‘ಭಾರತ ತನ್ನ ಜಾತ್ಯತೀತ ಸಿದ್ಧಾಂತಕ್ಕೆ ಬದ್ಧವಾಗಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಬಹುಸಂಸ್ಕೃತಿಯ ಸಮಾಜವಾಗಿ, ದೀರ್ಘ ಕಾಲದಿಂದ ‘ಸಹಿಷ್ಣುತೆ’ ಮತ್ತು ಎಲ್ಲರನ್ನೂ ಒಳಗೊಳ್ಳುವ ರಾಷ್ಟ್ರವಾಗಿರುವ ಬಗ್ಗೆ ಭಾರತಕ್ಕೆ ಆ ಬಗ್ಗೆ ಹೆಮ್ಮೆ ಇದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.