<p><strong>ರಾಮೇಶ್ವರ:</strong> ತಮಿಳುನಾಡಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು (ಭಾನುವಾರ) ಚಾಲನೆ, ಶಂಕುಸ್ಥಾಪನೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಾತೃ ಭಾಷೆಗೂ ಆದ್ಯತೆ ನೀಡುವಂತೆ ಕರೆ ನೀಡಿದ್ದಾರೆ. </p><p>ರಾಮೇಶ್ವರಂನಲ್ಲಿ ಈ ಕುರಿತು ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಕನಿಷ್ಠ ಪಕ್ಷ ತಮಿಳಿನಲ್ಲಿ ಸಹಿ ಮಾಡಿ ಎಂದು ತಮಿಳುನಾಡಿನ ನಾಯಕರಿಗೆ ಕರೆ ನೀಡಿದ್ದಾರೆ. </p><p>ಯಾವುದೇ ನಾಯಕರನ್ನು ಉಲ್ಲೇಖಿಸದೇ ಈ ಕುರಿತು ಹೇಳಿರುವ ಪ್ರಧಾನಿ ಮೋದಿ, 'ನನಗೆ ತಮಿಳಿನಾಡಿನ ನಾಯಕರಿಂದ ಪತ್ರಗಳು ಬರುತ್ತಿವೆ. ಆದರೆ ಅಚ್ಚರಿಯ ವಿಷಯವೆಂದರೆ ಯಾರೂ ಕೂಡಾ ತಮಿಳಿನಲ್ಲಿ ಸಹಿ ಹಾಕುವುದಿಲ್ಲ. ಕನಿಷ್ಠ ಪಕ್ಷ ತಮಿಳಿನಲ್ಲಿ ಸಹಿ ಮಾಡಿ' ಎಂದು ಸಲಹೆ ಮಾಡಿದ್ದಾರೆ. </p><p>ಮಾತೃಭಾಷೆಗೆ ಆದ್ಯತೆ ನೀಡುವ ಕುರಿತು ಪ್ರಸ್ತಾಪಿಸಿರುವ ಪ್ರಧಾನಿ ಮೋದಿ, 'ಜಗತ್ತಿನ ಎಲ್ಲ ಕಡೆಗಳಿಗೂ ತಮಿಳು ಭಾಷೆಯನ್ನು ತಲುಪಿಸಲು ಪ್ರಯತ್ನಗಳು ನಡೆಯುತ್ತಿವೆ' ಎಂದು ಹೇಳಿದ್ದಾರೆ. </p><p>ಬಡವರಿಗೆ ತಮಿಳು ಭಾಷೆಯಲ್ಲೇ ವೈದ್ಯಕೀಯ ಶಿಕ್ಷಣ ನೀಡುವಂತೆಯೂ ಅವರು ಒತ್ತಾಯಿಸಿದ್ದಾರೆ. </p>.ತಮಿಳುನಾಡು | ₹8,300 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ.VIDEO: ರಾಮ ನವಮಿಯಂದು ರಾಮಸೇತು ದರ್ಶನ ಪಡೆದ ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮೇಶ್ವರ:</strong> ತಮಿಳುನಾಡಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು (ಭಾನುವಾರ) ಚಾಲನೆ, ಶಂಕುಸ್ಥಾಪನೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಾತೃ ಭಾಷೆಗೂ ಆದ್ಯತೆ ನೀಡುವಂತೆ ಕರೆ ನೀಡಿದ್ದಾರೆ. </p><p>ರಾಮೇಶ್ವರಂನಲ್ಲಿ ಈ ಕುರಿತು ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಕನಿಷ್ಠ ಪಕ್ಷ ತಮಿಳಿನಲ್ಲಿ ಸಹಿ ಮಾಡಿ ಎಂದು ತಮಿಳುನಾಡಿನ ನಾಯಕರಿಗೆ ಕರೆ ನೀಡಿದ್ದಾರೆ. </p><p>ಯಾವುದೇ ನಾಯಕರನ್ನು ಉಲ್ಲೇಖಿಸದೇ ಈ ಕುರಿತು ಹೇಳಿರುವ ಪ್ರಧಾನಿ ಮೋದಿ, 'ನನಗೆ ತಮಿಳಿನಾಡಿನ ನಾಯಕರಿಂದ ಪತ್ರಗಳು ಬರುತ್ತಿವೆ. ಆದರೆ ಅಚ್ಚರಿಯ ವಿಷಯವೆಂದರೆ ಯಾರೂ ಕೂಡಾ ತಮಿಳಿನಲ್ಲಿ ಸಹಿ ಹಾಕುವುದಿಲ್ಲ. ಕನಿಷ್ಠ ಪಕ್ಷ ತಮಿಳಿನಲ್ಲಿ ಸಹಿ ಮಾಡಿ' ಎಂದು ಸಲಹೆ ಮಾಡಿದ್ದಾರೆ. </p><p>ಮಾತೃಭಾಷೆಗೆ ಆದ್ಯತೆ ನೀಡುವ ಕುರಿತು ಪ್ರಸ್ತಾಪಿಸಿರುವ ಪ್ರಧಾನಿ ಮೋದಿ, 'ಜಗತ್ತಿನ ಎಲ್ಲ ಕಡೆಗಳಿಗೂ ತಮಿಳು ಭಾಷೆಯನ್ನು ತಲುಪಿಸಲು ಪ್ರಯತ್ನಗಳು ನಡೆಯುತ್ತಿವೆ' ಎಂದು ಹೇಳಿದ್ದಾರೆ. </p><p>ಬಡವರಿಗೆ ತಮಿಳು ಭಾಷೆಯಲ್ಲೇ ವೈದ್ಯಕೀಯ ಶಿಕ್ಷಣ ನೀಡುವಂತೆಯೂ ಅವರು ಒತ್ತಾಯಿಸಿದ್ದಾರೆ. </p>.ತಮಿಳುನಾಡು | ₹8,300 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ.VIDEO: ರಾಮ ನವಮಿಯಂದು ರಾಮಸೇತು ದರ್ಶನ ಪಡೆದ ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>