<p><strong>ಕೋಲ್ಕತ್ತಾ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರದ ರಾಷ್ಟ್ರೀಯ ನಗದೀಕರಣ ಯೋಜನೆಯನ್ನು (ಎನ್ಎಂಪಿ) ಖಂಡಿಸಿದ್ದು, ಇದು ದೇಶಕ್ಕೆ ಸೇರಿದ ಆಸ್ತಿಗಳನ್ನು ಮಾರಾಟ ಮಾಡುವ ಕುತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.</p>.<p>ಎನ್ಎಂಪಿಯನ್ನು 'ಆಘಾತಕಾರಿ' ಹಾಗೂ 'ದುರದೃಷ್ಟಕರ' ನೀತಿ ಎಂದು ಹೇಳಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ, ದೇಶದ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ಸಿಗುವ ಹಣವನ್ನು ಚುನಾವಣೆಗಳಲ್ಲಿ ಬಿಜೆಪಿಯು ವಿರೋಧ ಪಕ್ಷಗಳ ವಿರುದ್ಧ ಬಳಕೆ ಮಾಡಲಿದೆ ಎಂದು ಆರೋಪಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/shiv-sena-members-who-protested-outside-narayan-rane-mumbai-home-meet-cm-thackeray-860841.html" itemprop="url">ನಾರಾಯಣ ರಾಣೆ ಮನೆ ಮುಂದೆ ಪ್ರತಿಭಟನೆ ನಡೆಸಿದ ಸೇನಾ ಕಾರ್ಯಕರ್ತರಿಂದ ಉದ್ಧವ್ ಭೇಟಿ </a></p>.<p>'ಈ ನಿರ್ಧಾರವನ್ನು ನಾವು ಖಂಡಿಸುತ್ತೇವೆ. ಈ ಆಸ್ತಿಗಳು ದೇಶಕ್ಕೆ ಸೇರಿವೆ. ಇದು ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿಗೆ ಸೇರಿದ್ದಲ್ಲ. ಕೇಂದ್ರ ಸರ್ಕಾರ ತಮ್ಮಇಚ್ಛೆಯಂತೆ ದೇಶದ ಆಸ್ತಿಯನ್ನು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು' ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.</p>.<p>ಈ ಜನವಿರೋಧಿ ನೀತಿಯ ವಿರುದ್ಧ ಇಡೀ ದೇಶ ಒಗ್ಗಟ್ಟಾಗಿ ಹೋರಾಡಬೇಕು ಎಂದವರು ಪ್ರತಿಪಾದಿಸಿದರು.</p>.<p>'ಬಿಜೆಪಿಗೆ ನಾಚಿಕೆಯಾಗಬೇಕು. ರಾಷ್ಟ್ರದ ಆಸ್ತಿಯನ್ನು ಮಾರಾಟ ಮಾಡುವ ಹಕ್ಕನ್ನು ಅವರಿಗೆ ಯಾರೂ ನೀಡಿಲ್ಲ. ಇಡೀ ದೇಶವೇ ಇದರ ವಿರುದ್ಧ ಹೋರಾಡಲಿದೆ' ಎಂದು ಹೇಳಿದ್ದಾರೆ.</p>.<p>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರದಂದು ರಾಷ್ಟ್ರೀಯ ನಗದೀಕರಣ ಯೋಜನೆಗೆ (ಎನ್ಎಪಿ) ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತಾ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರದ ರಾಷ್ಟ್ರೀಯ ನಗದೀಕರಣ ಯೋಜನೆಯನ್ನು (ಎನ್ಎಂಪಿ) ಖಂಡಿಸಿದ್ದು, ಇದು ದೇಶಕ್ಕೆ ಸೇರಿದ ಆಸ್ತಿಗಳನ್ನು ಮಾರಾಟ ಮಾಡುವ ಕುತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.</p>.<p>ಎನ್ಎಂಪಿಯನ್ನು 'ಆಘಾತಕಾರಿ' ಹಾಗೂ 'ದುರದೃಷ್ಟಕರ' ನೀತಿ ಎಂದು ಹೇಳಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ, ದೇಶದ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ಸಿಗುವ ಹಣವನ್ನು ಚುನಾವಣೆಗಳಲ್ಲಿ ಬಿಜೆಪಿಯು ವಿರೋಧ ಪಕ್ಷಗಳ ವಿರುದ್ಧ ಬಳಕೆ ಮಾಡಲಿದೆ ಎಂದು ಆರೋಪಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/shiv-sena-members-who-protested-outside-narayan-rane-mumbai-home-meet-cm-thackeray-860841.html" itemprop="url">ನಾರಾಯಣ ರಾಣೆ ಮನೆ ಮುಂದೆ ಪ್ರತಿಭಟನೆ ನಡೆಸಿದ ಸೇನಾ ಕಾರ್ಯಕರ್ತರಿಂದ ಉದ್ಧವ್ ಭೇಟಿ </a></p>.<p>'ಈ ನಿರ್ಧಾರವನ್ನು ನಾವು ಖಂಡಿಸುತ್ತೇವೆ. ಈ ಆಸ್ತಿಗಳು ದೇಶಕ್ಕೆ ಸೇರಿವೆ. ಇದು ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿಗೆ ಸೇರಿದ್ದಲ್ಲ. ಕೇಂದ್ರ ಸರ್ಕಾರ ತಮ್ಮಇಚ್ಛೆಯಂತೆ ದೇಶದ ಆಸ್ತಿಯನ್ನು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು' ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.</p>.<p>ಈ ಜನವಿರೋಧಿ ನೀತಿಯ ವಿರುದ್ಧ ಇಡೀ ದೇಶ ಒಗ್ಗಟ್ಟಾಗಿ ಹೋರಾಡಬೇಕು ಎಂದವರು ಪ್ರತಿಪಾದಿಸಿದರು.</p>.<p>'ಬಿಜೆಪಿಗೆ ನಾಚಿಕೆಯಾಗಬೇಕು. ರಾಷ್ಟ್ರದ ಆಸ್ತಿಯನ್ನು ಮಾರಾಟ ಮಾಡುವ ಹಕ್ಕನ್ನು ಅವರಿಗೆ ಯಾರೂ ನೀಡಿಲ್ಲ. ಇಡೀ ದೇಶವೇ ಇದರ ವಿರುದ್ಧ ಹೋರಾಡಲಿದೆ' ಎಂದು ಹೇಳಿದ್ದಾರೆ.</p>.<p>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರದಂದು ರಾಷ್ಟ್ರೀಯ ನಗದೀಕರಣ ಯೋಜನೆಗೆ (ಎನ್ಎಪಿ) ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>