಕ ಅವರು 5ನೇ ಬಾರಿ ಸಿಎಂ ಆಗಿ ಆಯ್ಕೆಯಾಗುವ ನಿರೀಕ್ಷೆಯಿದೆ.</p>.Puducherry Results| 5ನೇ ಬಾರಿಗೆ ಸಿಎಂ ಸ್ಥಾನಕ್ಕೆ ರಂಗಸಾಮಿ: ಏನಿವರ ಹಿನ್ನೆಲೆ?.<p><strong>ಚೆನ್ನೈ</strong>: ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಧಿಕಾರದ ಗದ್ದುಗೆಗೆ ಸನಿಹವಾಗಿದೆ. ಇದರೊಂದಿಗೆ, ಚುನಾವಣೆ ಪ್ರಚಾರ ಸಂದರ್ಭದಲ್ಲಿ ವಿಜಯ ಅವರು ನೀಡಿದ್ದ ಭರವಸೆಗಳು ಈಗ ಮತ್ತೆ ಚರ್ಚೆಗೆ ಕಾರಣವಾಗಿವೆ.</p>.8 ಗ್ರಾಂ ಚಿನ್ನ, 6 ಸಿಲಿಂಡರ್: ಟಿವಿಕೆ ಭರವಸೆಗಳತ್ತ ಜನರ ಚಿತ್ತ.<p><strong>ನವದೆಹಲಿ</strong>: ‘ಪಶ್ಚಿಮ ಬಂಗಾಳದ ಜನರು ಬಿಜೆಪಿಗೆ ಅದ್ಭುತವಾದ ಜನಾದೇಶವನ್ನು ನೀಡಿದ್ದು, ಅವರ ಕನಸು ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ನಮ್ಮ ಪಕ್ಷವು ಸಾಧ್ಯವಿರುವ ಎಲ್ಲವನ್ನೂ ಮಾಡಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.</p> .ಈ ಚುನಾವಣೆಯ ನೆನಪು ಶಾಶ್ವತವಾಗಿ ಉಳಿಯಲಿದೆ: ಪ್ರಧಾನಿ ನರೇಂದ್ರ ಮೋದಿ.<p><strong>ಬೆಂಗಳೂರು</strong>: ‘ಗ್ಯಾರಂಟಿ ಯೋಜನೆಗಳು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಿವೆ. ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶವಾಗಿದ್ದು, ಅಲ್ಲಿನ ಜನರ ನಾಡಿಮಿಡಿತ ಗ್ರಹಿಸಲು ಆಗಲಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಫಲಿತಾಂಶದ ಕುರಿತು ವಿಶ್ಲೇಷಿಸಿದರು.</p> .ಎರಡೂ ಕಡೆ ‘ಕೈ’ ಹಿಡಿದ ಗ್ಯಾರಂಟಿ: ಡಿ.ಕೆ. ಶಿವಕುಮಾರ್.<p>2026ರ ಐಪಿಎಲ್ ಟೂರ್ನಿಯಲ್ಲಿ ಆಟಗಾರರು ಗೆಳತಿಯರೊಂದಿಗೆ ಮೈದಾನದಲ್ಲಿ ಸಲುಗೆಯಿಂದ ಕಾಣಿಸಿಕೊಳ್ಳುತ್ತಿರುವುದು, ತಂಡದ ಬಸ್ಗಳನ್ನು ಗೆಳತಿಯರಿಗಾಗಿ ಕಾಯಿಸುವುದು ಕಂಡುಬಂದಿದ್ದು, ಆಟಗಾರರ ಈ ನಡೆಗೆ ಬಿಸಿಸಿಐ ಆಕ್ಷೇಪ ವ್ಯಕ್ತಪಡಿಸಿದೆ.</p> .IPL 2026: ಗೆಳತಿಯರೊಂದಿಗೆ ಸಲುಗೆ, ಸುತ್ತಾಟ; ಆಟಗಾರರ ನಡೆಗೆ ಬಿಸಿಸಿಐ ಆಕ್ಷೇಪ.<p><strong>ನವದೆಹಲಿ</strong>: ನಟ ದರ್ಶನ್ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.</p>.ಜೈಲಿನಲ್ಲಿ ದರ್ಶನ್ ಮೂಲಸೌಕರ್ಯ; ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>