ಭಾರತ್ ಜೋಡೊ ಯಾತ್ರೆಯ ಅಂಗವಾಗಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ‘45 ವರ್ಷಗಳಲ್ಲಿ ನಿರುದ್ಯೋಗದ ಪ್ರಮಾಣವು ಎಂದಿಗೂ ಹೆಚ್ಚಾಗಿರಲಿಲ್ಲ. ವಿದ್ಯಾವಂತ ಯುವಜನರು, ಎಂಜಿನಿಯರಿಂಗ್, ವೈದ್ಯಕೀಯ ಪದವೀಧರರು ಕೂಡಾ ನಿರುದ್ಯೋಗಿಗಳಾಗಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈ ಬಗ್ಗೆ ಚಿಂತೆಯೇ ಇಲ್ಲ. ಅವರಿಗೆ ಆರ್ಥಿಕ ಸ್ಥಿತಿ, ಹಣದುಬ್ಬರ, ನಿರುದ್ಯೋಗ ಮುಖ್ಯವಲ್ಲ. ಅವರಿಗೆ ಚುನಾವಣೆಯಷ್ಟೇ ಮುಖ್ಯ’ ಎಂದು ಟೀಕಿಸಿದರು.