<p><strong>ನವದೆಹಲಿ</strong>: ವಿಧಾನಸಭೆಯ ವಿಡಿಯೊ ತುಣುಕಿನ ಆಧಾರದ ಮೇಲೆ ದೆಹಲಿ ಕಾನೂನು ಸಚಿವ ಕಪಿಲ್ ಮಿಶ್ರಾ ವಿರುದ್ಧ ದಾಖಲಿಸಿರುವ ಎಫ್ಐಆರ್ ಸಂಬಂಧ ದೆಹಲಿ ವಿಧಾನಸಭೆಯ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಪಂಜಾಬ್ ಪೊಲೀಸರಿಗೆ ನೋಟಿಸ್ ನೀಡಿದ್ದಾರೆ. ಈ ಕುರಿತು ಉತ್ತರಿಸಲು ಅಧಿಕಾರಿಗಳು 10 ದಿನ ಕಾಲಾವಕಾಶ ಕೋರಿದ್ದಾರೆ.</p><p>ಕಪಿಲ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಿದ ಪಂಜಾಬ್ ಪೊಲೀಸ್ ಇಲಾಖೆಯ ಮೂವರು ಹಿರಿಯ ಅಧಿಕಾರಿಗಳಿಗೆ ದೆಹಲಿ ವಿಧಾನಸಭೆಯ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಜ.10ರಂದು ನೋಟಿಸ್ ನೀಡಿದ್ದರು.</p><p>ದೆಹಲಿ ವಿಧಾನಸಭೆಯ ಹಕ್ಕುಚ್ಯುತಿ ಮಾಡಿರುವ ಆರೋಪದ ಮೇರೆಗೆ ಪಂಜಾಬ್ನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ವಿಶೇಷ ಡಿಜಿಪಿ (ಸೈಬರ್ ಅಪರಾಧ) ಮತ್ತು ಜಲಂದರ್ ಪೊಲೀಸ್ ಕಮಿಷನರ್ ಅವರಿಗೆ ನೋಟಿಸ್ ನೀಡಲಾಗಿದ್ದು, 48 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ ಎಂದು ಗುಪ್ತಾ ಹೇಳಿದ್ದರು.</p><p>‘ದೆಹಲಿ ವಿಧಾನಸಭೆಯಲ್ಲಿನ ವಿಡಿಯೊ ತುಣುಕನ್ನು ಆಧರಿಸಿ ಪಂಜಾಬ್ ಪೊಲೀಸರು ಎಫ್ಐಆರ್ ದಾಖಲಿಸಿರುವುದು ದುರದೃಷ್ಟಕರ’ ಎಂದ ಅವರು, ‘ಪೊಲೀಸರ ಈ ಕ್ರಮವು ಸದನದ ಗೌರವಕ್ಕೆ ಚ್ಯುತಿ ತಂದಿದೆ. ನೋಟಿಸ್ಗೆ ಪ್ರತಿಕ್ರಿಯೆ ಬಂದ ಬಳಿಕ ಆ ಅಧಿಕಾರಿಗಳ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಬಹುದು ಎಂಬುದನ್ನು ನಿರ್ಧರಿಸಲಾಗುವುದು’ ಎಂದಿದ್ದರು.</p>.<h2>ಏನಿದು ಘಟನೆ?</h2><p>ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕಿ ಅತಿಶಿ ಅವರು ವಿಧಾನಸಭೆಯಲ್ಲಿ ಗುರುತೇಜ್ ಬಹದ್ದೂರ್ ಅವರನ್ನು ಅವಮಾನಿಸಿದ್ದಾರೆ ಎಂದು ಸಚಿವ ಕಪಿಲ್ ಮಿಶ್ರಾ ಮತ್ತು ಕೆಲ ಬಿಜೆಪಿ ಶಾಸಕರು ಆರೋಪಿಸಿದ್ದಾರೆ. </p><p>ಅತಿಶಿ ಅವರು ಹೇಳಿದ್ದನ್ನು ತಿರುಚಿರುವ ವಿಡಿಯೊವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿರುವ ಜಲಂಧರ್ ಪೊಲೀಸ್ ಕಮಿಷನರೇಟ್, ಮಿಶ್ರಾ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಿದೆ. </p><p>ಪಂಜಾಬ್ನ ಎಎಪಿ ಆಡಳಿತವು ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಸ್ಪೀಕರ್ ದೂರಿದ್ದಾರೆ. ಸಿಖ್ ಗುರುವನ್ನು ಅಮಾನಿಸಿರುವ ಅತಿಶಿ ಅವರ ವಿಧಾನಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿಧಾನಸಭೆಯ ವಿಡಿಯೊ ತುಣುಕಿನ ಆಧಾರದ ಮೇಲೆ ದೆಹಲಿ ಕಾನೂನು ಸಚಿವ ಕಪಿಲ್ ಮಿಶ್ರಾ ವಿರುದ್ಧ ದಾಖಲಿಸಿರುವ ಎಫ್ಐಆರ್ ಸಂಬಂಧ ದೆಹಲಿ ವಿಧಾನಸಭೆಯ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಪಂಜಾಬ್ ಪೊಲೀಸರಿಗೆ ನೋಟಿಸ್ ನೀಡಿದ್ದಾರೆ. ಈ ಕುರಿತು ಉತ್ತರಿಸಲು ಅಧಿಕಾರಿಗಳು 10 ದಿನ ಕಾಲಾವಕಾಶ ಕೋರಿದ್ದಾರೆ.</p><p>ಕಪಿಲ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಿದ ಪಂಜಾಬ್ ಪೊಲೀಸ್ ಇಲಾಖೆಯ ಮೂವರು ಹಿರಿಯ ಅಧಿಕಾರಿಗಳಿಗೆ ದೆಹಲಿ ವಿಧಾನಸಭೆಯ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಜ.10ರಂದು ನೋಟಿಸ್ ನೀಡಿದ್ದರು.</p><p>ದೆಹಲಿ ವಿಧಾನಸಭೆಯ ಹಕ್ಕುಚ್ಯುತಿ ಮಾಡಿರುವ ಆರೋಪದ ಮೇರೆಗೆ ಪಂಜಾಬ್ನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ವಿಶೇಷ ಡಿಜಿಪಿ (ಸೈಬರ್ ಅಪರಾಧ) ಮತ್ತು ಜಲಂದರ್ ಪೊಲೀಸ್ ಕಮಿಷನರ್ ಅವರಿಗೆ ನೋಟಿಸ್ ನೀಡಲಾಗಿದ್ದು, 48 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ ಎಂದು ಗುಪ್ತಾ ಹೇಳಿದ್ದರು.</p><p>‘ದೆಹಲಿ ವಿಧಾನಸಭೆಯಲ್ಲಿನ ವಿಡಿಯೊ ತುಣುಕನ್ನು ಆಧರಿಸಿ ಪಂಜಾಬ್ ಪೊಲೀಸರು ಎಫ್ಐಆರ್ ದಾಖಲಿಸಿರುವುದು ದುರದೃಷ್ಟಕರ’ ಎಂದ ಅವರು, ‘ಪೊಲೀಸರ ಈ ಕ್ರಮವು ಸದನದ ಗೌರವಕ್ಕೆ ಚ್ಯುತಿ ತಂದಿದೆ. ನೋಟಿಸ್ಗೆ ಪ್ರತಿಕ್ರಿಯೆ ಬಂದ ಬಳಿಕ ಆ ಅಧಿಕಾರಿಗಳ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಬಹುದು ಎಂಬುದನ್ನು ನಿರ್ಧರಿಸಲಾಗುವುದು’ ಎಂದಿದ್ದರು.</p>.<h2>ಏನಿದು ಘಟನೆ?</h2><p>ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕಿ ಅತಿಶಿ ಅವರು ವಿಧಾನಸಭೆಯಲ್ಲಿ ಗುರುತೇಜ್ ಬಹದ್ದೂರ್ ಅವರನ್ನು ಅವಮಾನಿಸಿದ್ದಾರೆ ಎಂದು ಸಚಿವ ಕಪಿಲ್ ಮಿಶ್ರಾ ಮತ್ತು ಕೆಲ ಬಿಜೆಪಿ ಶಾಸಕರು ಆರೋಪಿಸಿದ್ದಾರೆ. </p><p>ಅತಿಶಿ ಅವರು ಹೇಳಿದ್ದನ್ನು ತಿರುಚಿರುವ ವಿಡಿಯೊವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿರುವ ಜಲಂಧರ್ ಪೊಲೀಸ್ ಕಮಿಷನರೇಟ್, ಮಿಶ್ರಾ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಿದೆ. </p><p>ಪಂಜಾಬ್ನ ಎಎಪಿ ಆಡಳಿತವು ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಸ್ಪೀಕರ್ ದೂರಿದ್ದಾರೆ. ಸಿಖ್ ಗುರುವನ್ನು ಅಮಾನಿಸಿರುವ ಅತಿಶಿ ಅವರ ವಿಧಾನಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>