<p><strong>ಛತ್ರಪತಿ ಸಾಂಭಾಜಿನಗರ:</strong> ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿನ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದ ಕಳ್ಳರು, ಅದನ್ನು ಎಳೆದೊಯ್ಯಲು ಎಸ್ಯುವಿ ಬಳಸಿದ ಪ್ರಕರಣ ವರದಿಯಾಗಿದೆ. ಆದರೆ ಕಳ್ಳರ ಯತ್ನ ಕೈಗೂಡಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.</p><p>ಪ್ರಕರಣ ಸಂಬಂಧಿತ ಅಪರಿಚಿತ ಕಳ್ಳರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಘಟನೆಯು ಸೋಮವಾರ ನಸುಕಿನ 3ರಿಂದ 4ರ ಒಳಗೆ ನಡೆದಿದೆ. ಭಾರತೀಯ ಸ್ಟೇಟ್ ಬ್ಯಾಂಕ್ನ ಶಹನೂರ್ವಾಡಿ ಶಾಖೆಯಲ್ಲಿರುವ ಎಟಿಎಂ ಕದ್ದೊಯ್ಯಲು ಕಳ್ಳರ ತಂಡ ಯತ್ನಿಸಿದೆ.</p><p>ನಾಲ್ಕು ಜನರಿದ್ದ ಈ ಕಳ್ಳರ ತಂಡವು ಎಸ್ಯುವಿ ವಾಹನ ಬಳಸಿದೆ. ಎಟಿಎಂಗೆ ಹಳದಿ ಬಣ್ಣದ ಬೆಲ್ಟ್ ಕಟ್ಟಿದ್ದರು. ನಂತರ ಎಸ್ಯವಿಯಿಂದ ಯಂತ್ರವನ್ನು ಹೊರಗೆಳಯುವ ಯತ್ನ ನಡೆಸಿದರು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.</p><p>‘ಮೊದಲು ಎಟಿಎಂ ಒಳಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಳ್ಳರು ನಾಶಪಡಿಸಿದ್ದಾರೆ. ಎಟಿಎಂ ಯಂತ್ರ ತೆರೆದು ಹಣ ದೋಚುವ ಯತ್ನವನ್ನೂ ನಡೆಸಿದ್ದಾರೆ. ಆದರೆ ಹಣವನ್ನು ಪಡೆಯಲು ಅವರಿಂದ ಸಾಧ್ಯವಾಗಿಲ್ಲ’ ಎಂದು ವಿವರಿಸಿದ್ದಾರೆ.</p><p>‘ಬ್ಯಾಂಕ್ನ ಶಾಖಾ ವ್ಯವಸ್ಥಾಪಕರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಕಳ್ಳತನ, ಕಿಡಿಗೇಡಿತನ, ಅಪರಾಧ ಕೃತ್ಯದಲ್ಲಿ ಸಾಮಾನ್ಯ ಉದ್ದೇಶ ಹೊಂದಿರುವ ಪ್ರಕರಣ ದಾಖಲಾಗಿದೆ’ ಎಂದು ಜವಾಹರನಗರ ಪೊಲೀಸರು ಸೋಮವಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛತ್ರಪತಿ ಸಾಂಭಾಜಿನಗರ:</strong> ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿನ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದ ಕಳ್ಳರು, ಅದನ್ನು ಎಳೆದೊಯ್ಯಲು ಎಸ್ಯುವಿ ಬಳಸಿದ ಪ್ರಕರಣ ವರದಿಯಾಗಿದೆ. ಆದರೆ ಕಳ್ಳರ ಯತ್ನ ಕೈಗೂಡಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.</p><p>ಪ್ರಕರಣ ಸಂಬಂಧಿತ ಅಪರಿಚಿತ ಕಳ್ಳರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಘಟನೆಯು ಸೋಮವಾರ ನಸುಕಿನ 3ರಿಂದ 4ರ ಒಳಗೆ ನಡೆದಿದೆ. ಭಾರತೀಯ ಸ್ಟೇಟ್ ಬ್ಯಾಂಕ್ನ ಶಹನೂರ್ವಾಡಿ ಶಾಖೆಯಲ್ಲಿರುವ ಎಟಿಎಂ ಕದ್ದೊಯ್ಯಲು ಕಳ್ಳರ ತಂಡ ಯತ್ನಿಸಿದೆ.</p><p>ನಾಲ್ಕು ಜನರಿದ್ದ ಈ ಕಳ್ಳರ ತಂಡವು ಎಸ್ಯುವಿ ವಾಹನ ಬಳಸಿದೆ. ಎಟಿಎಂಗೆ ಹಳದಿ ಬಣ್ಣದ ಬೆಲ್ಟ್ ಕಟ್ಟಿದ್ದರು. ನಂತರ ಎಸ್ಯವಿಯಿಂದ ಯಂತ್ರವನ್ನು ಹೊರಗೆಳಯುವ ಯತ್ನ ನಡೆಸಿದರು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.</p><p>‘ಮೊದಲು ಎಟಿಎಂ ಒಳಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಳ್ಳರು ನಾಶಪಡಿಸಿದ್ದಾರೆ. ಎಟಿಎಂ ಯಂತ್ರ ತೆರೆದು ಹಣ ದೋಚುವ ಯತ್ನವನ್ನೂ ನಡೆಸಿದ್ದಾರೆ. ಆದರೆ ಹಣವನ್ನು ಪಡೆಯಲು ಅವರಿಂದ ಸಾಧ್ಯವಾಗಿಲ್ಲ’ ಎಂದು ವಿವರಿಸಿದ್ದಾರೆ.</p><p>‘ಬ್ಯಾಂಕ್ನ ಶಾಖಾ ವ್ಯವಸ್ಥಾಪಕರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಕಳ್ಳತನ, ಕಿಡಿಗೇಡಿತನ, ಅಪರಾಧ ಕೃತ್ಯದಲ್ಲಿ ಸಾಮಾನ್ಯ ಉದ್ದೇಶ ಹೊಂದಿರುವ ಪ್ರಕರಣ ದಾಖಲಾಗಿದೆ’ ಎಂದು ಜವಾಹರನಗರ ಪೊಲೀಸರು ಸೋಮವಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>