<p><strong>ಪಣಜಿ:</strong> ‘ಬಾಹ್ಯಾಕಾಶದಲ್ಲಿ ಇದ್ದಾಗ ವೈಯಕ್ತಿಕ ಗುರುತು ಮರೆಯಾಗಿ ಇಡೀ ಭೂಮಿಯೇ ನಮ್ಮ ಗುರುತಾಗುತ್ತದೆ’ ಎಂದು ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಶುಕ್ರವಾರ ಹೇಳಿದರು.</p>.<p>‘ಬಾಹ್ಯಾಕಾಶದಲ್ಲಿ ರಾಷ್ಟ್ರೀಯತೆ ಮುಖ್ಯವಾಗುವುದಿಲ್ಲ. ಬದಲಿಗೆ, ಮಾನವೀಯತೆಯೇ ಪ್ರಾಶಸ್ತ್ಯ ಪಡೆಯುತ್ತದೆ’ ಎಂದು ಹೇಳಿದರು.</p>.<p>ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ(ಐಎಸ್ಎಸ್) ಅನುಭವವನ್ನು ಹಂಚಿಕೊಂಡ ಅವರು, ‘ಅದು ಹೆಚ್ಚು ಆಕರ್ಷಕವಾಗಿತ್ತು. ಜನರು ಈ ಜಗತ್ತಿನಲ್ಲಿ ವಿಭಿನ್ನ ಗುರುತುಗಳನ್ನು ಹೊಂದಿರಬಹುದು. ಆದರೆ ಬಾಹ್ಯಾಕಾಶದಲ್ಲಿದ್ದಾಗ ಅದು ಮರೆಯಾಗುತ್ತವೆ’ ಎಂದು ಹೇಳಿದರು.</p>.<p class="title">ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ಗೆ ಸಂಯೋಜಿತವಾಗಿರುವ ಶಾಲೆಗಳ ವಿದ್ಯಾರ್ಥಿಗಳಿಗಾಗಿ ‘ಇಗ್ನೈಟಿಂಗ್ ಮೈಂಡ್ಸ್, ಎಕ್ಸ್ಪ್ಲೋರಿಂಗ್ ಫ್ರಾಂಟಿಯರ್ಸ್: ದಿ ಕನ್ವರ್ಜೆನ್ಸ್ ಆಫ್ ಸ್ಪೇಸ್, ಎಜುಕೇಶನ್ ಆ್ಯಂಡಡ ಇಂಡಸ್ಟ್ರಿ’ ಎಂಬ ಶೀರ್ಷಿಕೆಯ ಅಡಿ ಆಯೋಜಿಸಿದ್ದ ಉಪನ್ಯಾಸನದಲ್ಲಿ ಶುಕ್ಲಾ ಅವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ‘ಬಾಹ್ಯಾಕಾಶದಲ್ಲಿ ಇದ್ದಾಗ ವೈಯಕ್ತಿಕ ಗುರುತು ಮರೆಯಾಗಿ ಇಡೀ ಭೂಮಿಯೇ ನಮ್ಮ ಗುರುತಾಗುತ್ತದೆ’ ಎಂದು ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಶುಕ್ರವಾರ ಹೇಳಿದರು.</p>.<p>‘ಬಾಹ್ಯಾಕಾಶದಲ್ಲಿ ರಾಷ್ಟ್ರೀಯತೆ ಮುಖ್ಯವಾಗುವುದಿಲ್ಲ. ಬದಲಿಗೆ, ಮಾನವೀಯತೆಯೇ ಪ್ರಾಶಸ್ತ್ಯ ಪಡೆಯುತ್ತದೆ’ ಎಂದು ಹೇಳಿದರು.</p>.<p>ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ(ಐಎಸ್ಎಸ್) ಅನುಭವವನ್ನು ಹಂಚಿಕೊಂಡ ಅವರು, ‘ಅದು ಹೆಚ್ಚು ಆಕರ್ಷಕವಾಗಿತ್ತು. ಜನರು ಈ ಜಗತ್ತಿನಲ್ಲಿ ವಿಭಿನ್ನ ಗುರುತುಗಳನ್ನು ಹೊಂದಿರಬಹುದು. ಆದರೆ ಬಾಹ್ಯಾಕಾಶದಲ್ಲಿದ್ದಾಗ ಅದು ಮರೆಯಾಗುತ್ತವೆ’ ಎಂದು ಹೇಳಿದರು.</p>.<p class="title">ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ಗೆ ಸಂಯೋಜಿತವಾಗಿರುವ ಶಾಲೆಗಳ ವಿದ್ಯಾರ್ಥಿಗಳಿಗಾಗಿ ‘ಇಗ್ನೈಟಿಂಗ್ ಮೈಂಡ್ಸ್, ಎಕ್ಸ್ಪ್ಲೋರಿಂಗ್ ಫ್ರಾಂಟಿಯರ್ಸ್: ದಿ ಕನ್ವರ್ಜೆನ್ಸ್ ಆಫ್ ಸ್ಪೇಸ್, ಎಜುಕೇಶನ್ ಆ್ಯಂಡಡ ಇಂಡಸ್ಟ್ರಿ’ ಎಂಬ ಶೀರ್ಷಿಕೆಯ ಅಡಿ ಆಯೋಜಿಸಿದ್ದ ಉಪನ್ಯಾಸನದಲ್ಲಿ ಶುಕ್ಲಾ ಅವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>