<p class="title"><strong>ಮೆಲ್ಬರ್ನ್</strong>: ಕೋವಿಡ್ ಸೋಂಕಿನಿಂದ ದೇಶದ ಪ್ರಜೆಗಳನ್ನು ರಕ್ಷಿಸುವ ದೃಷ್ಟಿಯಿಂದ ಜಗತ್ತಿನ ಜೊತೆಗೆ ಸಂಪರ್ಕ ಕಲ್ಪಿಸುವ ಎಲ್ಲ ಗಡಿಯನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗುವುದು ಎಂದು ಆಸ್ಟ್ರೇಲಿಯಾ ಭಾನುವಾರ ಪ್ರಕಟಿಸಿದೆ.</p>.<p class="title">ಪ್ರಧಾನಿ ಸ್ಕಾಟ್ ಮಾರಿಸನ್ ಈ ತೀರ್ಮಾನವನ್ನು ಪ್ರಕಟಿಸಿದರು. ಸೋಂಕು ಸ್ಥಿತಿ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ನಿಂದಲೂ ಗಡಿ ಬಂದ್ ಆಗಿದೆ. ಕಟ್ಟುನಿಟ್ಟಿನ ನಿಯಮಗಳ ಪಾಲನೆಯೊಂದಿಗೆ ದೇಶದ ಪ್ರಜೆಗಳಿಗಷ್ಟೇ ದೇಶಕ್ಕೆ ಮರಳಲು ಅವಕಾಶವಿದೆ.</p>.<p class="title">ಆಸ್ಟ್ರೇಲಿಯಾ ಭಾರತದಿಂದ ಬರವು ಎಲ್ಲ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಈಗಾಗಲೇ ರದ್ದುಪಡಿಸಿದೆ. ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ತೀವ್ರ ಏರಿಕೆ ಹಿನ್ನೆಲೆಯಲ್ಲಿ ಈ ನಿರ್ಬಂಧವು ಮೇ 15ರವರೆಗೂ ಜಾರಿಯಲ್ಲಿರಲಿದೆ.</p>.<p>ಜಗತ್ತಿನೊಂದಿಗೆ ಸಂಪರ್ಕ ಹೊಂದಬೇಕು ಎಂಬ ಹಸಿವು ಆಸ್ಟ್ರೇಲಿಯನ್ನರಲ್ಲಿ ಸದ್ಯ ಇದೆ ಎಂದು ನಾನು ಭಾವಿಸಿಲ್ಲ. ಒಟ್ಟು ಪರಿಸ್ಥಿತಿಯನ್ನು ನಾವು ಜಾಗರೂಕತೆಯಿಂದ ಗಮನಿಸುತ್ತಿದ್ದೇವೆ ಎಂದು ಮಾರಿಸನ್ ತಿಳಿಸಿದರು.</p>.<p>ನಾಗರಿಕರಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡಿದ ನಂತರವೂ ಜಗತ್ತಿನ ಜೊತೆಗೆ ಮರುಸಂಪರ್ಕ ಹೊಂದುವುದು ಸುರಕ್ಷಿತವೇ ಎಂಬ ಬಗ್ಗೆಯೂ ನಮಗೆ ಅಸ್ಪಷ್ಟತೆಯಿದೆ. ಇದೇ ಕಾರಣದಿಂದ ಅನಿರ್ದಿಷ್ಟಾವಧಿಗೆ ಗಡಿಬಂದ್ ಮಾಡಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮೆಲ್ಬರ್ನ್</strong>: ಕೋವಿಡ್ ಸೋಂಕಿನಿಂದ ದೇಶದ ಪ್ರಜೆಗಳನ್ನು ರಕ್ಷಿಸುವ ದೃಷ್ಟಿಯಿಂದ ಜಗತ್ತಿನ ಜೊತೆಗೆ ಸಂಪರ್ಕ ಕಲ್ಪಿಸುವ ಎಲ್ಲ ಗಡಿಯನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗುವುದು ಎಂದು ಆಸ್ಟ್ರೇಲಿಯಾ ಭಾನುವಾರ ಪ್ರಕಟಿಸಿದೆ.</p>.<p class="title">ಪ್ರಧಾನಿ ಸ್ಕಾಟ್ ಮಾರಿಸನ್ ಈ ತೀರ್ಮಾನವನ್ನು ಪ್ರಕಟಿಸಿದರು. ಸೋಂಕು ಸ್ಥಿತಿ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ನಿಂದಲೂ ಗಡಿ ಬಂದ್ ಆಗಿದೆ. ಕಟ್ಟುನಿಟ್ಟಿನ ನಿಯಮಗಳ ಪಾಲನೆಯೊಂದಿಗೆ ದೇಶದ ಪ್ರಜೆಗಳಿಗಷ್ಟೇ ದೇಶಕ್ಕೆ ಮರಳಲು ಅವಕಾಶವಿದೆ.</p>.<p class="title">ಆಸ್ಟ್ರೇಲಿಯಾ ಭಾರತದಿಂದ ಬರವು ಎಲ್ಲ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಈಗಾಗಲೇ ರದ್ದುಪಡಿಸಿದೆ. ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ತೀವ್ರ ಏರಿಕೆ ಹಿನ್ನೆಲೆಯಲ್ಲಿ ಈ ನಿರ್ಬಂಧವು ಮೇ 15ರವರೆಗೂ ಜಾರಿಯಲ್ಲಿರಲಿದೆ.</p>.<p>ಜಗತ್ತಿನೊಂದಿಗೆ ಸಂಪರ್ಕ ಹೊಂದಬೇಕು ಎಂಬ ಹಸಿವು ಆಸ್ಟ್ರೇಲಿಯನ್ನರಲ್ಲಿ ಸದ್ಯ ಇದೆ ಎಂದು ನಾನು ಭಾವಿಸಿಲ್ಲ. ಒಟ್ಟು ಪರಿಸ್ಥಿತಿಯನ್ನು ನಾವು ಜಾಗರೂಕತೆಯಿಂದ ಗಮನಿಸುತ್ತಿದ್ದೇವೆ ಎಂದು ಮಾರಿಸನ್ ತಿಳಿಸಿದರು.</p>.<p>ನಾಗರಿಕರಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡಿದ ನಂತರವೂ ಜಗತ್ತಿನ ಜೊತೆಗೆ ಮರುಸಂಪರ್ಕ ಹೊಂದುವುದು ಸುರಕ್ಷಿತವೇ ಎಂಬ ಬಗ್ಗೆಯೂ ನಮಗೆ ಅಸ್ಪಷ್ಟತೆಯಿದೆ. ಇದೇ ಕಾರಣದಿಂದ ಅನಿರ್ದಿಷ್ಟಾವಧಿಗೆ ಗಡಿಬಂದ್ ಮಾಡಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>