ಅಟಲ್ ಜನ್ಮದಿನವನ್ನು ದೇಶದಲ್ಲಿ 'ಉತ್ತಮ ಆಡಳಿತ ದಿನ'ವಾಗಿ ಆಚರಿಸಲಾಗುತ್ತದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು, ರಾಷ್ಟ್ರ ರಾಜಧಾನಿಯಲ್ಲಿರುವ ಅಟಲ್ ಸಮಾಧಿ ಸ್ಥಳ 'ಸದೈವ ಅಟಲ್'ಗೆ ತೆರಳಿಇಂದು ನಮನ ಸಲ್ಲಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್ ಮತ್ತು ಇನ್ನಿತರ ನಾಯಕರೂ ಭಾಗಿಯಾದರು.