ಸುಗಮ ಮತದಾನಕ್ಕಾಗಿ ಚುನಾವಣಾ ಆಯೋಗ ರಾಜ್ಯದಾದ್ಯಂತ 1.70 ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದೆ. ರಾಜ್ಯದಾದ್ಯಂತ ಸುಸೂತ್ರವಾಗಿ ಮತದಾನ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹಲೋತ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್, ವಿಧಾನಸಭಾ ಸ್ಪೀಕರ್ ಸಿ.ಪಿ ಜೋಶಿ, ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್, ರಾಜೇಂದ್ರ ಯಾದವ್, ಮಹೇಂದ್ರಜೀತ್ ಸಿಂಗ್ ಮಾಳವಿಯಾ ಸೇರಿದಂತೆ ಹಲವಾರು ಸಚಿವರು ಕಾಂಗ್ರೆಸ್ನಿಂದ ಕಣದಲ್ಲಿದ್ದಾರೆ.
ಬಿಜೆಪಿಯಿಂದ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ವಿರೋಧ ಪಕ್ಷದ ಉಪನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ದಿಯಾ ಕುಮಾರಿ ಸೇರಿದಂತೆ ಇತತರು ಕಣದಲ್ಲಿದ್ದಾರೆ.
ಡಿ.3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.