<p><strong>ಉದಯಪುರ:</strong> ‘ಮೊಘಲ್ ದೊರೆ ಔರಂಗಜೇಬ್ ಒಬ್ಬ ಸಮರ್ಥ ಆಡಳಿತಗಾರ’ ಎಂದು ಹೊಗಳಿದ ಮೋಹನಲಾಲ್ ಸುಖಾಡಿಯಾ ವಿಶ್ವವಿದ್ಯಾಲಯದ ಕುಲಪತಿ ಸುನಿತಾ ಮಿಶ್ರಾ ಅವರ ವಿರುದ್ಧ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಬೆನ್ನಲ್ಲೇ, ಬಹಿರಂಗವಾಗಿ ಅವರು ಕ್ಷಮೆ ಯಾಚಿಸಿದ್ದಾರೆ.</p><p>ಕುಲಪತಿ ಮಿಶ್ರಾ ಅವರ ಹೇಳಿಕೆಗೆ ಮೇವಾಡ ಪ್ರಾಂತ್ಯದಲ್ಲಿ ವ್ಯಾಪಕ ಟೀಕೆ ಹಾಗೂ ಆಕ್ರೋಶ ವ್ಯಕ್ತವಾಗಿತ್ತು. ವಿವಿಧ ಸಮುದಾಯಗಳು ಕುಲಪತಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು.</p><p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ (ABVP) ಸದಸ್ಯರು ಉದಯಪುರದಲ್ಲಿರುವ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿ, ಕ್ಷಮೆಗೆ ಪಟ್ಟು ಹಿಡಿದಿದ್ದರು.</p><p>ವ್ಯಾಪಕ ಪ್ರತಿಭಟನೆಗೆ ಮಣಿದ ಕುಲಪತಿ ಸುನಿತಾ ಮಿಶ್ರಾ, ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ. ‘ತಪ್ಪಾಗಿ ಆ ಹೇಳಿಕೆ ನೀಡಿದ್ದೇನೆ. ಇದಕ್ಕಾಗಿ ನೊಂದ ಸಮುದಾಯದ ಕ್ಷಮೆಯಾಚಿಸುತ್ತೇನೆ’ ಎಂದಿದ್ದಾರೆ.</p><p>‘ಇದೇ ತಿಂಗಳ 12ರಂದು ನಾನು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆ. ‘ವಿಕಸಿತ ಭಾರತ 2047’ ಎಂಬ ಕಾರ್ಯಕ್ರಮದಲ್ಲಿ ತಪ್ಪಾಗಿ ಹೇಳಿಕೆಯೊಂದನ್ನು ನೀಡಿದ್ದೆ. ಅದಕ್ಕಾಗಿ ನಾನು ರಾಷ್ಟ್ರೀಯ ರಜಪುತ್ ಕರ್ಣಿ ಸೇನಾ ಹಾಗೂ ಮೇವಾಡದ ಜನರ ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.</p><p>‘ನನ್ನ ಹೇಳಿಕೆಯ ಪರಿಣಾಮ ಯಾವುದೇ ಉದ್ದೇಶವಿಲ್ಲದೆ ಹಲವರ ಮನಸ್ಸಿಗೆ ನೋವಾಗಿದೆ. ಅದಕ್ಕಾಗಿ ನಾನು ರಜಪೂತ್ ಸಮುದಾಯದ ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉದಯಪುರ:</strong> ‘ಮೊಘಲ್ ದೊರೆ ಔರಂಗಜೇಬ್ ಒಬ್ಬ ಸಮರ್ಥ ಆಡಳಿತಗಾರ’ ಎಂದು ಹೊಗಳಿದ ಮೋಹನಲಾಲ್ ಸುಖಾಡಿಯಾ ವಿಶ್ವವಿದ್ಯಾಲಯದ ಕುಲಪತಿ ಸುನಿತಾ ಮಿಶ್ರಾ ಅವರ ವಿರುದ್ಧ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಬೆನ್ನಲ್ಲೇ, ಬಹಿರಂಗವಾಗಿ ಅವರು ಕ್ಷಮೆ ಯಾಚಿಸಿದ್ದಾರೆ.</p><p>ಕುಲಪತಿ ಮಿಶ್ರಾ ಅವರ ಹೇಳಿಕೆಗೆ ಮೇವಾಡ ಪ್ರಾಂತ್ಯದಲ್ಲಿ ವ್ಯಾಪಕ ಟೀಕೆ ಹಾಗೂ ಆಕ್ರೋಶ ವ್ಯಕ್ತವಾಗಿತ್ತು. ವಿವಿಧ ಸಮುದಾಯಗಳು ಕುಲಪತಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು.</p><p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ (ABVP) ಸದಸ್ಯರು ಉದಯಪುರದಲ್ಲಿರುವ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿ, ಕ್ಷಮೆಗೆ ಪಟ್ಟು ಹಿಡಿದಿದ್ದರು.</p><p>ವ್ಯಾಪಕ ಪ್ರತಿಭಟನೆಗೆ ಮಣಿದ ಕುಲಪತಿ ಸುನಿತಾ ಮಿಶ್ರಾ, ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ. ‘ತಪ್ಪಾಗಿ ಆ ಹೇಳಿಕೆ ನೀಡಿದ್ದೇನೆ. ಇದಕ್ಕಾಗಿ ನೊಂದ ಸಮುದಾಯದ ಕ್ಷಮೆಯಾಚಿಸುತ್ತೇನೆ’ ಎಂದಿದ್ದಾರೆ.</p><p>‘ಇದೇ ತಿಂಗಳ 12ರಂದು ನಾನು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆ. ‘ವಿಕಸಿತ ಭಾರತ 2047’ ಎಂಬ ಕಾರ್ಯಕ್ರಮದಲ್ಲಿ ತಪ್ಪಾಗಿ ಹೇಳಿಕೆಯೊಂದನ್ನು ನೀಡಿದ್ದೆ. ಅದಕ್ಕಾಗಿ ನಾನು ರಾಷ್ಟ್ರೀಯ ರಜಪುತ್ ಕರ್ಣಿ ಸೇನಾ ಹಾಗೂ ಮೇವಾಡದ ಜನರ ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.</p><p>‘ನನ್ನ ಹೇಳಿಕೆಯ ಪರಿಣಾಮ ಯಾವುದೇ ಉದ್ದೇಶವಿಲ್ಲದೆ ಹಲವರ ಮನಸ್ಸಿಗೆ ನೋವಾಗಿದೆ. ಅದಕ್ಕಾಗಿ ನಾನು ರಜಪೂತ್ ಸಮುದಾಯದ ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>