<p><strong>ನವದೆಹಲಿ</strong>: ಕಳೆದ ಮೂರು ವರ್ಷಗಳಲ್ಲಿ ಮಾತುಕತೆ ಮೂಲಕ ಪೂರ್ವ ಲಡಾಕ್ನ ವಾಸ್ತವ ನಿಯಂತ್ರಣ ರೇಖೆಯ ಉದ್ದಕ್ಕೂ ಐದು-ಆರು ಕಡೆ ಘರ್ಷಣಾ ಸ್ಥಳಗಳಲ್ಲಿ ಭಾರತ ಮತ್ತು ಚೀನಾ ಪ್ರಗತಿ ಸಾಧಿಸಿವೆ ಹಾಗೂ ಉಳಿದ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ನಡೆಯುತ್ತಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೋಮವಾರ ಹೇಳಿದ್ದಾರೆ.</p>.<p>ದೀರ್ಘಕಾಲದ ಗಡಿ ವಿವಾದದ ಕುರಿತು ಸರ್ಕಾರದ ಬಗ್ಗೆ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ ಅವರು, ಪರಿಹಾರ ಕಂಡುಹಿಡಿಯಲು ಎರಡೂ ಕಡೆಯವರು ನಿರತರಾಗಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>‘ಏನನ್ನೂ ಮಾಡಲು ಸಾಧ್ಯವಾಗುವುದಿಲ್ಲ, ಮಾತುಕತೆ ಫಲಪ್ರದವಾಗುವುದಿಲ್ಲ, ಪ್ರಗತಿ ಇರುವುದಿಲ್ಲ ಎಂದು ಹೇಳಲಾಗಿತ್ತು. ಆದರೆ, ಕಳೆದ ಮೂರು ವರ್ಷಗಳಲ್ಲಿ ಕೆಲ ಪ್ರದೇಶಗಳಲ್ಲಿ ಪರಿಹಾರಗಳನ್ನು ಕಂಡುಹಿಡಿಯಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>ಗಡಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಸರ್ಕಾರ ಆದ್ಯತೆ ನೀಡಿದೆ. ಸೇನೆಯನ್ನು ತ್ವರಿತವಾಗಿ ನಿಯೋಜಿಸಲು ಮತ್ತು ಚೀನಾದ ಮಿಲಿಟರಿ ಕಾರ್ಯಾಚರಣೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಸಾಮರ್ಥ್ಯವನ್ನು ಸಶಸ್ತ್ರ ಪಡೆಗಳು ಹೊಂದಿವೆ ಎಂದರು. </p>.<p>ಮೂಲಸೌಕರ್ಯಗಳ ತ್ವರಿತ ಹೆಚ್ಚಳಕ್ಕೆ ಸರ್ಕಾರ ಗಮನ ಹರಿಸಿರುವುದರಿಂದ ಕಳೆದ ಕೆಲ ವರ್ಷಗಳಲ್ಲಿ ಗಡಿ ಪ್ರದೇಶಗಳಲ್ಲಿ ಸಶಸ್ತ್ರ ಪಡೆಗಳು ಮತ್ತು ನಾಗರಿಕರ ಚಲನವಲನ ಹೆಚ್ಚಾಗಿದೆ ಎಂದು ಜೈಶಂಕರ್ ಹೇಳಿದ್ದಾರೆ.</p>.<p>ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸುವವರೆಗೆ ಉಭಯ ದೇಶಗಳ ನಡುವಿನ ಬಾಂಧವ್ಯ ವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಭಾರತ ಚೀನಾಕ್ಕೆ ಸ್ಪಷ್ಟಪಡಿಸಿದೆ.</p>.<p>ಭೂತಾನ್ ಮತ್ತು ಅಸ್ಸಾಂ ನಡುವೆ ರೈಲು ಸಂಪರ್ಕಕ್ಕಾಗಿ ಭಾರತ ಮಾತುಕತೆ ನಡೆಸುತ್ತಿದೆ ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಳೆದ ಮೂರು ವರ್ಷಗಳಲ್ಲಿ ಮಾತುಕತೆ ಮೂಲಕ ಪೂರ್ವ ಲಡಾಕ್ನ ವಾಸ್ತವ ನಿಯಂತ್ರಣ ರೇಖೆಯ ಉದ್ದಕ್ಕೂ ಐದು-ಆರು ಕಡೆ ಘರ್ಷಣಾ ಸ್ಥಳಗಳಲ್ಲಿ ಭಾರತ ಮತ್ತು ಚೀನಾ ಪ್ರಗತಿ ಸಾಧಿಸಿವೆ ಹಾಗೂ ಉಳಿದ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ನಡೆಯುತ್ತಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೋಮವಾರ ಹೇಳಿದ್ದಾರೆ.</p>.<p>ದೀರ್ಘಕಾಲದ ಗಡಿ ವಿವಾದದ ಕುರಿತು ಸರ್ಕಾರದ ಬಗ್ಗೆ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ ಅವರು, ಪರಿಹಾರ ಕಂಡುಹಿಡಿಯಲು ಎರಡೂ ಕಡೆಯವರು ನಿರತರಾಗಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>‘ಏನನ್ನೂ ಮಾಡಲು ಸಾಧ್ಯವಾಗುವುದಿಲ್ಲ, ಮಾತುಕತೆ ಫಲಪ್ರದವಾಗುವುದಿಲ್ಲ, ಪ್ರಗತಿ ಇರುವುದಿಲ್ಲ ಎಂದು ಹೇಳಲಾಗಿತ್ತು. ಆದರೆ, ಕಳೆದ ಮೂರು ವರ್ಷಗಳಲ್ಲಿ ಕೆಲ ಪ್ರದೇಶಗಳಲ್ಲಿ ಪರಿಹಾರಗಳನ್ನು ಕಂಡುಹಿಡಿಯಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>ಗಡಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಸರ್ಕಾರ ಆದ್ಯತೆ ನೀಡಿದೆ. ಸೇನೆಯನ್ನು ತ್ವರಿತವಾಗಿ ನಿಯೋಜಿಸಲು ಮತ್ತು ಚೀನಾದ ಮಿಲಿಟರಿ ಕಾರ್ಯಾಚರಣೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಸಾಮರ್ಥ್ಯವನ್ನು ಸಶಸ್ತ್ರ ಪಡೆಗಳು ಹೊಂದಿವೆ ಎಂದರು. </p>.<p>ಮೂಲಸೌಕರ್ಯಗಳ ತ್ವರಿತ ಹೆಚ್ಚಳಕ್ಕೆ ಸರ್ಕಾರ ಗಮನ ಹರಿಸಿರುವುದರಿಂದ ಕಳೆದ ಕೆಲ ವರ್ಷಗಳಲ್ಲಿ ಗಡಿ ಪ್ರದೇಶಗಳಲ್ಲಿ ಸಶಸ್ತ್ರ ಪಡೆಗಳು ಮತ್ತು ನಾಗರಿಕರ ಚಲನವಲನ ಹೆಚ್ಚಾಗಿದೆ ಎಂದು ಜೈಶಂಕರ್ ಹೇಳಿದ್ದಾರೆ.</p>.<p>ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸುವವರೆಗೆ ಉಭಯ ದೇಶಗಳ ನಡುವಿನ ಬಾಂಧವ್ಯ ವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಭಾರತ ಚೀನಾಕ್ಕೆ ಸ್ಪಷ್ಟಪಡಿಸಿದೆ.</p>.<p>ಭೂತಾನ್ ಮತ್ತು ಅಸ್ಸಾಂ ನಡುವೆ ರೈಲು ಸಂಪರ್ಕಕ್ಕಾಗಿ ಭಾರತ ಮಾತುಕತೆ ನಡೆಸುತ್ತಿದೆ ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>