<p><strong>ನವದೆಹಲಿ</strong>: ನಗರ ಪ್ರದೇಶದ ಬಡವರು, ಕಾರ್ಮಿಕರು ಸೇರಿದಂತೆ ಸೌಲಭ್ಯವಂಚಿತ ನಿವಾಸಿಗಳಿಗೆ ಕೈಗೆಟುಕುವ ದರದಲ್ಲಿ ಪೌಷ್ಟಿಕ ಆಹಾರ ಪೂರೈಸುವ ಯೋಜನೆಯ ಭಾಗವಾಗಿ ದೆಹಲಿ ಸರ್ಕಾರವು ಗುರುವಾರ ರಾಷ್ಟ್ರ ರಾಜಧಾನಿಯಾದ್ಯಂತ 25 ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸಿದೆ. </p><p>ಕೃಷ್ಣ ನಗರದಲ್ಲಿ ‘ಅಟಲ್ ಕ್ಯಾಂಟೀನ್’ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ರೇಖಾ ಗುಪ್ತಾ, ‘ದೆಹಲಿಯ ಯಾವುದೇ ವ್ಯಕ್ತಿ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ‘ಅಟಲ್ ಕ್ಯಾಂಟೀನ್’ ಯೋಜನೆ ಜಾರಿಗೆ ತರಲಾಗಿದೆ. ಈ ಕ್ಯಾಂಟೀನ್ಗಳಲ್ಲಿ ನಿತ್ಯ ₹5ಕ್ಕೆ ಪೌಷ್ಟಿಕ ಆಹಾರ ದೊರೆಯಲಿದೆ’ ಎಂದು ಹೇಳಿದ್ದಾರೆ. </p><p>ಈ ಯೋಜನೆಯನ್ನು ಕಡಿಮೆ ಅವಧಿಯಲ್ಲಿ ಅನುಷ್ಠಾನಗೊಳಿಸಿದ್ದಕ್ಕಾಗಿ ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿಯ (ಡಿಯುಎಸ್ಐಬಿ) ಅಧಿಕಾರಿಗಳನ್ನು ರೇಖಾ ಗುಪ್ತಾ ಅವರು ಶ್ಲಾಘಿಸಿದರು. ಈ ಯೋಜನೆಯು ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆದರ್ಶಗಳಿಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ. </p><p>ಒಟ್ಟು 100 ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸುವ ಯೋಜನೆಯನ್ನು ಸರ್ಕಾರ ಹೊಂದಿದೆ. ಪ್ರತಿ ಕ್ಯಾಂಟೀನ್ನಲ್ಲಿ ದಿನಕ್ಕೆ 1,000 ಊಟ ಸಿಗಲಿದ್ದು, ನಗರದಾದ್ಯಂತ ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ ಎಂದೂ ಅವರು ವಿವರಿಸಿದ್ದಾರೆ. </p><p>2025ರ ಡಿಸೆಂಬರ್ 25ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಯಿತು. ಈ ಯೋಜನೆಯ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಸರ್ಕಾರ ₹104 ಕೋಟಿ ನಿಗದಿಪಡಿಸಿದೆ.</p><p>ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ, ದೆಹಲಿ ನಗರಾಭಿವೃದ್ಧಿ ಸಚಿವ ಆಶಿಶ್ ಸೂದ್, ಬಿಜೆಪಿ ಶಾಸಕ ಅನಿಲ್ ಗೋಯಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಗರ ಪ್ರದೇಶದ ಬಡವರು, ಕಾರ್ಮಿಕರು ಸೇರಿದಂತೆ ಸೌಲಭ್ಯವಂಚಿತ ನಿವಾಸಿಗಳಿಗೆ ಕೈಗೆಟುಕುವ ದರದಲ್ಲಿ ಪೌಷ್ಟಿಕ ಆಹಾರ ಪೂರೈಸುವ ಯೋಜನೆಯ ಭಾಗವಾಗಿ ದೆಹಲಿ ಸರ್ಕಾರವು ಗುರುವಾರ ರಾಷ್ಟ್ರ ರಾಜಧಾನಿಯಾದ್ಯಂತ 25 ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸಿದೆ. </p><p>ಕೃಷ್ಣ ನಗರದಲ್ಲಿ ‘ಅಟಲ್ ಕ್ಯಾಂಟೀನ್’ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ರೇಖಾ ಗುಪ್ತಾ, ‘ದೆಹಲಿಯ ಯಾವುದೇ ವ್ಯಕ್ತಿ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ‘ಅಟಲ್ ಕ್ಯಾಂಟೀನ್’ ಯೋಜನೆ ಜಾರಿಗೆ ತರಲಾಗಿದೆ. ಈ ಕ್ಯಾಂಟೀನ್ಗಳಲ್ಲಿ ನಿತ್ಯ ₹5ಕ್ಕೆ ಪೌಷ್ಟಿಕ ಆಹಾರ ದೊರೆಯಲಿದೆ’ ಎಂದು ಹೇಳಿದ್ದಾರೆ. </p><p>ಈ ಯೋಜನೆಯನ್ನು ಕಡಿಮೆ ಅವಧಿಯಲ್ಲಿ ಅನುಷ್ಠಾನಗೊಳಿಸಿದ್ದಕ್ಕಾಗಿ ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿಯ (ಡಿಯುಎಸ್ಐಬಿ) ಅಧಿಕಾರಿಗಳನ್ನು ರೇಖಾ ಗುಪ್ತಾ ಅವರು ಶ್ಲಾಘಿಸಿದರು. ಈ ಯೋಜನೆಯು ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆದರ್ಶಗಳಿಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ. </p><p>ಒಟ್ಟು 100 ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸುವ ಯೋಜನೆಯನ್ನು ಸರ್ಕಾರ ಹೊಂದಿದೆ. ಪ್ರತಿ ಕ್ಯಾಂಟೀನ್ನಲ್ಲಿ ದಿನಕ್ಕೆ 1,000 ಊಟ ಸಿಗಲಿದ್ದು, ನಗರದಾದ್ಯಂತ ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ ಎಂದೂ ಅವರು ವಿವರಿಸಿದ್ದಾರೆ. </p><p>2025ರ ಡಿಸೆಂಬರ್ 25ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಯಿತು. ಈ ಯೋಜನೆಯ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಸರ್ಕಾರ ₹104 ಕೋಟಿ ನಿಗದಿಪಡಿಸಿದೆ.</p><p>ಕೇಂದ್ರ ಸಚಿವ ಹರ್ಷ ಮಲ್ಹೋತ್ರಾ, ದೆಹಲಿ ನಗರಾಭಿವೃದ್ಧಿ ಸಚಿವ ಆಶಿಶ್ ಸೂದ್, ಬಿಜೆಪಿ ಶಾಸಕ ಅನಿಲ್ ಗೋಯಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>