ಕಲಾಕೃತಿಗಳು, ವಾಸ್ತುಶಿಲ್ಪಗಳು, ಶಾಲು, ಜಾಕೆಟ್, ದೇಶದ ವಿವಿಧ ಭಾಗಗಳಲ್ಲಿ ಬಳಕೆಯಲ್ಲಿರುವ ಸಾಂಪ್ರದಾಯಿಕ ಸಂಗೀತ ಉಪಕರಣಗಳು ಸೇರಿದಂತೆ ಹಲವು ಉಡುಗೊರೆಗಳನ್ನು ಹರಾಜು ಹಾಕಲಾಗುತ್ತಿದೆ. ಹರಾಜಿನಿಂದ ಬಂದ ಹಣವನ್ನು ಗಂಗಾ ನದಿ ಸ್ವಚ್ಛಗೊಳಿಸುವ ಕೇಂದ್ರ ಸರ್ಕಾರದ ನಮಾಮಿ ಗಂಗೆಯೋಜನೆಗೆ ಬಳಸಿಕೊಳ್ಳಲಾಗುತ್ತದೆ. ಇ–ಹರಾಜಿನಲ್ಲಿ ವಿದೇಶದಿಂದಲೂ ಜನರು ಬಿಡ್ ಮಾಡಬಹುದು.