<p><strong>ನವದೆಹಲಿ</strong>: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 101ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ದೆಹಲಿ ಸರ್ಕಾರ ಗುರುವಾರ 45 ‘ಅಟಲ್ ಕ್ಯಾಂಟೀನ್’ಗಳಿಗೆ ಚಾಲನೆ ನೀಡಿದೆ. ಈ ಕ್ಯಾಂಟೀನ್ಗಳಲ್ಲಿ ನಿತ್ಯ ₹5ಕ್ಕೆ ಪೌಷ್ಟಿಕ ಆಹಾರ ದೊರೆಯಲಿದೆ ಎಂದು ಸರ್ಕಾರ ಹೇಳಿದೆ. </p>.<p>ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಕೇಂದ್ರ ಇಂಧನ ಮತ್ತು ವಸತಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರು ನೆಹರೂ ನಗರದ ‘ಅಪ್ನಾ ಬಜಾರ್’ ಬಳಿ ‘ಅಟಲ್ ಕ್ಯಾಂಟೀನ್’ಗೆ ಚಾಲನೆ ನೀಡಿದರು. ಇದೇ ವೇಳೆ ವರ್ಚುವಲ್ ಆಗಿ 44 ಕ್ಯಾಂಟೀನ್ಗಳನ್ನು ಉದ್ಘಾಟಿಸಲಾಯಿತು.</p>.<p>‘ಒಟ್ಟು 100 ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸುವ ಯೋಜನೆಯನ್ನು ಸರ್ಕಾರ ಹೊಂದಿದೆ. ಅದರ ಭಾಗವಾಗಿ ಇಂದು 45 ಕ್ಯಾಂಟೀನ್ಗಳಿಗೆ ಗುರುವಾರ ಚಾಲನೆ ನೀಡಲಾಗಿದೆ. ಉಳಿದ 55 ಕ್ಯಾಂಟೀನ್ಗಳು ಮುಂದಿನ 15ರಿಂದ 20 ದಿನಗಳಲ್ಲಿ ಆರಂಭವಾಗಲಿವೆ’ ಎಂದು ರೇಖಾ ಗುಪ್ತಾ ಅವರು ಮಾಹಿತಿ ನೀಡಿದರು.</p>.<p>‘ಪ್ರತಿ ಕ್ಯಾಂಟೀನ್ಗೆ ನಿತ್ಯ ಸುಮಾರು 1,000 ಊಟಗಳನ್ನು ವಿತರಿಸಲಾಗುವುದು. ಈ ಯೋಜನೆಯಿಂದ ನಿತ್ಯ 1 ಲಕ್ಷ ಜನರಿಗೆ ಅನುಕೂಲವಾಗಲಿದೆ. ರಾಜಧಾನಿಯಲ್ಲಿ ಕೂಲಿ ಕೆಲಸಗಾರರು, ಕಾರ್ಮಿಕರು, ಬಡವರಿಗೆ ಪೌಷ್ಟಿಕ ಆಹಾರ ದೊರೆಯಲಿ ಎಂಬುದು ಯೋಜನೆಯ ಉದ್ದೇಶ. ಈ ಯೋಜನೆಗಾಗಿ ಸರ್ಕಾರ ₹104.24 ಕೋಟಿ ಮಂಜೂರು ಮಾಡಿದೆ’ ಎಂದು ಅವರು ವಿವರಿಸಿದರು. </p>.<p>‘ನಿತ್ಯ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ರಾತ್ರಿ 6.30ರಿಂದ 9 ಗಂಟೆಯವರೆಗೆ ಊಟ ವಿತರಿಸಲಾಗುವುದು. ಒಂದು ಊಟಕ್ಕೆ ₹5 ನಿಗದಿಪಡಿಸಲಾಗಿದೆ. ಸರ್ಕಾರ ಪ್ರತಿ ಊಟಕ್ಕೆ ತಲಾ ₹25 ವ್ಯಯಿಸಲಿದೆ’ ಎಂದು ಅವರು ತಿಳಿಸಿದರು. </p>.<p>ಊಟವು ರೋಟಿ, ಅನ್ನ, ದಾಲ್ ಮತ್ತು ತರಕಾರಿ ಪಲ್ಯವನ್ನು ಒಳಗೊಂಡಿರುತ್ತದೆ. ಪ್ರತಿ ಕ್ಯಾಂಟೀನ್ಗಳು ಆಧುನಿಕ ಶೈಲಿಯ ಅಡುಗೆ ಮನೆ ಹೊಂದಿರುತ್ತವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 101ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ದೆಹಲಿ ಸರ್ಕಾರ ಗುರುವಾರ 45 ‘ಅಟಲ್ ಕ್ಯಾಂಟೀನ್’ಗಳಿಗೆ ಚಾಲನೆ ನೀಡಿದೆ. ಈ ಕ್ಯಾಂಟೀನ್ಗಳಲ್ಲಿ ನಿತ್ಯ ₹5ಕ್ಕೆ ಪೌಷ್ಟಿಕ ಆಹಾರ ದೊರೆಯಲಿದೆ ಎಂದು ಸರ್ಕಾರ ಹೇಳಿದೆ. </p>.<p>ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಕೇಂದ್ರ ಇಂಧನ ಮತ್ತು ವಸತಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರು ನೆಹರೂ ನಗರದ ‘ಅಪ್ನಾ ಬಜಾರ್’ ಬಳಿ ‘ಅಟಲ್ ಕ್ಯಾಂಟೀನ್’ಗೆ ಚಾಲನೆ ನೀಡಿದರು. ಇದೇ ವೇಳೆ ವರ್ಚುವಲ್ ಆಗಿ 44 ಕ್ಯಾಂಟೀನ್ಗಳನ್ನು ಉದ್ಘಾಟಿಸಲಾಯಿತು.</p>.<p>‘ಒಟ್ಟು 100 ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸುವ ಯೋಜನೆಯನ್ನು ಸರ್ಕಾರ ಹೊಂದಿದೆ. ಅದರ ಭಾಗವಾಗಿ ಇಂದು 45 ಕ್ಯಾಂಟೀನ್ಗಳಿಗೆ ಗುರುವಾರ ಚಾಲನೆ ನೀಡಲಾಗಿದೆ. ಉಳಿದ 55 ಕ್ಯಾಂಟೀನ್ಗಳು ಮುಂದಿನ 15ರಿಂದ 20 ದಿನಗಳಲ್ಲಿ ಆರಂಭವಾಗಲಿವೆ’ ಎಂದು ರೇಖಾ ಗುಪ್ತಾ ಅವರು ಮಾಹಿತಿ ನೀಡಿದರು.</p>.<p>‘ಪ್ರತಿ ಕ್ಯಾಂಟೀನ್ಗೆ ನಿತ್ಯ ಸುಮಾರು 1,000 ಊಟಗಳನ್ನು ವಿತರಿಸಲಾಗುವುದು. ಈ ಯೋಜನೆಯಿಂದ ನಿತ್ಯ 1 ಲಕ್ಷ ಜನರಿಗೆ ಅನುಕೂಲವಾಗಲಿದೆ. ರಾಜಧಾನಿಯಲ್ಲಿ ಕೂಲಿ ಕೆಲಸಗಾರರು, ಕಾರ್ಮಿಕರು, ಬಡವರಿಗೆ ಪೌಷ್ಟಿಕ ಆಹಾರ ದೊರೆಯಲಿ ಎಂಬುದು ಯೋಜನೆಯ ಉದ್ದೇಶ. ಈ ಯೋಜನೆಗಾಗಿ ಸರ್ಕಾರ ₹104.24 ಕೋಟಿ ಮಂಜೂರು ಮಾಡಿದೆ’ ಎಂದು ಅವರು ವಿವರಿಸಿದರು. </p>.<p>‘ನಿತ್ಯ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ರಾತ್ರಿ 6.30ರಿಂದ 9 ಗಂಟೆಯವರೆಗೆ ಊಟ ವಿತರಿಸಲಾಗುವುದು. ಒಂದು ಊಟಕ್ಕೆ ₹5 ನಿಗದಿಪಡಿಸಲಾಗಿದೆ. ಸರ್ಕಾರ ಪ್ರತಿ ಊಟಕ್ಕೆ ತಲಾ ₹25 ವ್ಯಯಿಸಲಿದೆ’ ಎಂದು ಅವರು ತಿಳಿಸಿದರು. </p>.<p>ಊಟವು ರೋಟಿ, ಅನ್ನ, ದಾಲ್ ಮತ್ತು ತರಕಾರಿ ಪಲ್ಯವನ್ನು ಒಳಗೊಂಡಿರುತ್ತದೆ. ಪ್ರತಿ ಕ್ಯಾಂಟೀನ್ಗಳು ಆಧುನಿಕ ಶೈಲಿಯ ಅಡುಗೆ ಮನೆ ಹೊಂದಿರುತ್ತವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>