ಗುವಾಹಟಿ: ಈಶಾನ್ಯ ರಾಜ್ಯಗಳಾದ ಅಸ್ಸಾಂ, ತ್ರಿಪುರಾ, ಮೇಘಾಲಯ ಮತ್ತು ಮಣಿಪುರ ರಾಜ್ಯಗಳಲ್ಲಿ ಮಳೆ ಮುಂದುವರೆದಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಇದುವರೆಗೂ ಈ ರಾಜ್ಯಗಳಲ್ಲಿ 48 ಜನರು ಮೃತಪಟ್ಟಿದ್ದಾರೆ.
ಈ ರಾಜ್ಯಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಜನರು ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ್ದಾರೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿಯೂ ಅವರು ಹೇಳಿದ್ದಾರೆ.
Assam | Incessant rains in the past few days trigger mayhem in various parts; the flood situation in Kampur deteriorates further; villagers struggle to commute (18.06) pic.twitter.com/E51DaMVRUV
ಅಸ್ಸಾಂ, ಮಣಿಪುರ ರಾಜ್ಯಗಳ 36 ಜಿಲ್ಲೆಗಳಲ್ಲಿ 21 ಲಕ್ಷ ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ಸಾಂನಲ್ಲಿ ಕಳೆದ ಎರಡು ದಿನಗಳಲ್ಲಿ 18 ಜನರು ಮೃತಪಟ್ಟಿದ್ದಾರೆ. ಮಣಿಪುರದಲ್ಲಿ 6 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಘಾಲಯದಲ್ಲಿ 7 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯ ಪರಿಣಾಮ ಕಳೆದ 3–4 ದಿನಗಳಲ್ಲಿ 18 ಜನರು ಮೃತಪಟ್ಟಿದ್ದಾರೆ.
ತ್ರಿಪುರಾದಲ್ಲೂ ಮಳೆಯ ಆರ್ಭಟ ಜೋರಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. 6 ಜನರು ಮೃತಪಟ್ಟಿದ್ದಾರೆ ಎಂದು ತ್ರಿಪುರಾಪೊಲೀಸರು ಹೇಳಿದ್ದಾರೆ.