<p><strong>ಮುಂಬೈ</strong>: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ತಾಬಾದ್ನಲ್ಲಿರುವ ಮೊಘಲ್ ದೊರೆ ಔರಂಗಜೇಬ್ ಸಮಾಧಿ ತೆರವಿಗೆ ಆಗ್ರಹಿಸಿ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಸಮಾಧಿ ಸುತ್ತಮುತ್ತಲಿನ ಪ್ರದೇಶವನ್ನು ಡ್ರೋನ್ ಹಾರಾಟ ನಿಷೇಧ ವಲಯವನ್ನಾಗಿ ಸರ್ಕಾರ ಪೋಷಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಔರಂಗಜೇಬ್ ಸಮಾಧಿ ತೆರವುಗೊಳಿಸುವ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ಗಳನ್ನು ಪತ್ತೆಹಚ್ಚುವಲ್ಲಿ ಮತ್ತು ಅವುಗಳನ್ನು ಅಳಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. ಇದುವರೆಗೆ 500ಕ್ಕೂ ಹೆಚ್ಚು ಪೋಸ್ಟ್ಗಳನ್ನು ಅಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. </p><p>ಸಂಭಾಜಿನಗರ ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಖುಲ್ತಾಬಾದ್ ಪಟ್ಟಣದಲ್ಲಿರುವ ಔರಂಗಜೇಬ್ನ ಸಮಾಧಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಸೋಮವಾರ ನಾಗ್ಪುರದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. </p><p>ಔರಂಗಜೇಬ್ನ ಸಮಾಧಿ ಇರುವ ಪ್ರದೇಶವನ್ನು ಡ್ರೋನ್ ಹಾರಾಟ ನಿಷೇಧ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾಜ್ಯ ಮೀಸಲು ಪೊಲೀಸ್ ಪಡೆ ಸೇರಿದಂತೆ ಇತರೆ ಸಿಬ್ಬಂದಿಯನ್ನು ಪಟ್ಟಣದಲ್ಲಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿಲೀಪ್ ಸ್ವಾಮಿ ಮಾಹಿತಿ ನೀಡಿದ್ದಾರೆ. </p><p>‘ಯಾರೂ ವದಂತಿಗಳನ್ನು ನಂಬಬಾರದು ಮತ್ತು ಜನರು ಈ ವಿಷಯದ ಬಗ್ಗೆ ಯಾವುದೇ ಮಾಹಿತಿ ಹೊಂದಿದ್ದರೆ ಆಡಳಿತ ಅಥವಾ ಪೊಲೀಸರನ್ನು ಸಂಪರ್ಕಿಸಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಪತ್ತೆಹಚ್ಚಲು ಮತ್ತು ಅವುಗಳನ್ನು ಅಳಿಸುವಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡವು ದಿನದ 24 ಗಂಟೆಯೂ ಕೆಲಸ ಮಾಡುತ್ತಿದೆ’ ಎಂದು ಅವರು ವಿವರಿಸಿದ್ದಾರೆ. </p>.ನಾಗ್ಪುರ ಹಿಂಸಾಚಾರ: ಪರಿಸ್ಥಿತಿ ನಿಯಂತ್ರಣಕ್ಕೆ ಕರ್ಫ್ಯೂ ಜಾರಿ.ಔರಂಗಜೇಬ್ ಗೋರಿಗೆ ಪುಷ್ಪನಮನ: ಚರ್ಚಾಸ್ಪದವಾದ ಪ್ರಕಾಶ್ ಅಂಬೇಡ್ಕರ್ ನಡೆ.ಮಹಾರಾಷ್ಟ್ರ: ಔರಂಗಜೇಬ್ ಪೋಸ್ಟರ್ ಪ್ರದರ್ಶನ, ನಾಲ್ವರ ವಿರುದ್ಧ ಪ್ರಕರಣ ದಾಖಲು.ಔರಂಗಜೇಬ್ ಜಾತ್ಯಾತೀತನಾಗಿರಿಲ್ಲ, 'ಸಂಭಾಜಿನಗರ' ಅನ್ನುವುದು ತಪ್ಪಲ್ಲ: ರಾವುತ್.Nagpur Violence ಯೋಜಿತ ಕೃತ್ಯ,‘ಛಾವಾ’ ಚಿತ್ರದಿಂದ ಔರಂಗಜೇಬ್ ಮೇಲೆ ಸಿಟ್ಟು: CM.ಔರಂಗಜೇಬ್ ಹೊಗಳಿದ ಅಜ್ಮಿ ಉಚ್ಛಾಟಿಸಿ, UPಗೆ ಕರೆತನ್ನಿ; ಚಿಕಿತ್ಸೆ ಲಭ್ಯ: CM ಯೋಗಿ.ಹಿಂದೂಗಳನ್ನು ಪ್ರಚೋದಿಸಲು ಔರಂಗಜೇಬ್, ಟಿಪ್ಪು ಕಟೌಟ್: ಕೆ.ಎಸ್. ಈಶ್ವರಪ್ಪ ಟೀಕೆ.ಶರದ್ ಪವಾರ್ ‘ಹಗರಣಗಳ ಸರದಾರ’, ಉದ್ಧವ್ ‘ಔರಂಗಜೇಬ ಅಭಿಮಾನಿಗಳ ಸಂಘದ ನಾಯಕ’: ಶಾ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ತಾಬಾದ್ನಲ್ಲಿರುವ ಮೊಘಲ್ ದೊರೆ ಔರಂಗಜೇಬ್ ಸಮಾಧಿ ತೆರವಿಗೆ ಆಗ್ರಹಿಸಿ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಸಮಾಧಿ ಸುತ್ತಮುತ್ತಲಿನ ಪ್ರದೇಶವನ್ನು ಡ್ರೋನ್ ಹಾರಾಟ ನಿಷೇಧ ವಲಯವನ್ನಾಗಿ ಸರ್ಕಾರ ಪೋಷಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಔರಂಗಜೇಬ್ ಸಮಾಧಿ ತೆರವುಗೊಳಿಸುವ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ಗಳನ್ನು ಪತ್ತೆಹಚ್ಚುವಲ್ಲಿ ಮತ್ತು ಅವುಗಳನ್ನು ಅಳಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. ಇದುವರೆಗೆ 500ಕ್ಕೂ ಹೆಚ್ಚು ಪೋಸ್ಟ್ಗಳನ್ನು ಅಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. </p><p>ಸಂಭಾಜಿನಗರ ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಖುಲ್ತಾಬಾದ್ ಪಟ್ಟಣದಲ್ಲಿರುವ ಔರಂಗಜೇಬ್ನ ಸಮಾಧಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಸೋಮವಾರ ನಾಗ್ಪುರದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. </p><p>ಔರಂಗಜೇಬ್ನ ಸಮಾಧಿ ಇರುವ ಪ್ರದೇಶವನ್ನು ಡ್ರೋನ್ ಹಾರಾಟ ನಿಷೇಧ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾಜ್ಯ ಮೀಸಲು ಪೊಲೀಸ್ ಪಡೆ ಸೇರಿದಂತೆ ಇತರೆ ಸಿಬ್ಬಂದಿಯನ್ನು ಪಟ್ಟಣದಲ್ಲಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿಲೀಪ್ ಸ್ವಾಮಿ ಮಾಹಿತಿ ನೀಡಿದ್ದಾರೆ. </p><p>‘ಯಾರೂ ವದಂತಿಗಳನ್ನು ನಂಬಬಾರದು ಮತ್ತು ಜನರು ಈ ವಿಷಯದ ಬಗ್ಗೆ ಯಾವುದೇ ಮಾಹಿತಿ ಹೊಂದಿದ್ದರೆ ಆಡಳಿತ ಅಥವಾ ಪೊಲೀಸರನ್ನು ಸಂಪರ್ಕಿಸಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಪತ್ತೆಹಚ್ಚಲು ಮತ್ತು ಅವುಗಳನ್ನು ಅಳಿಸುವಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡವು ದಿನದ 24 ಗಂಟೆಯೂ ಕೆಲಸ ಮಾಡುತ್ತಿದೆ’ ಎಂದು ಅವರು ವಿವರಿಸಿದ್ದಾರೆ. </p>.ನಾಗ್ಪುರ ಹಿಂಸಾಚಾರ: ಪರಿಸ್ಥಿತಿ ನಿಯಂತ್ರಣಕ್ಕೆ ಕರ್ಫ್ಯೂ ಜಾರಿ.ಔರಂಗಜೇಬ್ ಗೋರಿಗೆ ಪುಷ್ಪನಮನ: ಚರ್ಚಾಸ್ಪದವಾದ ಪ್ರಕಾಶ್ ಅಂಬೇಡ್ಕರ್ ನಡೆ.ಮಹಾರಾಷ್ಟ್ರ: ಔರಂಗಜೇಬ್ ಪೋಸ್ಟರ್ ಪ್ರದರ್ಶನ, ನಾಲ್ವರ ವಿರುದ್ಧ ಪ್ರಕರಣ ದಾಖಲು.ಔರಂಗಜೇಬ್ ಜಾತ್ಯಾತೀತನಾಗಿರಿಲ್ಲ, 'ಸಂಭಾಜಿನಗರ' ಅನ್ನುವುದು ತಪ್ಪಲ್ಲ: ರಾವುತ್.Nagpur Violence ಯೋಜಿತ ಕೃತ್ಯ,‘ಛಾವಾ’ ಚಿತ್ರದಿಂದ ಔರಂಗಜೇಬ್ ಮೇಲೆ ಸಿಟ್ಟು: CM.ಔರಂಗಜೇಬ್ ಹೊಗಳಿದ ಅಜ್ಮಿ ಉಚ್ಛಾಟಿಸಿ, UPಗೆ ಕರೆತನ್ನಿ; ಚಿಕಿತ್ಸೆ ಲಭ್ಯ: CM ಯೋಗಿ.ಹಿಂದೂಗಳನ್ನು ಪ್ರಚೋದಿಸಲು ಔರಂಗಜೇಬ್, ಟಿಪ್ಪು ಕಟೌಟ್: ಕೆ.ಎಸ್. ಈಶ್ವರಪ್ಪ ಟೀಕೆ.ಶರದ್ ಪವಾರ್ ‘ಹಗರಣಗಳ ಸರದಾರ’, ಉದ್ಧವ್ ‘ಔರಂಗಜೇಬ ಅಭಿಮಾನಿಗಳ ಸಂಘದ ನಾಯಕ’: ಶಾ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>