<p><strong>ನವದೆಹಲಿ:</strong> ಮರಣಕ್ಕೂ ಮುನ್ನ ವ್ಯಕ್ತಿ ನೀಡುವ ಹೇಳಿಕೆ ಪ್ರಾಮಾಣಿಕವಾಗಿದ್ದಲ್ಲಿ ಅದು ನ್ಯಾಯಾಲಯದ ವಿಶ್ವಾಸ ಹೆಚ್ಚಿಸುತ್ತದೆ. ಯಾವುದೇ ದೃಢೀಕರಣವಿಲ್ಲದೆಯೇ, ಇಂತಹ ವಿಶ್ವಾಸಾರ್ಹ ‘ಮರಣಪೂರ್ವ ಹೇಳಿಕೆಯನ್ನೇ ಅಪರಾಧ ನಿರ್ಣಯಕ್ಕೆ ಆಧಾರವಾಗಿ ಪರಿಗಣಿಸಬಹುದು‘ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>‘ನ್ಯಾಯಾಲಯವು ಮರಣಪೂರ್ವ ಹೇಳಿಕೆಯನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಇಂತಹ ಹೇಳಿಕೆಯು ದೃಢವಾಗಿಯು, ನಂಬಲರ್ಹವಾಗಿಯೂ ಹಾಗೂ ಯಾರದೋ ನಿರ್ದೇಶನವಿಲ್ಲದೇ ನೀಡಲಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಹಾಗೂ ಉಜ್ಜಲ್ ಭುಯಾನ್ ಅವರಿದ್ದ ನ್ಯಾಯಪೀಠ ಹೇಳಿದೆ.</p>.<p>ಪತ್ನಿಯನ್ನು ಕೊಲೆ ಮಾಡಿದ್ದ, ಸೇನೆಯ ಮಾಜಿ ಸಿಬ್ಬಂದಿ ಅಪರಾಧಿ ಎಂದು ತೀರ್ಮಾನಿಸಿದ್ದನ್ನು ಎತ್ತಿ ಹಿಡಿದು ಮೇ 15ರಂದು ಹೊರಡಿಸಿರುವ ಆದೇಶದಲ್ಲಿ ನ್ಯಾಯಪೀಠ ಈ ಮಾತು ಹೇಳಿದೆ.</p>.<p>ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ 22 ವರ್ಷಗಳ ಹಿಂದೆ ಈ ಕೊಲೆ ನಡೆದಿತ್ತು. ಸೇನೆಯ ಮಾಜಿ ಸಿಬ್ಬಂದಿಯ ಪತ್ನಿ ಪೊಲೀಸ್ ಕಾನ್ಸ್ಟೆಬಲ್ ಆಗಿದ್ದರು.</p>.<p>‘ಯಾವುದೇ ವ್ಯಕ್ತಿ ನೀಡುವ ಮರಣಪೂರ್ವ ಹೇಳಿಕೆಯನ್ನು ಒಪ್ಪಿಕೊಳ್ಳುವ ಮುನ್ನ, ಆ ಹೇಳಿಕೆಯನ್ನು ಸ್ವಯಂಪ್ರೇರಣೆಯಿಂದ ನೀಡಲಾಗಿದೆ ಎಂಬ ಬಗ್ಗೆ ನ್ಯಾಯಾಲಯ ತೃಪ್ತಿ ವ್ಯಕ್ತಪಡಿಸಬೇಕು. ಈ ಎಲ್ಲ ಅಂಶಗಳು ದೃಢಪಟ್ಟಾಗ, ಅಂತಹ ಹೇಳಿಕೆಗೆ ಹೆಚ್ಚು ಮಾನ್ಯತೆ ಸಿಗುತ್ತದೆ. ಈ ಹೇಳಿಕೆಯೇ ಅಪರಾಧ ನಿರ್ಣಯಕ್ಕೆ ಆಧಾರವಾಗುತ್ತದೆ’ ಎಂದೂ ನ್ಯಾಯಪೀಠ ಹೇಳಿದೆ. </p>.<p>ವಿಚಾರಣಾ ನ್ಯಾಯಾಲಯವು ಸೇನೆಯ ಮಾಜಿ ಸಿಬ್ಬಂದಿ ತಪ್ಪಿತಸ್ಥ ಎಂದು 2008ರಲ್ಲಿ ಆದೇಶಿಸಿತ್ತು. ಆತನಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿತ್ತು.</p>.<p>ವಿಚಾರಣಾ ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಶಿಕ್ಷೆಯನ್ನು ಅಮಾನತಿನಲ್ಲಿ ಇಟ್ಟು, 2016ರಲ್ಲಿ ಜಾಮೀನು ನೀಡಿತ್ತು.</p>.<p>ಆದರೆ, ಆತನ ಪತ್ನಿ ನೀಡಿದ್ದ ಮರಣಪೂರ್ವ ಹೇಳಿಕೆಯನ್ನು ಒಪ್ಪಿಕೊಂಡಿದ್ದ ಸುಪ್ರೀಂ ಕೋರ್ಟ್, ಅದನ್ನೇ ಸಾಕ್ಷ್ಯವಾಗಿ ಪರಿಗಣಿಸಿತ್ತು. </p>.<p>‘ಮರಣಪೂರ್ವ ಹೇಳಿಕೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ನಂತರ, ಈ ಪ್ರಕರಣದಲ್ಲಿ ಅರ್ಜಿದಾರ ಅಪರಾಧ ಎಸಗಿರುವುದು ಸ್ಪಷ್ಟವಾಗಿದ್ದು, ಆತ ತಪ್ಪಿತಸ್ಥ ಎಂಬುದಾಗಿ ಯಾವುದೇ ಸಂಶಯಕ್ಕೆ ಎಡೆಮಾಡದಂತೆ ಸಾಬೀತುಪಡಿಸಲಾಗಿದೆ’ ಎಂದು ಸುಪ್ರೀಂಕೋರ್ಟ್ ಮೇ 15ರಂದು ನೀಡಿದ ಆದೇಶದಲ್ಲಿ ಹೇಳಿದೆ.</p>.<p>ಅಲ್ಲದೇ, ಎರಡು ವಾರದ ಒಳಗಾಗಿ ಶರಣಗಾಗಿ, ಶಿಕ್ಷೆ ಅನುಭವಿಸುವಂತೆಯೂ ಅರ್ಜಿದಾರಗೆ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮರಣಕ್ಕೂ ಮುನ್ನ ವ್ಯಕ್ತಿ ನೀಡುವ ಹೇಳಿಕೆ ಪ್ರಾಮಾಣಿಕವಾಗಿದ್ದಲ್ಲಿ ಅದು ನ್ಯಾಯಾಲಯದ ವಿಶ್ವಾಸ ಹೆಚ್ಚಿಸುತ್ತದೆ. ಯಾವುದೇ ದೃಢೀಕರಣವಿಲ್ಲದೆಯೇ, ಇಂತಹ ವಿಶ್ವಾಸಾರ್ಹ ‘ಮರಣಪೂರ್ವ ಹೇಳಿಕೆಯನ್ನೇ ಅಪರಾಧ ನಿರ್ಣಯಕ್ಕೆ ಆಧಾರವಾಗಿ ಪರಿಗಣಿಸಬಹುದು‘ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>‘ನ್ಯಾಯಾಲಯವು ಮರಣಪೂರ್ವ ಹೇಳಿಕೆಯನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಇಂತಹ ಹೇಳಿಕೆಯು ದೃಢವಾಗಿಯು, ನಂಬಲರ್ಹವಾಗಿಯೂ ಹಾಗೂ ಯಾರದೋ ನಿರ್ದೇಶನವಿಲ್ಲದೇ ನೀಡಲಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಹಾಗೂ ಉಜ್ಜಲ್ ಭುಯಾನ್ ಅವರಿದ್ದ ನ್ಯಾಯಪೀಠ ಹೇಳಿದೆ.</p>.<p>ಪತ್ನಿಯನ್ನು ಕೊಲೆ ಮಾಡಿದ್ದ, ಸೇನೆಯ ಮಾಜಿ ಸಿಬ್ಬಂದಿ ಅಪರಾಧಿ ಎಂದು ತೀರ್ಮಾನಿಸಿದ್ದನ್ನು ಎತ್ತಿ ಹಿಡಿದು ಮೇ 15ರಂದು ಹೊರಡಿಸಿರುವ ಆದೇಶದಲ್ಲಿ ನ್ಯಾಯಪೀಠ ಈ ಮಾತು ಹೇಳಿದೆ.</p>.<p>ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ 22 ವರ್ಷಗಳ ಹಿಂದೆ ಈ ಕೊಲೆ ನಡೆದಿತ್ತು. ಸೇನೆಯ ಮಾಜಿ ಸಿಬ್ಬಂದಿಯ ಪತ್ನಿ ಪೊಲೀಸ್ ಕಾನ್ಸ್ಟೆಬಲ್ ಆಗಿದ್ದರು.</p>.<p>‘ಯಾವುದೇ ವ್ಯಕ್ತಿ ನೀಡುವ ಮರಣಪೂರ್ವ ಹೇಳಿಕೆಯನ್ನು ಒಪ್ಪಿಕೊಳ್ಳುವ ಮುನ್ನ, ಆ ಹೇಳಿಕೆಯನ್ನು ಸ್ವಯಂಪ್ರೇರಣೆಯಿಂದ ನೀಡಲಾಗಿದೆ ಎಂಬ ಬಗ್ಗೆ ನ್ಯಾಯಾಲಯ ತೃಪ್ತಿ ವ್ಯಕ್ತಪಡಿಸಬೇಕು. ಈ ಎಲ್ಲ ಅಂಶಗಳು ದೃಢಪಟ್ಟಾಗ, ಅಂತಹ ಹೇಳಿಕೆಗೆ ಹೆಚ್ಚು ಮಾನ್ಯತೆ ಸಿಗುತ್ತದೆ. ಈ ಹೇಳಿಕೆಯೇ ಅಪರಾಧ ನಿರ್ಣಯಕ್ಕೆ ಆಧಾರವಾಗುತ್ತದೆ’ ಎಂದೂ ನ್ಯಾಯಪೀಠ ಹೇಳಿದೆ. </p>.<p>ವಿಚಾರಣಾ ನ್ಯಾಯಾಲಯವು ಸೇನೆಯ ಮಾಜಿ ಸಿಬ್ಬಂದಿ ತಪ್ಪಿತಸ್ಥ ಎಂದು 2008ರಲ್ಲಿ ಆದೇಶಿಸಿತ್ತು. ಆತನಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿತ್ತು.</p>.<p>ವಿಚಾರಣಾ ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ಈ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಶಿಕ್ಷೆಯನ್ನು ಅಮಾನತಿನಲ್ಲಿ ಇಟ್ಟು, 2016ರಲ್ಲಿ ಜಾಮೀನು ನೀಡಿತ್ತು.</p>.<p>ಆದರೆ, ಆತನ ಪತ್ನಿ ನೀಡಿದ್ದ ಮರಣಪೂರ್ವ ಹೇಳಿಕೆಯನ್ನು ಒಪ್ಪಿಕೊಂಡಿದ್ದ ಸುಪ್ರೀಂ ಕೋರ್ಟ್, ಅದನ್ನೇ ಸಾಕ್ಷ್ಯವಾಗಿ ಪರಿಗಣಿಸಿತ್ತು. </p>.<p>‘ಮರಣಪೂರ್ವ ಹೇಳಿಕೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ನಂತರ, ಈ ಪ್ರಕರಣದಲ್ಲಿ ಅರ್ಜಿದಾರ ಅಪರಾಧ ಎಸಗಿರುವುದು ಸ್ಪಷ್ಟವಾಗಿದ್ದು, ಆತ ತಪ್ಪಿತಸ್ಥ ಎಂಬುದಾಗಿ ಯಾವುದೇ ಸಂಶಯಕ್ಕೆ ಎಡೆಮಾಡದಂತೆ ಸಾಬೀತುಪಡಿಸಲಾಗಿದೆ’ ಎಂದು ಸುಪ್ರೀಂಕೋರ್ಟ್ ಮೇ 15ರಂದು ನೀಡಿದ ಆದೇಶದಲ್ಲಿ ಹೇಳಿದೆ.</p>.<p>ಅಲ್ಲದೇ, ಎರಡು ವಾರದ ಒಳಗಾಗಿ ಶರಣಗಾಗಿ, ಶಿಕ್ಷೆ ಅನುಭವಿಸುವಂತೆಯೂ ಅರ್ಜಿದಾರಗೆ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>