<p><strong>ನವದೆಹಲಿ:</strong> ದೆಹಲಿಯ ಮಾಜಿ ಮುಖ್ಯಮಂತ್ರಿ, ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಸ್ಪರ್ಧಿಸುತ್ತಿರುವ ನವದೆಹಲಿಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂದು ದೆಹಲಿಯ ಮುಖ್ಯಮಂತ್ರಿ ಅತಿಶಿ ಇಂದು (ಬುಧವಾರ) ಆರೋಪಿಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಅತಿಶಿ, 'ವಿಂಡ್ಸನ್ ಪ್ಲೇಸ್ನಲ್ಲಿರುವ ಬಿಜೆಪಿಯ ಮಾಜಿ ಸಂಸದ ಪರ್ವೇಶ್ ವರ್ಮಾ ಅವರ ನಿವಾಸದಲ್ಲಿ ಸ್ಲಂ ಕ್ಲಸ್ಟರ್ಗಳ ಮಹಿಳೆಯರಿಗೆ ತಲಾ ₹1,110 ಹಂಚಿಕೆ ಮಾಡಲಾಗಿದೆ' ಎಂದು ಹೇಳಿದ್ದಾರೆ. </p><p>ಕೋಟ್ಯಂತರ ರೂಪಾಯಿಗಳನ್ನು ಇರಿಸಲಾಗಿರುವ ಬಂಗಲೆಯ ಮೇಲೆ ದಾಳಿ ನಡೆಸುವಂತೆಯೂ ಅತಿಶಿ, ದೆಹಲಿ ಪೊಲೀಸ್, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ವಿನಂತಿಸಿದ್ದಾರೆ. </p><p>ವರ್ಮಾ ಅವರನ್ನು ಬಂಧಿಸುವಂತೆ ಒತ್ತಾಯಿಸಿರುವ ಅವರು, ಚುನಾವಣಾ ಆಯೋಗಕ್ಕೆ ಎಎಪಿ ಔಪಚಾರಿಕ ದೂರನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ. </p><p>'ನನ್ನ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಲಾಗಿದೆ' ಎಂದು ಅರವಿಂದ ಕೇಜ್ರಿವಾಲ್ ಸಹ ಆರೋಪಿಸಿದ್ದಾರೆ. </p><p>ಆದರೆ ಎಎಪಿ ಮಾಡಿರುವ ಆರೋಪಗಳನ್ನು ನಿರಾಕರಿಸಿರುವ ವರ್ಮಾ, 'ನನ್ನ ತಂದೆ, ದೆಹಲಿಯ ಮಾಜಿ ಮುಖ್ಯಮಂತ್ರಿ ಸಾಹೀಬ್ ಸಿಂಗ್ ವರ್ವಾ ಅವರು ಸ್ಥಾಪಿಸಿದ್ದ ಎನ್ಜಿಒ 'ರಾಷ್ಟ್ರೀಯ ಸ್ವಾಭಿಮಾನ್' ಅಭಿಯಾನದ ಭಾಗವಾಗಿ ಹಣ ನೀಡಲಾಗಿದೆ' ಎಂದು ಹೇಳಿದ್ದಾರೆ. </p><p>'11 ವರ್ಷಗಳಿಂದ ಮಹಿಳೆಯರು ತೊಂದರೆಗೀಡಾಗಿದ್ದಾರೆ. ಆದರೆ ಅವರ ಬಗ್ಗೆ ಕೇಜ್ರಿವಾಲ್ ಚಿಂತಿತರಾಗಿಲ್ಲ. ಹಾಗಾಗಿ ಮಹಿಳೆಯರಿಗೆ ತಿಂಗಳಿಗೆ ₹1,110 ನೀಡಲು ನಿರ್ಧರಿಸಿದ್ದೇನೆ. ಕೇಜ್ರಿವಾಲ್ ಅವರಂತೆ ಮದ್ಯವನ್ನು ವಿತರಿಸಿಲ್ಲ. ನನ್ನ ಕ್ಷೇತ್ರದ ಮಹಿಳೆಯರಿಗೆ ಸಹಾಯ ಮಾಡುವುದರಲ್ಲಿ ನನಗೆ ಸಂತಸವಿದೆ' ಎಂದು ಹೇಳಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. </p>.ಶೀಘ್ರದಲ್ಲೇ ದೆಹಲಿ ಸಿಎಂ ಅತಿಶಿ ಬಂಧನ ಸಾಧ್ಯತೆ: ಅರವಿಂದ ಕೇಜ್ರಿವಾಲ್.ದೆಹಲಿ ವಿಧಾನಸಭಾ ಚುನಾವಣೆ: ಕೇಜ್ರಿವಾಲ್ ನವದೆಹಲಿ, ಅತಿಶಿ ಕಲ್ಕಾಜಿಯಿಂದ ಸ್ಪರ್ಧೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಮಾಜಿ ಮುಖ್ಯಮಂತ್ರಿ, ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಸ್ಪರ್ಧಿಸುತ್ತಿರುವ ನವದೆಹಲಿಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಹಿಳೆಯರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂದು ದೆಹಲಿಯ ಮುಖ್ಯಮಂತ್ರಿ ಅತಿಶಿ ಇಂದು (ಬುಧವಾರ) ಆರೋಪಿಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಅತಿಶಿ, 'ವಿಂಡ್ಸನ್ ಪ್ಲೇಸ್ನಲ್ಲಿರುವ ಬಿಜೆಪಿಯ ಮಾಜಿ ಸಂಸದ ಪರ್ವೇಶ್ ವರ್ಮಾ ಅವರ ನಿವಾಸದಲ್ಲಿ ಸ್ಲಂ ಕ್ಲಸ್ಟರ್ಗಳ ಮಹಿಳೆಯರಿಗೆ ತಲಾ ₹1,110 ಹಂಚಿಕೆ ಮಾಡಲಾಗಿದೆ' ಎಂದು ಹೇಳಿದ್ದಾರೆ. </p><p>ಕೋಟ್ಯಂತರ ರೂಪಾಯಿಗಳನ್ನು ಇರಿಸಲಾಗಿರುವ ಬಂಗಲೆಯ ಮೇಲೆ ದಾಳಿ ನಡೆಸುವಂತೆಯೂ ಅತಿಶಿ, ದೆಹಲಿ ಪೊಲೀಸ್, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ವಿನಂತಿಸಿದ್ದಾರೆ. </p><p>ವರ್ಮಾ ಅವರನ್ನು ಬಂಧಿಸುವಂತೆ ಒತ್ತಾಯಿಸಿರುವ ಅವರು, ಚುನಾವಣಾ ಆಯೋಗಕ್ಕೆ ಎಎಪಿ ಔಪಚಾರಿಕ ದೂರನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ. </p><p>'ನನ್ನ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚಲಾಗಿದೆ' ಎಂದು ಅರವಿಂದ ಕೇಜ್ರಿವಾಲ್ ಸಹ ಆರೋಪಿಸಿದ್ದಾರೆ. </p><p>ಆದರೆ ಎಎಪಿ ಮಾಡಿರುವ ಆರೋಪಗಳನ್ನು ನಿರಾಕರಿಸಿರುವ ವರ್ಮಾ, 'ನನ್ನ ತಂದೆ, ದೆಹಲಿಯ ಮಾಜಿ ಮುಖ್ಯಮಂತ್ರಿ ಸಾಹೀಬ್ ಸಿಂಗ್ ವರ್ವಾ ಅವರು ಸ್ಥಾಪಿಸಿದ್ದ ಎನ್ಜಿಒ 'ರಾಷ್ಟ್ರೀಯ ಸ್ವಾಭಿಮಾನ್' ಅಭಿಯಾನದ ಭಾಗವಾಗಿ ಹಣ ನೀಡಲಾಗಿದೆ' ಎಂದು ಹೇಳಿದ್ದಾರೆ. </p><p>'11 ವರ್ಷಗಳಿಂದ ಮಹಿಳೆಯರು ತೊಂದರೆಗೀಡಾಗಿದ್ದಾರೆ. ಆದರೆ ಅವರ ಬಗ್ಗೆ ಕೇಜ್ರಿವಾಲ್ ಚಿಂತಿತರಾಗಿಲ್ಲ. ಹಾಗಾಗಿ ಮಹಿಳೆಯರಿಗೆ ತಿಂಗಳಿಗೆ ₹1,110 ನೀಡಲು ನಿರ್ಧರಿಸಿದ್ದೇನೆ. ಕೇಜ್ರಿವಾಲ್ ಅವರಂತೆ ಮದ್ಯವನ್ನು ವಿತರಿಸಿಲ್ಲ. ನನ್ನ ಕ್ಷೇತ್ರದ ಮಹಿಳೆಯರಿಗೆ ಸಹಾಯ ಮಾಡುವುದರಲ್ಲಿ ನನಗೆ ಸಂತಸವಿದೆ' ಎಂದು ಹೇಳಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಮುಂದಿನ ವರ್ಷ ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. </p>.ಶೀಘ್ರದಲ್ಲೇ ದೆಹಲಿ ಸಿಎಂ ಅತಿಶಿ ಬಂಧನ ಸಾಧ್ಯತೆ: ಅರವಿಂದ ಕೇಜ್ರಿವಾಲ್.ದೆಹಲಿ ವಿಧಾನಸಭಾ ಚುನಾವಣೆ: ಕೇಜ್ರಿವಾಲ್ ನವದೆಹಲಿ, ಅತಿಶಿ ಕಲ್ಕಾಜಿಯಿಂದ ಸ್ಪರ್ಧೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>