ಮಧ್ಯಾಹ್ನ 1.30ರ ಸುಮಾರಿಗೆ ಕಾಲ್ವಿನ್ ಆಸ್ಪತ್ರೆಯ ಹೊರ ಭಾಗದಲ್ಲಿರುವ ಸ್ಥಳಕ್ಕೆ ಭೇಟಿ ನೀಡಿದ್ದ ತನಿಖಾ ತಂಡದ ಸದಸ್ಯರು ಹತ್ಯೆಯ ವೇಳೆ ಅತೀಕ್ ಹಾಗೂ ಅಶ್ರಫ್ ಅವರ ಜೊತೆ ಇದ್ದ ಪೊಲೀಸ್ ಸಿಬ್ಬಂದಿಯನ್ನೂ ಸ್ಥಳಕ್ಕೆ ಕರೆಸಿಕೊಂಡಿದ್ದರು. ಅಪರಾಧ ದೃಶ್ಯದ ಮರುಸೃಷ್ಟಿ ವೇಳೆ ಘಟನಾ ಸ್ಥಳದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಈ ವೇಳೆ ಎಡಿಜಿ ಭಾನು ಭಾಸ್ಕರ್, ಪೊಲೀಸ್ ಕಮಿಷನರ್ ರಮಿತ್ ಶರ್ಮಾ ಮತ್ತು ಜಂಟಿ ಕಮಿಷನರ್ ಆಕಾಶ್ ಕುಲ್ಹಾರಿ ಅವರೂ ಸ್ಥಳದಲ್ಲಿ ಹಾಜರಿದ್ದರು.